AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

Shah Rukh Khan: ಈ ಎಲ್ಲ ಸ್ಟಾರ್​ ನಟರು ಅವರವರ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅದರ ನಡುವೆಯೂ ಸಮಯ ಮಾಡಿಕೊಂಡು ಸೌದಿ ಅರೇಬಿಯಾದ ಸಚಿವರನ್ನು ಭೇಟಿ ಮಾಡಿದ್ದಾರೆ.

ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?
ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಅಕ್ಷಯ್​ ಕುಮಾರ್​
TV9 Web
| Edited By: |

Updated on: Apr 03, 2022 | 12:07 PM

Share

ಬಾಲಿವುಡ್​ ನಟರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಅದರಲ್ಲೂ ಅರಬ್​ ರಾಷ್ಟ್ರಗಳಲ್ಲಿ ಹೆಚ್ಚಾಗಿ ಬಾಲಿವುಡ್​ ಸಿನಿಮಾಗಳನ್ನು ನೋಡುತ್ತಾರೆ. ಸೌದಿ ಅರೇಬಿಯಾಕ್ಕೆ ಆಗಾಗ ಬಿ-ಟೌನ್​ ತಾರೆಯರು ಭೇಟಿ ನೀಡುತ್ತಾರೆ. ಅದೇ ರೀತಿ ಸೌದಿ ಅರೇಬಿಯಾದ (Saudi Arabia) ಗಣ್ಯರು ಮುಂಬೈಗೆ ಬಂದರೆ ಹಿಂದಿ ಚಿತ್ರರಂಗ ಸೆಲೆಬ್ರಿಟಿಗಳನ್ನು ಭೇಟಿ ಆಗುತ್ತಾರೆ. ಈಗ ಸೌದಿ ಸಚಿವರ ಜೊತೆ ಶಾರುಖ್​ ಖಾನ್​ (Shah Rukh Khan) ಪೋಸ್​ ನೀಡಿರುವ ಫೋಟೋ ವೈರಲ್​ ಆಗಿದೆ. ಶಾರುಖ್​ ಖಾನ್​ ಮಾತ್ರವಲ್ಲದೇ ಸಲ್ಮಾನ್​ ಖಾನ್​, ಅಕ್ಷಯ್​ ಕುಮಾರ್​ (Akshay Kumar), ಸೈಫ್​ ಅಲಿ ಖಾನ್​ ಕೂಡ ಸೌದಿ ಸಚಿವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ಅಷ್ಟಕ್ಕೂ ಇವರೆಲ್ಲ ಭೇಟಿ ಆಗಿದ್ದು ಎಲ್ಲಿ? ಯಾವ ಉದ್ದೇಶಕ್ಕೆ ಈ ಸಮ್ಮಿಲನ ಆಗಿದೆ? ಈ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಮೂಡಿದೆ. ಆ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ..

ಸೌದಿ ಅರೇಬಿಯಾ ರೆಡ್​ ಸೀ ಫಿಲ್ಮ್​ ಫೆಸ್ಟಿವಲ್​ ಅಧ್ಯಕ್ಷ ಮೊಹಮ್ಮದ್​ ಅಲ್​ ಟರ್ಕಿ ಅವರಿಗಾಗಿ ಶಾರುಖ್​ ಖಾನ್​ ಒಂದು ಔತಣಕೂಟ ಏರ್ಪಡಿಸಿದ್ದರು. ಶಾರುಖ್​ ನಿವಾಸ ಮನ್ನತ್​ನಲ್ಲಿ ಈ ಪಾರ್ಟಿ ನಡೆದಿದೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಮೊಹಮ್ಮದ್​ ಅಲ್​ ಟರ್ಕಿ ಅವರು ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ‘ಭಾರತದಲ್ಲಿರುವ ನನ್ನ ಸಹೋದರ ಶಾರುಖ್​ ಖಾನ್​ ಅವರಿಂದ ರಂಜಾನ್​ ಹಬ್ಬದ ಶುಭಾಶಯಗಳು’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ.

ಸೌದಿ ಅರೇಬಿಯಾದ ಸಾಂಸ್ಕೃತಿ ಸಚಿವ ಫರ್ಹಾನ್​ ಅಲ್​ಸೌದ್​ ಜೊತೆ ಕೂಡ ಬಾಲಿವುಡ್​ ಮಂದಿ ಕಾಲ ಕಳೆದಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ಫರ್ಹಾನ್​ ಅಲ್​ಸೌದ್ ಅವರು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ಸಲ್ಮಾನ್​ ಖಾನ್​, ಸೈಫ್​ ಅಲಿ ಖಾನ್​, ಅಕ್ಷಯ್​ ಕುಮಾರ್​ ಮುಂತಾದವರು ಸಹ ಅವರನ್ನು ಭೇಟಿ ಆಗಿದ್ದಾರೆ. ಆ ಫೋಟೋಗಳು ಕೂಡ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಇವರೆಲ್ಲರೂ ಶಾರುಖ್​ ನಿವಾಸ ಮನ್ನತ್​ನಲ್ಲಿ ಏರ್ಪಡಿಸಿದ್ದ ಔತಣ ಕೂಟದಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ.

‘ಬಾಲಿವುಡ್​ ಸೂಪರ್​ ಸ್ಟಾರ್​ಗಳಾದ ಸಲ್ಮಾನ್​ ಖಾನ್​, ಶಾರುಖ್​ ಖಾನ್​, ಅಕ್ಷಯ್​ ಕುಮಾರ್​, ಸೈಫ್​ ಅಲಿ ಖಾನ್​ ಜೊತೆ ಸಿನಿಮಾ ಜಗತ್ತಿನ ಸುಂದರ ವಿಷಯಗಳ ಬಗ್ಗೆ ಸಂವಾದ ಮಾಡಿದ್ದಕ್ಕೆ ಖುಷಿ ಆಯಿತು’ ಎಂದು ಫರ್ಹಾನ್​ ಅಲ್​ಸೌದ್ ಅವರು ಅವರು ಬರೆದುಕೊಂಡಿದ್ದಾರೆ. ಈ ಎಲ್ಲ ಸ್ಟಾರ್​ ನಟರು ಅವರವರ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅದರ ನಡುವೆಯೂ ಸಮಯ ಮಾಡಿಕೊಂಡು ಸೌದಿ ಅರೇಬಿಯಾದ ಸಚಿವರನ್ನು ಭೇಟಿ ಮಾಡಿದ್ದಾರೆ. ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ ಶೂಟಿಂಗ್​ ಸಲುಗಾಗಿ ಸ್ಪೇನ್​ಗೆ ತೆರಳಿದ್ದರು. ಇತ್ತೀಚೆಗಷ್ಟೇ ಅವರು ಭಾರತಕ್ಕೆ ವಾಪಸ್​ ಬಂದಿದ್ದಾರೆ.

ಶಾರುಖ್​ ಖಾನ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರನ್ನು ವಿದೇಶದಲ್ಲಿ ಕೋಟ್ಯಂತರ ಜನರು ಇಷ್ಟಪಡುತ್ತಾರೆ. ಶಾರುಖ್​ ಖಾನ್​ ಎಂದರೆ ದುಬೈನಲ್ಲಿನ ಜನರಿಗೂ ಸಖತ್​ ಪ್ರೀತಿ. ಅದೇ ರೀತಿ ಶಾರುಖ್​ ಅವರಿಗೂ ದುಬೈ ಬಗ್ಗೆ ವಿಶೇಷ ಒಲವು ಇದೆ. ಅಲ್ಲಿನ ಪ್ರವಾಸಿ ತಾಣಗಳು ಅವರಿಗೆ ಇಷ್ಟ. ಆ ಕಾರಣದಿಂದ ಅವರನ್ನು ದುಬೈ ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ಇತ್ತೀಚೆಗೆ ಆಯ್ಕೆ ಮಾಡಲಾಯಿತು. ಅದರ ಭಾಗವಾಗಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ದುಬೈನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಹಾಡಿ ಹೊಗಳಲಾಗಿತ್ತು. ಜೊತೆಗೆ, ದುಬೈ ಮಂದಿಗೆ ಶಾರುಖ್​ ಬಗ್ಗೆ ಎಷ್ಟು ಅಭಿಮಾನ ಇದೆ ಎಂಬುದನ್ನು ತೋರಿಸಲಾಗಿತ್ತು.

ಇದನ್ನೂ ಓದಿ:

ಶಾರುಖ್​ ಖಾನ್​ ಹೊಸ ಲುಕ್​ ನೋಡಿ ವಾವ್​ ಎಂದ ಫ್ಯಾನ್ಸ್​; ಇಲ್ಲಿವೆ ಫೋಟೋಗಳು

8 ಪ್ಯಾಕ್​ ಅವತಾರದಲ್ಲಿ ಬಂದ ಶಾರುಖ್​ ಖಾನ್​; ಮಸ್ತ್​ ಫೋಟೋ ನೋಡಿ ಫ್ಯಾನ್ಸ್​ ಹೇಳಿದ್ದೇನು?

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?