Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಶಾರುಖ್ ಖಾನ್​ಗೆ ದಕ್ಷಿಣದ ಈ ಸ್ಟಾರ್ ಜೊತೆ ಊಟ ಮಾಡೋ ಆಸೆ

ಶಾರುಖ್ ಖಾನ್​ಗೆ ಮಲಯಾಳಂ ನಟ ಮೋಹನ್​ಲಾಲ್ ಬಗ್ಗೆ ವಿಶೇಷ ಗೌರವ ಇದೆ. ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ‘ಜಿಂದಾ ಬಂದಾ..’ ಹಾಡಿಗೆ ಮೋಹನ್​ಲಾಲ್ ಅವರು ಡ್ಯಾನ್ಸ್ ಮಾಡಿದ್ದರು. ಇದನ್ನು ಶಾರುಖ್ ಖಾನ್ ಅಭಿಮಾನಿ ಬಳಗ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.

Shah Rukh Khan: ಶಾರುಖ್ ಖಾನ್​ಗೆ ದಕ್ಷಿಣದ ಈ ಸ್ಟಾರ್ ಜೊತೆ ಊಟ ಮಾಡೋ ಆಸೆ
ಶಾರುಖ್
Follow us
ರಾಜೇಶ್ ದುಗ್ಗುಮನೆ
|

Updated on: Apr 24, 2024 | 11:47 AM

ಶಾರುಖ್ ಖಾನ್ (Shah Rukh Khan) ಅವರಿಗೆ ದೊಡ್ಡ ಮಟ್ಟದ ಸ್ಟಾರ್​ಗಿರಿ ಇದೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಕಳೆದ ವರ್ಷ ಅವರ ನಟನೆಯ ಮೂರು ಸಿನಿಮಾಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆಗಿ ಗೆದ್ದಿವೆ. ಅವರ ಖ್ಯಾತಿ ಎಷ್ಟೇ ಹೆಚ್ಚಿದರೂ ಅವರು ಸಿಂಪಲ್ ಆಗಿರೋಕೆ ಪ್ರಯತ್ನಿಸುತ್ತಾರೆ. ದಕ್ಷಿಣದ ಈ ಸೂಪರ್​ ಸ್ಟಾರ್ ಜೊತೆ ಅವರಿಗೆ ಊಟ ಮಾಡೋ ಆಸೆ ಇದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ಶಾರುಖ್ ಖಾನ್​ಗೆ ಮಲಯಾಳಂ ನಟ ಮೋಹನ್​ಲಾಲ್ ಬಗ್ಗೆ ವಿಶೇಷ ಗೌರವ ಇದೆ. ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ‘ಜಿಂದಾ ಬಂದಾ..’ ಹಾಡಿಗೆ ಮೋಹನ್​ಲಾಲ್ ಅವರು ಡ್ಯಾನ್ಸ್ ಮಾಡಿದ್ದರು. ಇದನ್ನು ಶಾರುಖ್ ಖಾನ್ ಅಭಿಮಾನಿ ಬಳಗ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ. ಇದಕ್ಕೆ ಶಾರುಖ್ ಖಾನ್ ಅವರು ಉತ್ತರಿಸಿದ್ದಾರೆ.

‘ಜಿಂದಾ ಬಂದಾ ಹಾಡಿಗೆ ಮೋಹನ್ ಲಾಲ್ ಅವರ ಎಲೆಕ್ಟ್ರಿಫೈ ಡ್ಯಾನ್ಸ್’ ಎಂದು ಶಾರುಖ್ ಖಾನ್ ಯೂನಿವರ್ಸ್ ಫ್ಯಾನ್ಸ್ ಕ್ಲಬ್ ಪೋಸ್ಟ್ ಒಂದನ್ನು ಹಂಚಿಕೊಂಡಿತ್ತು. ಇದಕ್ಕೆ ಶಾರುಖ್ ಖಾನ್ ಅವರು ಉತ್ತರ ನೀಡಿದ್ದಾರೆ. ‘ಈ ಹಾಡನ್ನು ಮತ್ತಷ್ಟು ವಿಶೇಷ ಮಾಡಿದ್ದಕ್ಕೆ ಮೋಹನ್​ಲಾಲ್ ಸರ್ ಅವರಿಗೆ ಧನ್ಯವಾದ’ ಎಂದು ಶಾರುಖ್ ಖಾನ್ ಬರೆದುಕೊಂಡಿದ್ದಾರೆ. ‘ನಿಮ್ಮ ಡ್ಯಾನ್ಸ್​ನ ಅರ್ಧದಷ್ಟು ನಾನು ಮಾಡಿದ್ದೇನೆ. ಮನೆಯಲ್ಲಿ ನಿಮ್ಮ ಜೊತೆ ಊಟ ಮಾಡಲು ಕಾಯುತ್ತಿದ್ದೇನೆ. ನೀವು ಒರಿಜಿನಲ್ ಗ್ಯಾಂಗ್​ಸ್ಟರ್ ಜಿಂದಾ ಬಂದಾ’ ಎಂದಿದ್ದಾರೆ ಶಾರುಖ್ ಖಾನ್.

ಇದನ್ನೂ ಓದಿ: ಶಾರುಖ್ ಖಾನ್ ಹೆಸರಿಗಷ್ಟೇ ಗ್ಲೋಬಲ್ ಸ್ಟಾರ್; ಅವರು ನಡೆದುಕೊಳ್ಳೋದು ಹೇಗೆ ನೋಡಿ

ಸದ್ಯ ಮೋಹನ್​ಲಾಲ್ ಅವರ ಡ್ಯಾನ್ಸ್ ವಿಡಿಯೋ ಸಖತ್ ವೈರಲ್ ಆಗಿದೆ. ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಮೋಹನ್​ಲಾಲ್ ಅವರು ವಯಸ್ಸಲ್ಲಿ ಶಾರುಖ್ ಖಾನ್​ಗಿಂತ ಹಿರಿಯರು. ಹೀಗಾಗಿ, ಅವರ ಮೇಲೆ ಶಾರುಖ್ ಖಾನ್ ವಿಶೇಷ ಗೌರವ ತೋರಿಸುತ್ತಾರೆ. ಸದ್ಯ ಶಾರುಖ್ ಖಾನ್ ಅವರು ಕೋಲ್ಕತ್ತಾ ನೈಟ್ ರೈಡರ್ಸ್​ನ ಐಪಿಎಲ್ ಪಂದ್ಯಗಳಲ್ಲಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ಅವರು ಹೊಸ ಸಿನಿಮಾ ಘೋಷಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ