AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗನ ಮುಟ್ಟುವ ಮೊದಲು ನನ್ನನ್ನು ಎದುರಿಸು’; ಎಚ್ಚರಿಕೆ ನೀಡಿದ ಶಾರುಖ್ ಖಾನ್

ಶಾರುಖ್ ಖಾನ್​ಗೆ ಕುಟುಂಬದ ಮೇಲೆ ಹೆಚ್ಚು ಪ್ರೀತಿ ಇದೆ. ಆರ್ಯನ್​ ಖಾನ್​ನ ಅವರು ಸಖತ್ ಪ್ರೀತಿ ಮಾಡುತ್ತಾರೆ. ಈ ಮೊದಲು ಅವರು ಡ್ರಗ್ ಕೇಸ್​ನಲ್ಲಿ ಅರೆಸ್ಟ್ ಆದರು. ಇದು ಶಾರುಖ್ ಖಾನ್ ಅವರನ್ನು ಸಾಕಷ್ಟು ಅಪ್ಸೆಟ್ ಮಾಡಿತ್ತು. ಮಗ ಅರೆಸ್ಟ್​ ಆದ ವಿಚಾರದಲ್ಲಿ ಶಾರುಖ್ ಖಾನ್​ಗೆ ಸಿಕ್ಕಾಪಟ್ಟೆ ಸಿಟ್ಟಿದೆ.

‘ಮಗನ ಮುಟ್ಟುವ ಮೊದಲು ನನ್ನನ್ನು ಎದುರಿಸು’; ಎಚ್ಚರಿಕೆ ನೀಡಿದ ಶಾರುಖ್ ಖಾನ್
ಶಾರುಖ್ ಖಾನ್-ಆರ್ಯನ್
ರಾಜೇಶ್ ದುಗ್ಗುಮನೆ
|

Updated on: Sep 01, 2023 | 7:12 AM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ರಿಲೀಸ್​ಗೆ ಮೊದಲು ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದ ಟ್ರೇಲರ್ ಆಗಸ್ಟ್​ 31ರಂದು ರಿಲೀಸ್ ಆಗಿದ್ದು, ಟ್ರೆಂಡ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಇದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ವಿಜಯ್ ಸೇತುಪತಿ (Vijay Sethupathi) ಅವರು ವಿಲನ್ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಶಾರುಖ್ ಖಾನ್ ಅವರದ್ದು ಹಲವು ಅವತಾರ. ಟ್ರೇಲರ್​ನಲ್ಲಿ ಶಾರುಖ್ ಖಾನ್ ಹೇಳಿದ ಡೈಲಾಗ್ ಒಂದು ಸದ್ದು ಮಾಡುತ್ತಿದೆ. ಇದು ವಿಲನ್​ಗೆ ಹೇಳಿದ ಮಾತೇ ಆದರೂ ಫ್ಯಾನ್ಸ್ ಬೇರೆ ರೀತಿಯಲ್ಲಿ ಅರ್ಥೈಸುತ್ತಿದ್ದಾರೆ.

ಶಾರುಖ್ ಖಾನ್​ಗೆ ಕುಟುಂಬದ ಮೇಲೆ ಹೆಚ್ಚು ಪ್ರೀತಿ ಇದೆ. ಆರ್ಯನ್​ ಖಾನ್​ನ ಅವರು ಸಖತ್ ಪ್ರೀತಿ ಮಾಡುತ್ತಾರೆ. ಈ ಮೊದಲು ಅವರು ಡ್ರಗ್ ಕೇಸ್​ನಲ್ಲಿ ಅರೆಸ್ಟ್ ಆದರು. ಇದು ಶಾರುಖ್ ಖಾನ್ ಅವರನ್ನು ಸಾಕಷ್ಟು ಅಪ್ಸೆಟ್ ಮಾಡಿತ್ತು. ಹಲವು ಸಮಯ ಆರ್ಯನ್ ಖಾನ್ ಜೈಲಿನಲ್ಲಿ ಇದ್ದು ಬಂದರು. ಆರ್ಯನ್ ಖಾನ್​ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಆರ್ಯನ್ ಬಿಡುಗಡೆ ಆದರು. ಮಗ ಅರೆಸ್ಟ್​ ಆದ ವಿಚಾರದಲ್ಲಿ ಶಾರುಖ್ ಖಾನ್​ಗೆ ಸಿಕ್ಕಾಪಟ್ಟೆ ಸಿಟ್ಟಿದೆ. ನೇರವಾಗಿ ಇದನ್ನು ಹೇಳೋಕೆ ಸಾಧ್ಯವಿಲ್ಲ. ಹೀಗಾಗಿ, ಸಿನಿಮಾ ಮೂಲಕ ಹೇಳಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಈ ಚಿತ್ರದಲ್ಲಿ ಜವಾನ್ (ಶಾರುಖ್ ಖಾನ್) ಹಾಗೂ ಕಲೀ (ವಿಜಯ್ ಸೇತುಪತಿ) ಮುಖಾಮುಖಿ ಆಗುತ್ತಾರೆ. ಈ ವೇಳೆ ವಿಲನ್​ಗೆ ಶಾರುಖ್ ಹೇಳುವ ಡೈಲಾಗ್ ಗಮನ ಸೆಳೆದಿದೆ. ‘ನನ್ನ ಮಗನ ಮುಟ್ಟುವ ಮೊದಲು ತಂದೆಯ ಜೊತೆ ಮಾತನಾಡು’ ಎಂದು ಹೇಳುತ್ತಾರೆ ಶಾರುಖ್.  ಇದು ವಿಲನ್​ಗೆ ಹೇಳಿದ ಮಾತೇ ಆದರೂ ಅನೇಕರು ಇದನ್ನು ಬೇರೆ ರೀತಿಯಲ್ಲಿ ಅರ್ಥೈಸುತ್ತಿದ್ದಾರೆ. ಶಾರುಖ್​ ಖಾನ್ ತಮ್ಮ ಮಗನ ವಿಚಾರದಲ್ಲಿ ಎಚ್ಚರಿಕೆ ನೀಡಿದ್ದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಜವಾನ್’ ಸಿನಿಮಾ ಆಡಿಯೋ ಲಾಂಚ್​​ಗೆ ಬರಲೇ ಇಲ್ಲ ನಯನತಾರಾ; ಅಸಲಿ ಕಾರಣ ಹುಡುಕಿದ ಫ್ಯಾನ್ಸ್

‘ಜವಾನ್’ ಸೆಪ್ಟೆಂಬರ್ 7ರಂದು ರಿಲೀಸ್ ಆಗುತ್ತಿದೆ. ಶಾರುಖ್ ಖಾನ್​ಗೆ ಜೊತೆಯಾಗಿ ನಯನತಾರಾ ನಟಿಸಿದ್ದಾರೆ. ಅಟ್ಲಿ ನಿರ್ದೇಶನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ