AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗನ ಮುಟ್ಟುವ ಮೊದಲು ನನ್ನನ್ನು ಎದುರಿಸು’; ಎಚ್ಚರಿಕೆ ನೀಡಿದ ಶಾರುಖ್ ಖಾನ್

ಶಾರುಖ್ ಖಾನ್​ಗೆ ಕುಟುಂಬದ ಮೇಲೆ ಹೆಚ್ಚು ಪ್ರೀತಿ ಇದೆ. ಆರ್ಯನ್​ ಖಾನ್​ನ ಅವರು ಸಖತ್ ಪ್ರೀತಿ ಮಾಡುತ್ತಾರೆ. ಈ ಮೊದಲು ಅವರು ಡ್ರಗ್ ಕೇಸ್​ನಲ್ಲಿ ಅರೆಸ್ಟ್ ಆದರು. ಇದು ಶಾರುಖ್ ಖಾನ್ ಅವರನ್ನು ಸಾಕಷ್ಟು ಅಪ್ಸೆಟ್ ಮಾಡಿತ್ತು. ಮಗ ಅರೆಸ್ಟ್​ ಆದ ವಿಚಾರದಲ್ಲಿ ಶಾರುಖ್ ಖಾನ್​ಗೆ ಸಿಕ್ಕಾಪಟ್ಟೆ ಸಿಟ್ಟಿದೆ.

‘ಮಗನ ಮುಟ್ಟುವ ಮೊದಲು ನನ್ನನ್ನು ಎದುರಿಸು’; ಎಚ್ಚರಿಕೆ ನೀಡಿದ ಶಾರುಖ್ ಖಾನ್
ಶಾರುಖ್ ಖಾನ್-ಆರ್ಯನ್
ರಾಜೇಶ್ ದುಗ್ಗುಮನೆ
|

Updated on: Sep 01, 2023 | 7:12 AM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ರಿಲೀಸ್​ಗೆ ಮೊದಲು ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದ ಟ್ರೇಲರ್ ಆಗಸ್ಟ್​ 31ರಂದು ರಿಲೀಸ್ ಆಗಿದ್ದು, ಟ್ರೆಂಡ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಇದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ವಿಜಯ್ ಸೇತುಪತಿ (Vijay Sethupathi) ಅವರು ವಿಲನ್ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್ ಅವರದ್ದು ಹಲವು ಅವತಾರ. ಟ್ರೇಲರ್​ನಲ್ಲಿ ಶಾರುಖ್ ಖಾನ್ ಹೇಳಿದ ಡೈಲಾಗ್ ಒಂದು ಸದ್ದು ಮಾಡುತ್ತಿದೆ. ಇದು ವಿಲನ್​ಗೆ ಹೇಳಿದ ಮಾತೇ ಆದರೂ ಫ್ಯಾನ್ಸ್ ಬೇರೆ ರೀತಿಯಲ್ಲಿ ಅರ್ಥೈಸುತ್ತಿದ್ದಾರೆ.

ಶಾರುಖ್ ಖಾನ್​ಗೆ ಕುಟುಂಬದ ಮೇಲೆ ಹೆಚ್ಚು ಪ್ರೀತಿ ಇದೆ. ಆರ್ಯನ್​ ಖಾನ್​ನ ಅವರು ಸಖತ್ ಪ್ರೀತಿ ಮಾಡುತ್ತಾರೆ. ಈ ಮೊದಲು ಅವರು ಡ್ರಗ್ ಕೇಸ್​ನಲ್ಲಿ ಅರೆಸ್ಟ್ ಆದರು. ಇದು ಶಾರುಖ್ ಖಾನ್ ಅವರನ್ನು ಸಾಕಷ್ಟು ಅಪ್ಸೆಟ್ ಮಾಡಿತ್ತು. ಹಲವು ಸಮಯ ಆರ್ಯನ್ ಖಾನ್ ಜೈಲಿನಲ್ಲಿ ಇದ್ದು ಬಂದರು. ಆರ್ಯನ್ ಖಾನ್​ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಆರ್ಯನ್ ಬಿಡುಗಡೆ ಆದರು. ಮಗ ಅರೆಸ್ಟ್​ ಆದ ವಿಚಾರದಲ್ಲಿ ಶಾರುಖ್ ಖಾನ್​ಗೆ ಸಿಕ್ಕಾಪಟ್ಟೆ ಸಿಟ್ಟಿದೆ. ನೇರವಾಗಿ ಇದನ್ನು ಹೇಳೋಕೆ ಸಾಧ್ಯವಿಲ್ಲ. ಹೀಗಾಗಿ, ಸಿನಿಮಾ ಮೂಲಕ ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಈ ಚಿತ್ರದಲ್ಲಿ ಜವಾನ್ (ಶಾರುಖ್ ಖಾನ್) ಹಾಗೂ ಕಲೀ (ವಿಜಯ್ ಸೇತುಪತಿ) ಮುಖಾಮುಖಿ ಆಗುತ್ತಾರೆ. ಈ ವೇಳೆ ವಿಲನ್​ಗೆ ಶಾರುಖ್ ಹೇಳುವ ಡೈಲಾಗ್ ಗಮನ ಸೆಳೆದಿದೆ. ‘ನನ್ನ ಮಗನ ಮುಟ್ಟುವ ಮೊದಲು ತಂದೆಯ ಜೊತೆ ಮಾತನಾಡು’ ಎಂದು ಹೇಳುತ್ತಾರೆ ಶಾರುಖ್.  ಇದು ವಿಲನ್​ಗೆ ಹೇಳಿದ ಮಾತೇ ಆದರೂ ಅನೇಕರು ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುತ್ತಿದ್ದಾರೆ. ಶಾರುಖ್​ ಖಾನ್ ತಮ್ಮ ಮಗನ ವಿಚಾರದಲ್ಲಿ ಎಚ್ಚರಿಕೆ ನೀಡಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಜವಾನ್’ ಸಿನಿಮಾ ಆಡಿಯೋ ಲಾಂಚ್​​ಗೆ ಬರಲೇ ಇಲ್ಲ ನಯನತಾರಾ; ಅಸಲಿ ಕಾರಣ ಹುಡುಕಿದ ಫ್ಯಾನ್ಸ್

‘ಜವಾನ್’ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್​ಗೆ ಜೊತೆಯಾಗಿ ನಯನತಾರಾ ನಟಿಸಿದ್ದಾರೆ. ಅಟ್ಲಿ ನಿರ್ದೇಶನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು