AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ನೀಡಿಲ್ಲ ಆಹ್ವಾನ

ಬಾಲಿವುಡ್​ನಲ್ಲಿ ಶಾರುಖ್​ ಖಾನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಈ ಮೂವರಿಗೆ ಸ್ಥಾನ ಸಿಕ್ಕಿಲ್ಲ. ಅಷ್ಟೇ ಅಲ್ಲದೇ, ಇನ್ನೂ ಅನೇಕ ಸೆಲೆಬ್ರಿಟಿಗಳಿಗೂ ಆಹ್ವಾನ ಪತ್ರಿಕೆ ತಲುಪಿಲ್ಲ.

ರಾಮ ಮಂದಿರ ಉದ್ಘಾಟನೆ: ಶಾರುಖ್​, ಸಲ್ಮಾನ್​, ಆಮಿರ್​ ಖಾನ್​ಗೆ ನೀಡಿಲ್ಲ ಆಹ್ವಾನ
ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Jan 19, 2024 | 4:21 PM

Share

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಉದ್ಘಾಟನೆ (Ram Mandir Inauguration) ನಡೆಯಲಿದೆ. ಅಂದು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹಲವು ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದೆ. ಅನೇಕ ರಾಜಕಾರಣಿಗಳು, ಉದ್ಯಮಿಗಳು ಹಾಗೂ ಸಿನಿಮಾ ನಟ-ನಟಿಯರ ಹೆಸರುಗಳು ಆಹ್ವಾನಿತರ ಪಟ್ಟಿಯಲ್ಲಿ ಇವೆ. ಈಗಾಗಲೇ ಆಹ್ವಾನ ಪತ್ರಿಕೆಯ ಫೋಟೋ ವೈರಲ್​ ಆಗಿದೆ. ಈ ನಡುವೆ ಭಾರತೀಯ ಚಿತ್ರರಂಗದ ಕೆಲವು ಪ್ರಮುಖ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಸಲ್ಮಾನ್​ ಖಾನ್​ (Salman Khan), ಆಮಿರ್​ ಖಾನ್​, ಶಾರುಖ್​ ಖಾನ್​ (Shah Rukh Khan) ಮುಂತಾದ ನಟರನ್ನು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಸುದ್ದಿಯಾಗಿದೆ. ಆಹ್ವಾನಿತರ ಪಟ್ಟಿಯಲ್ಲಿ ಈ ಸೆಲೆಬ್ರಿಟಿಗಳ ಹೆಸರು ಕಾಣಿಸಿಲ್ಲ.

ಬಾಲಿವುಡ್​ನಲ್ಲಿ ಶಾರುಖ್​ ಖಾನ್​, ಆಮಿರ್​ ಖಾನ್​, ಸಲ್ಮಾನ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಈ ಮೂವರಿಗೆ ಸ್ಥಾನ ಸಿಕ್ಕಿಲ್ಲ. ಅಷ್ಟೇ ಅಲ್ಲದೇ, ಇನ್ನೂ ಅನೇಕ ಸೆಲೆಬ್ರಿಟಿಗಳಿಗೂ ಆಹ್ವಾನ ಪತ್ರಿಕೆ ತಲುಪಿಲ್ಲ. ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಇದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರಕ್ಕೆ 1 ಕೆಜಿ ಚಿನ್ನ ನೀಡಿದ ಕನ್ನಡಿಗ

ಹಿಂದಿ ಚಿತ್ರರಂಗದ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರನ್ನು ಆಹ್ವಾನಿಸಲಾಗಿದೆ. ಆದರೆ ಅವರ ಸೊಸೆ, ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ಗೆ ಆಹ್ವಾನ ನೀಡಿಲ್ಲ. ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್​, ಕರೀನಾ ಕಪೂರ್​ ಖಾನ್​, ಸೈಫ್​ ಅಲಿ ಖಾನ್​, ಕರಣ್​ ಜೋಹರ್​, ಶಿಲ್ಪಾ ಶೆಟ್ಟಿ, ಸಂಜಯ್ ದತ್​ ಮುಂತಾದ ಕಲಾವಿದರಿಗೂ ಆಹ್ವಾನ ತಲುಪಿಲ್ಲ. ಅಂತಿಮವಾಗಿ ಯಾವೆಲ್ಲ ಸೆಲೆಬ್ರಿಟಿಗಳು ಈ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಾಯಣ ಆಧಾರಿತ ನೃತ್ಯ ಪ್ರದರ್ಶನ ಮಾಡಲಿರುವ ಹೇಮಾ ಮಾಲಿನಿ

ಅಕ್ಷಯ್​ ಕುಮಾರ್​, ರಜನಿಕಾಂತ್​, ಆಯುಷ್ಮಾನ್​ ಖುರಾನಾ, ಕಂಗನಾ ರಣಾವತ್​, ಆಲಿಯಾ ಭಟ್​, ರಣಬೀರ್​ ಕಪೂರ್​, ರಣದೀಪ್​ ಹೂಡಾ, ಅನುಷ್ಕಾ ಶರ್ಮಾ, ರಜನಿಕಾಂತ್​, ಅನುಪಮ್​ ಖೇರ್​, ಮಾಧುರಿ ದೀಕ್ಷಿತ್​, ರಿಷಬ್​ ಶೆಟ್ಟಿ, ಯಶ್​, ಅಜಯ್​ ದೇವಗನ್​, ಪ್ರಭಾಸ್​, ರಾಮ್​ ಚರಣ್​, ಸನ್ನಿ ಡಿಯೋಲ್​, ಮೋಹನ್​ಲಾಲ್​, ಸಂಜಯ್​ ಲೀಲಾ ಬನ್ಸಾಲಿ, ಚಿರಂಜೀವಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ತಲುಪಿರುವ ಬಗ್ಗೆ ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ