AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಷ್ಟ್ರ ಪ್ರಶಸ್ತಿ ಹಿಡಿಯಲು ನನಗೆ ಒಂದು ಕೈ ಸಾಕು’: ಶಾರುಖ್ ಖಾನ್ ಹೀಗೆ ಹೇಳಿದ್ದು ಯಾಕೆ?

ಶಾರುಖ್ ಖಾನ್ ಅವರು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಲು ಕಾತರರಾಗಿದ್ದಾರೆ. ಇಷ್ಟು ವರ್ಷಗಳ ವೃತ್ತಿ ಜೀವನದಲ್ಲಿ ಅವರಿಗೆ ಇದೇ ಮೊದಲ ಬಾರಿ ರಾಷ್ಟ್ರ ಪ್ರಶಸ್ತಿ ಸಿಗುತ್ತಿದೆ. ಆ ಪ್ರಶಸ್ತಿಯನ್ನು ಹಿಡಿಯಲು ತಮಗೆ ಒಂದೇ ಕೈ ಸಾಕು ಎಂದು ಅವರು ಹೇಳಿದ್ದಾರೆ. ಅದಕ್ಕೆ ಕಾರಣ ಏನು?

‘ರಾಷ್ಟ್ರ ಪ್ರಶಸ್ತಿ ಹಿಡಿಯಲು ನನಗೆ ಒಂದು ಕೈ ಸಾಕು’: ಶಾರುಖ್ ಖಾನ್ ಹೀಗೆ ಹೇಳಿದ್ದು ಯಾಕೆ?
Shah Rukh Khan
ಮದನ್​ ಕುಮಾರ್​
|

Updated on: Aug 20, 2025 | 8:29 PM

Share

ನಟ ಶಾರುಖ್ ಖಾನ್ (Shah Rukh Khan) ಅವರಿಗೆ ಈ ವರ್ಷ ತುಂಬಾ ಸ್ಪೆಷಲ್. ಯಾಕೆಂದರೆ, ಇತ್ತೀಚೆಗೆ ಅವರಿಗೆ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. ‘ಜವಾನ್’ ಸಿನಿಮಾದಲ್ಲಿನ ನಟನೆಗಾಗಿ ಅವರು ‘ಅತ್ಯುತ್ತಮ ನಟ’ (Best Actor) ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಂತಸ ತಂದಿದೆ. ಆದರೆ ಒಂದು ಬೇಸರದ ಸುದ್ದಿ ಕೂಡ ಇದೆ. ಶಾರುಖ್ ಖಾನ್ ಅವರ ಕೈಗೆ ಪೆಟ್ಟಾಗಿದೆ. ಅದಕ್ಕಾಗಿ ಅವರು ಸರ್ಜರಿ ಮಾಡಿಸಿಕೊಂಡಿದ್ದಾರೆ. ಹಾಗಿದ್ದರೂ ಅವರು ಸಿನಿಮಾ ಕೆಲಸಗಳಲ್ಲಿ ಭಾಗಿ ಆಗುತ್ತಿದ್ದಾರೆ. ಇಂದು (ಆಗಸ್ಟ್ 20) ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅವರು ನ್ಯಾಷನಲ್ ಅವಾರ್ಡ್ (National Award) ಬಗ್ಗೆ ಮಾತನಾಡಿದರು.

ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ನಿರ್ದೇಶನ ಮಾಡಿರುವ ‘ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸಿರೀಸ್ ಬಿಡುಗಡೆಗೆ ಸಜ್ಜಾಗಿದೆ. ಅದರ ಪ್ರೀವ್ಯೂ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ಪಾಲ್ಗೊಂಡಿದ್ದಾರೆ. ಇದಕ್ಕೆ ಶಾರುಖ್ ಖಾನ್ ಅವರೇ ನಿರ್ಮಾಪಕರು. ವೇದಿಕೆಯಲ್ಲಿ ಮಾತನಾಡಲು ಬಂದಾಗ ಶಾರುಖ್ ಖಾನ್ ಅವರು ಕೈಗೆ ಬ್ಯಾಂಡೇಜ್ ಕಟ್ಟಿಕೊಂಡಿದ್ದರು.

‘ನಿಮ್ಮಲ್ಲಿ ಅನೇಕರಿಗೆ ಸಾಕಷ್ಟು ಪ್ರಶ್ನೆ ಇದೆ ಎಂಬುದು ನನಗೆ ಗೊತ್ತು. ಆ ಬಗ್ಗೆ ನಾನು ಮೊದಲೇ ಉತ್ತರ ನೀಡುತ್ತೇನೆ. ನನ್ನ ಕೈಗೆ ಪೆಟ್ಟಾಗಿದೆ. ಅದಕ್ಕೆ ಒಂದು ಸರ್ಜರಿ ಮಾಡಬೇಕಾಯಿತು. ಪೂರ್ತಿಯಾಗಿ ಗುಣಮುಖರಾಗಲು 1-2 ತಿಂಗಳು ಬೇಕಾಗುತ್ತದೆ. ಆದರೆ ನಾನು ರಾಷ್ಟ್ರ ಪ್ರಶಸ್ತಿಯನ್ನು ಹಿಡಿಯಲು ಒಂದು ಕೈ ಸಾಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
Image
ದಕ್ಷಿಣದ ನಿರ್ಮಾಪಕರ ನೋಡಿ ಕಲಿಯಿರಿ: ಸ್ಟಾರ್ ನಟ ಟಾಂಗ್
Image
ಬಾಲಿವುಡ್ ಹೀರೋಗಳ ಬಣ್ಣ ಬಯಲು ಮಾಡಿದ ಸೋನು ಸೂದ್
Image
‘ಬಾಲಿವುಡ್ ಸಿನಿಮಾಗಳು ಭಾರತವನ್ನು ಕೆಟ್ಟದಾಗಿ ತೋರಿಸಿವೆ’; ರಿಷಬ್ ಶೆಟ್ಟಿ

‘ಸಾಮಾನ್ಯವಾಗಿ ನಾನು ಎಲ್ಲ ಕೆಲಸಗಳನ್ನು ಒಂದೇ ಕೈಯಲ್ಲಿ ಮಾಡುತ್ತೇನೆ. ತಿನ್ನುವುದು, ಹಲ್ಲು ಉಜ್ಜುವುದು, ಬೆನ್ನು ಕೆರೆದುಕೊಳ್ಳುವುದು ಅದಕ್ಕೆಲ್ಲ ಒಂದೇ ಕೈ ಸಾಕು. ಆದರೆ ನಿಮ್ಮಿಂದ ಸಿಗುವ ಅಪಾರ ಪ್ರೀತಿಯನ್ನು ಸ್ವೀಕರಿಸಲು ಎರಡೂ ಕೈಗಳು ಬೇಕು’ ಎಂದು ಶಾರುಖ್ ಖಾನ್ ಅವರು ಹೇಳಿದ್ದಾರೆ. ಶಾರುಖ್ ಖಾನ್ ಅವರ ಕೈಗೆ ಪೆಟ್ಟಾದ ಬಳಿಕ ‘ಕಿಂಗ್’ ಚಿತ್ರದ ಶೂಟಿಂಗ್​ ನಿಲ್ಲಿಸಲಾಯಿತು.

ಇದನ್ನೂ ಓದಿ: ನಿಮಗೆ ವಯಸ್ಸಾಯ್ತು, ಚಿತ್ರರಂಗ ಬಿಡಿ ಎಂದ ಅಭಿಮಾನಿಗೆ ಶಾರುಖ್ ಖಾನ್ ಹೇಳಿದ್ದೇನು?

‘ರೆಡ್ ಚಿಲ್ಲೀಸ್ ಎಂಟರ್​ಟೇನ್ಮೆಂಟ್’ ಮೂಲಕ ಶಾರುಖ್ ಖಾನ್ ಅವರು ‘ಬ್ಯಾಡ್ಸ್ ಆಫ್ ಬಾಲಿವುಡ್’ ಸೀರಿಸ್ ನಿರ್ಮಾಣ ಮಾಡಿದ್ದಾರೆ. ಇಂದು (ಆಗಸ್ಟ್ 20) ಪ್ರಿವ್ಯೂ ಬಿಡುಗಡೆ ಮಾಡಲಾಗಿದೆ. ಶಾರುಖ್ ಖಾನ್ ಪುತ್ರನ ಮೊದಲ ಪ್ರಾಜೆಕ್ಟ್ ಎಂಬ ಕಾರಣಕ್ಕೆ ಇದರ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ನೆಟ್​ಫ್ಲಿಕ್ಸ್ ಮೂಲಕ ಇದು ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ