Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗನ ಮುಟ್ಟುವ ಮೊದಲು ನನ್ನನ್ನು ಎದುರಿಸು’; ಎಚ್ಚರಿಕೆ ನೀಡಿದ ಶಾರುಖ್ ಖಾನ್

ಶಾರುಖ್ ಖಾನ್​ಗೆ ಕುಟುಂಬದ ಮೇಲೆ ಹೆಚ್ಚು ಪ್ರೀತಿ ಇದೆ. ಆರ್ಯನ್​ ಖಾನ್​ನ ಅವರು ಸಖತ್ ಪ್ರೀತಿ ಮಾಡುತ್ತಾರೆ. ಈ ಮೊದಲು ಅವರು ಡ್ರಗ್ ಕೇಸ್​ನಲ್ಲಿ ಅರೆಸ್ಟ್ ಆದರು. ಇದು ಶಾರುಖ್ ಖಾನ್ ಅವರನ್ನು ಸಾಕಷ್ಟು ಅಪ್ಸೆಟ್ ಮಾಡಿತ್ತು. ಮಗ ಅರೆಸ್ಟ್​ ಆದ ವಿಚಾರದಲ್ಲಿ ಶಾರುಖ್ ಖಾನ್​ಗೆ ಸಿಕ್ಕಾಪಟ್ಟೆ ಸಿಟ್ಟಿದೆ.

‘ಮಗನ ಮುಟ್ಟುವ ಮೊದಲು ನನ್ನನ್ನು ಎದುರಿಸು’; ಎಚ್ಚರಿಕೆ ನೀಡಿದ ಶಾರುಖ್ ಖಾನ್
ಶಾರುಖ್ ಖಾನ್-ಆರ್ಯನ್
Follow us
ರಾಜೇಶ್ ದುಗ್ಗುಮನೆ
|

Updated on: Sep 01, 2023 | 7:12 AM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ರಿಲೀಸ್​ಗೆ ಮೊದಲು ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದ ಟ್ರೇಲರ್ ಆಗಸ್ಟ್​ 31ರಂದು ರಿಲೀಸ್ ಆಗಿದ್ದು, ಟ್ರೆಂಡ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಇದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ವಿಜಯ್ ಸೇತುಪತಿ (Vijay Sethupathi) ಅವರು ವಿಲನ್ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್ ಅವರದ್ದು ಹಲವು ಅವತಾರ. ಟ್ರೇಲರ್​ನಲ್ಲಿ ಶಾರುಖ್ ಖಾನ್ ಹೇಳಿದ ಡೈಲಾಗ್ ಒಂದು ಸದ್ದು ಮಾಡುತ್ತಿದೆ. ಇದು ವಿಲನ್​ಗೆ ಹೇಳಿದ ಮಾತೇ ಆದರೂ ಫ್ಯಾನ್ಸ್ ಬೇರೆ ರೀತಿಯಲ್ಲಿ ಅರ್ಥೈಸುತ್ತಿದ್ದಾರೆ.

ಶಾರುಖ್ ಖಾನ್​ಗೆ ಕುಟುಂಬದ ಮೇಲೆ ಹೆಚ್ಚು ಪ್ರೀತಿ ಇದೆ. ಆರ್ಯನ್​ ಖಾನ್​ನ ಅವರು ಸಖತ್ ಪ್ರೀತಿ ಮಾಡುತ್ತಾರೆ. ಈ ಮೊದಲು ಅವರು ಡ್ರಗ್ ಕೇಸ್​ನಲ್ಲಿ ಅರೆಸ್ಟ್ ಆದರು. ಇದು ಶಾರುಖ್ ಖಾನ್ ಅವರನ್ನು ಸಾಕಷ್ಟು ಅಪ್ಸೆಟ್ ಮಾಡಿತ್ತು. ಹಲವು ಸಮಯ ಆರ್ಯನ್ ಖಾನ್ ಜೈಲಿನಲ್ಲಿ ಇದ್ದು ಬಂದರು. ಆರ್ಯನ್ ಖಾನ್​ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಆರ್ಯನ್ ಬಿಡುಗಡೆ ಆದರು. ಮಗ ಅರೆಸ್ಟ್​ ಆದ ವಿಚಾರದಲ್ಲಿ ಶಾರುಖ್ ಖಾನ್​ಗೆ ಸಿಕ್ಕಾಪಟ್ಟೆ ಸಿಟ್ಟಿದೆ. ನೇರವಾಗಿ ಇದನ್ನು ಹೇಳೋಕೆ ಸಾಧ್ಯವಿಲ್ಲ. ಹೀಗಾಗಿ, ಸಿನಿಮಾ ಮೂಲಕ ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಈ ಚಿತ್ರದಲ್ಲಿ ಜವಾನ್ (ಶಾರುಖ್ ಖಾನ್) ಹಾಗೂ ಕಲೀ (ವಿಜಯ್ ಸೇತುಪತಿ) ಮುಖಾಮುಖಿ ಆಗುತ್ತಾರೆ. ಈ ವೇಳೆ ವಿಲನ್​ಗೆ ಶಾರುಖ್ ಹೇಳುವ ಡೈಲಾಗ್ ಗಮನ ಸೆಳೆದಿದೆ. ‘ನನ್ನ ಮಗನ ಮುಟ್ಟುವ ಮೊದಲು ತಂದೆಯ ಜೊತೆ ಮಾತನಾಡು’ ಎಂದು ಹೇಳುತ್ತಾರೆ ಶಾರುಖ್.  ಇದು ವಿಲನ್​ಗೆ ಹೇಳಿದ ಮಾತೇ ಆದರೂ ಅನೇಕರು ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುತ್ತಿದ್ದಾರೆ. ಶಾರುಖ್​ ಖಾನ್ ತಮ್ಮ ಮಗನ ವಿಚಾರದಲ್ಲಿ ಎಚ್ಚರಿಕೆ ನೀಡಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಜವಾನ್’ ಸಿನಿಮಾ ಆಡಿಯೋ ಲಾಂಚ್​​ಗೆ ಬರಲೇ ಇಲ್ಲ ನಯನತಾರಾ; ಅಸಲಿ ಕಾರಣ ಹುಡುಕಿದ ಫ್ಯಾನ್ಸ್

‘ಜವಾನ್’ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್​ಗೆ ಜೊತೆಯಾಗಿ ನಯನತಾರಾ ನಟಿಸಿದ್ದಾರೆ. ಅಟ್ಲಿ ನಿರ್ದೇಶನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್