AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿರಾರು ಕೋಟಿ ರೂಪಾಯಿ ಗಳಿಸಿದ ‘ಪಠಾಣ್​’ ಚಿತ್ರದಿಂದ ಶಾರುಖ್​ ಖಾನ್​ಗೆ ಸಿಕ್ಕ ಹಣ ಎಷ್ಟು?

Shah Rukh Khan Remuneration: ‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್ ಅವರು ಸಂಭಾವನೆ ಪಡೆದಿರಲಿಲ್ಲ. ಬಂದ ಲಾಭದಲ್ಲಿ ಶೇಕಡ ಇಂತಿಷ್ಟು ಹಣ ತಮಗೆ ಸೇರಬೇಕು ಎಂದು ಅವರು ಒಪ್ಪಂದ ಮಾಡಿಕೊಂಡಿದ್ದರು.

ಸಾವಿರಾರು ಕೋಟಿ ರೂಪಾಯಿ ಗಳಿಸಿದ ‘ಪಠಾಣ್​’ ಚಿತ್ರದಿಂದ ಶಾರುಖ್​ ಖಾನ್​ಗೆ ಸಿಕ್ಕ ಹಣ ಎಷ್ಟು?
ಶಾರುಖ್ ಖಾನ್
ಮದನ್​ ಕುಮಾರ್​
|

Updated on:Apr 17, 2023 | 10:52 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಹಲವು ವರ್ಷಗಳಿಂದ ಸೋಲಿನ ಸುಳಿಗೆ ಸಿಲುಕಿದ್ದ ಅವರಿಗೆ ಈ ವರ್ಷದ ಆರಂಭದಲ್ಲೇ ‘ಪಠಾಣ್​’ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿತು. ಈ ಸಿನಿಮಾ ವಿಶ್ವಾದ್ಯಂತ ಬರೋಬ್ಬರಿ 1000 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ‘ಯಶ್​ ರಾಜ್​ ಫಿಲ್ಮ್ಸ್​’ (Yash Raj Films) ಸಂಸ್ಥೆಗೆ ಈ ಸಿನಿಮಾದಿಂದ ಒಳ್ಳೆಯ ಲಾಭ ಆಯಿತು. ಬಾಕ್ಸ್​ ಆಫೀಸ್​ ಮಾತ್ರವಲ್ಲದೇ ಆಡಿಯೋ ಹಕ್ಕುಗಳ ಮಾರಾಟದಿಂದಲೂ ಬಹುಕೋಟಿ ರೂಪಾಯಿ ಬಿಸ್ನೆಸ್​ ಆಯಿತು. ಒಟ್ಟಾರೆಯಾಗಿ ಪಠಾಣ್​’ (Pathaan) ಚಿತ್ರದಿಂದ ಶಾರುಖ್​ ಖಾನ್​ ಅವರ ಜೇಬು ಸೇರಿದ ಹಣ ಎಷ್ಟು ಎಂಬ ಬಗ್ಗೆ ‘ಬಾಲಿವುಡ್ ಹಂಗಾಮಾ’ ವರದಿ ಮಾಡಿದೆ. ಅದರ ಪ್ರಕಾರ ಶಾರುಖ್​ ಖಾನ್​ ಅವರು ಬರೋಬ್ಬರಿ 200 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ.

‘ಪಠಾಣ್​’ ಚಿತ್ರಕ್ಕಾಗಿ ಶಾರುಖ್​ ಖಾನ್ ಅವರು ಸಂಭಾವನೆ ಪಡೆದಿರಲಿಲ್ಲ. ಬಂದ ಲಾಭದಲ್ಲಿ ಶೇಕಡ 60ರಷ್ಟು ತಮಗೆ ಸೇರಬೇಕು ಎಂದು ಅವರು ಒಪ್ಪಂದ ಮಾಡಿಕೊಂಡಿದ್ದರು. ಆ ನಿರ್ಧಾರದಿಂದ ಶಾರುಖ್​ಗೆ ಭರ್ಜರಿ ಲಾಭ ಆಗಿದೆ. ಬಂಡವಾಳ ಕಳೆದು, ಭಾರತ ಹಾಗೂ ವಿದೇಶದಲ್ಲಿ ಸಿನಿಮಾವನ್ನು ವಿತರಣೆ ಮಾಡಿದವರ ಪಾಲನ್ನೂ ಬಿಟ್ಟು ಯಶ್​ ರಾಜ್​ ಸಂಸ್ಥೆಗೆ ಅಂದಾಜು 333 ಕೋಟಿ ರೂಪಾಯಿ ಲಾಭ ಸಿಕ್ಕಿದೆ. ಅದರಲ್ಲಿ ಶೇಕಡ 60 ಪಡೆದ ಶಾರುಖ್​ ಖಾನ್​ ಅವರು ಸುಮಾರು 200 ಕೋಟಿ ರೂಪಾಯಿಯನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ.

ಇದನ್ನೂ ಓದಿ: Time 100 Reader Poll: ವಿಶ್ವದ ನೂರು ಪ್ರಭಾವಿ ವ್ಯಕ್ತಿಗಳಲ್ಲಿ ಶಾರುಖ್​ ಖಾನ್​ ನಂ.1; ಮೆಸ್ಸಿಯನ್ನೂ ಮೀರಿಸಿದ ‘ಪಠಾಣ್​’ ಹೀರೋ

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ

ಎಲ್ಲ ಕಲಾವಿದರ ಸಂಭಾವನೆಯನ್ನೂ ಸೇರಿ ಒಟ್ಟು 270 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಪಠಾಣ್​’ ಸಿನಿಮಾವನ್ನು ನಿರ್ಮಾಣ ಮಾಡಲಾಗಿತ್ತು. ನಿರ್ದೇಶಕ ಸಿದ್ದಾರ್ಥ್​ ಆನಂದ್​ ಅವರು ಬಹಳ ಅದ್ದೂರಿಯಾಗಿ ಈ ಚಿತ್ರವನ್ನು ತೆರೆಗೆ ತಂದರು. ಶಾರುಖ್​ ಖಾನ್​ ಜೊತೆ ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ, ಡಿಂಪಲ್​ ಕಪಾಡಿಯಾ ಮುಂತಾದ ಕಲಾವಿದರ ಪಾತ್ರಗಳು ಕೂಡ ಸಖತ್​ ಹೈಲೈಟ್​ ಆದವು. ಹಾಡುಗಳಂತೂ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದುಕೊಂಡವು.

ಇದನ್ನೂ ಓದಿ: ‘ಪಠಾಣ್​’ ಚಿತ್ರದಿಂದ ಶಾರುಖ್​​ ಗೆದ್ದಿದ್ದಕ್ಕೆ ಎಲ್ಲರಿಗೂ ಖುಷಿ ಆಗಿದ್ದೇಕೆ? ರಾಜ್​ಕುಮಾರ್​ ರಾವ್​ ನೀಡಿದ ಉತ್ತರ ಇಲ್ಲಿದೆ

‘ಪಠಾಣ್​’ ಸಿನಿಮಾ ಗೆದ್ದ ಬಳಿಕ ಶಾರುಖ್​ ಖಾನ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಮುಂಬರುವ ಸಿನಿಮಾಗಳ ಮೇಲೆ ಎಲ್ಲಿಲ್ಲದಷ್ಟು ನಿರೀಕ್ಷೆ ಹುಟ್ಟಿದೆ. ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ಶಾರುಖ್​ ಖಾನ್​ ಅವರು ‘ಡಂಕಿ’ ಸಿನಿಮಾ ಮಾಡುತ್ತಿದ್ದಾರೆ. ತಮಿಳಿನ ನಿರ್ದೇಶಕ ಅಟ್ಲಿ ಕುಮಾರ್​ ಜೊತೆ ‘ಜವಾನ್​’ ಸಿನಿಮಾ ಮಾಡುತ್ತಿದ್ದಾರೆ. ಈ ಎರಡೂ ಚಿತ್ರಗಳು ಶಾರುಖ್​ ವೃತ್ತಿ ಜೀವನಕ್ಕೆ ಇನ್ನಷ್ಟು ಮೈಲೇಜ್​ ನೀಡುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:52 pm, Mon, 17 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್