AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಿನಿಮಾದಲ್ಲಿ ಸಲ್ಮಾನ್​, ಶಾರುಖ್​, ಹೃತಿಕ್​; ‘ಅವೆಂಜರ್ಸ್​ ಎಂಡ್​ಗೇಮ್​’ ರೀತಿ ಬಾಲಿವುಡ್​ ಪ್ಲ್ಯಾನ್​

ಬಾಲಿವುಡ್​ನ ಮೂವರು ಸೂಪರ್​ ಸ್ಟಾರ್​ ನಟರು ಒಂದೇ ಸಿನಿಮಾದಲ್ಲಿ ನಟಿಸುವಂತೆ ಸ್ಕ್ರಿಪ್ಟ್​ ಸಿದ್ಧವಾಗುತ್ತಿದೆ. ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯ ಆದಿತ್ಯ ಚೋಪ್ರಾ ಅವರು ಈ ದೈತ್ಯ ಪ್ರಾಜೆಕ್ಟ್​ಗೆ ಬಂಡವಾಳ ಹೂಡಲಿದ್ದಾರೆ.

ಒಂದೇ ಸಿನಿಮಾದಲ್ಲಿ ಸಲ್ಮಾನ್​, ಶಾರುಖ್​, ಹೃತಿಕ್​; ‘ಅವೆಂಜರ್ಸ್​ ಎಂಡ್​ಗೇಮ್​’ ರೀತಿ ಬಾಲಿವುಡ್​ ಪ್ಲ್ಯಾನ್​
ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಹೃತಿಕ್​ ರೋಷನ್​
TV9 Web
| Edited By: |

Updated on: Jan 30, 2022 | 9:44 AM

Share

ಬಾಲಿವುಡ್​ನಲ್ಲಿ ಈಗಾಗಲೇ ಅನೇಕ ಮಲ್ಟಿಸ್ಟಾರ್ ಸಿನಿಮಾಗಳು ಬಂದಿವೆ. ಪ್ರೇಕ್ಷಕರು ಆ ರೀತಿಯ ಇನ್ನಷ್ಟು ಸಿನಿಮಾಗಳನ್ನು ನಿರೀಕ್ಷಿಸುತ್ತಿದ್ದಾರೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವಂತಹ ಕೆಲವು ಅಂತೆ-ಕಂತೆಗಳು ಬಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿವೆ. ಹಿಂದಿ ಚಿತ್ರರಂಗದಲ್ಲಿ ನಟ ಸಲ್ಮಾನ್​ ಖಾನ್​ (Salman Khan) ಅವರು ತಮ್ಮದೇ ರೀತಿಯ ಛಾಪು ಮೂಡಿಸಿದ್ದಾರೆ. ಹಾಗೆಯೇ ಹೃತಿಕ್​ ರೋಷನ್​ (Hrithik Roshan) ಕೂಡ ಚಾರ್ಮ್​ ಹೊಂದಿದ್ದಾರೆ. ಇನ್ನು, ಶಾರುಖ್​ ಖಾನ್ (Shah Rukh Khan)​ ಅವರು ಸೋತರೂ ಅವರಿಗೆ ಇರುವ ಡಿಮ್ಯಾಂಡ್​ ಕುಸಿದಿಲ್ಲ. ಈ ಮೂವರು ಸ್ಟಾರ್​ ನಟರನ್ನು ಒಂದೇ ಸಿನಿಮಾದಲ್ಲಿ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಆ ಆಸೆ ಈಡೇರಿಸಲು ಬಾಲಿವುಡ್​ನಲ್ಲಿ ಒಂದು ಸಿನಿಮಾ ತಯಾರಾಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ. ಈ ಕುರಿತಂತೆ ಅನೇಕ ಬಗೆಯ ಗಾಸಿಪ್​ ಹರಡಿದೆ. ‘ವಾರ್​ 2’ ಸಿನಿಮಾದಲ್ಲಿಯೇ ಈ ಮೂವರೂ ಸ್ಟಾರ್​ ನಟರು ತೆರೆಹಂಚಿಕೊಳ್ಳುತ್ತಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದರು. ಆದರೆ ಅದು ನಿಜವಲ್ಲ ಎಂಬ ಬಗ್ಗೆ ಸ್ಪಷ್ಟನೆ ಸಿಗುತ್ತಿದೆ.

ಶಾರುಖ್​ ಖಾನ್​ ಅವರು ಈಗ ‘ಪಠಾಣ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಹೃತಿಕ್ ರೋಷನ್​ ಅವರು ಶೀಘ್ರದಲ್ಲೇ ‘ವಾರ್​ 2’ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಅತ್ತ, ಸಲ್ಮಾನ್​ ಖಾನ್​ ಅವರು ‘ಟೈಗರ್​ 3’ ಚಿತ್ರದ ಕೊನೇ ಹಂತದ ಕೆಲಸಗಳಲ್ಲಿ ಮಗ್ನರಾಗಿದ್ದಾರೆ. ಸಲ್ಮಾನ್​ ಖಾನ್​ ಅವರ ಟೈಗರ್​ ಪಾತ್ರ ಮತ್ತು ಶಾರುಖ್​ ಅವರ ಪಠಾಣ್​ ಪಾತ್ರ ‘ವಾರ್​ 2’ ಸಿನಿಮಾದಲ್ಲಿ ಇರುವುದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಹಾಗಾದರೆ ಬಾಲಿವುಡ್​ ಮಂದಿಯ ಪ್ಲ್ಯಾನ್​ ಏನು? ಆ ಬಗ್ಗೆಯೂ ಕೆಲವು ವಿವರಗಳು ಸಿಕ್ಕಿವೆ.

ಹೃತಿಕ್​ ರೋಷನ್​ ಅವರು ‘ವಾರ್​ 2’ ಸಿನಿಮಾವನ್ನು ಬಿಡುಗಡೆ ಗೊಳಿಸಿದ ನಂತರವಷ್ಟೇ ಅಭಿಮಾನಿಗಳು ಬಯಸಿದಂತೆ ಮಲ್ಟಿಸ್ಟಾರ್​ ಸಿನಿಮಾ ಸಿದ್ಧವಾಗಲಿದೆ. ಟೈಗರ್​ (ಸಲ್ಮಾನ್​), ಪಠಾಣ್ (ಶಾರುಖ್​) ಹಾಗೂ ವಾರ್ ಸಿನಿಮಾದ ಕಬೀರ್​ (ಹೃತಿಕ್​) ಪಾತ್ರಗಳನ್ನು ಜೊತೆಯಾಗಿಸಿ ಒಂದು ಸ್ಪೈ ಥ್ರಿಲ್ಲರ್​ ಸಿನಿಮಾ ಮಾಡಬೇಕು ಎಂದು ಸಿದ್ಧತೆ ನಡೆಯುತ್ತಿದೆ. ಆ ಸಿನಿಮಾದಲ್ಲಿ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ಮತ್ತು ಶಾರುಖ್​ ಖಾನ್​ಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಲಿದ್ದಾರೆ.

ಯಶ್​ ರಾಜ್​ ಫಿಲ್ಮ್ಸ್​ ಸಂಸ್ಥೆಯ ಆದಿತ್ಯ ಚೋಪ್ರಾ ಅವರು ಈ ದೈತ್ಯ ಪ್ರಾಜೆಕ್ಟ್​ಗೆ ಬಂಡವಾಳ ಹೂಡಲಿದ್ದಾರೆ. ಬಾಲಿವುಡ್​ನ ಮೂವರು ಸೂಪರ್​ ಸ್ಟಾರ್​ ನಟರು ಒಂದೇ ಸಿನಿಮಾದಲ್ಲಿ ನಟಿಸುತ್ತಾರೆ ಎಂದರೆ ಅದು ತುಂಬ ಮಹತ್ವದ್ದಾಗಿರಲಿದೆ. ಹಾಗಾಗಿ ಇದು ಹಾಲಿವುಡ್​ನ ‘ಅವೆಂಜರ್ಸ್​ ಎಂಡ್​ಗೇಮ್​’ ಸಿನಿಮಾ ರೀತಿಯ ಫೀಲ್​ ನೀಡಲಿದೆ ಅಂತ ಮೂಲಗಳು ತಿಳಿಸಿವೆ ಎಂದು ಪಿಂಕ್​ವಿಲ್ಲಾ ವೆಬ್​ಸೈಟ್​ ವರದಿ ಮಾಡಿದೆ.

ಇದನ್ನೂ ಓದಿ:

ಕಂಠಪೂರ್ತಿ ಕುಡಿದು ಮಧ್ಯರಾತ್ರಿ ಶಾರುಖ್​ ಖಾನ್​ ಮನೆಗೆ ನುಗ್ಗಿದ್ದ ಕಪಿಲ್​ ಶರ್ಮಾ; ಮುಂದೇನಾಯ್ತು?

ಸಲ್ಮಾನ್​ ಖಾನ್​ ಜತೆ ಕೆಲಸ ಮಾಡಿದ್ರೆ ಆಗುವ ಲಾಭ-ನಷ್ಟದ ಬಗ್ಗೆ ಬಾಯ್ಬಿಟ್ಟ ಪ್ರೇಯಸಿ ಯೂಲಿಯಾ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ