AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?

India Vs Pakistan: ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ರೋಚಕ ಪಂದ್ಯವನ್ನು ನೋಡಿ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಶಾರುಖ್ ಖಾನ್​ ಕೂಡ ತಮ್ಮ ಅನಿಸಿಕೆ ತಿಳಿಸಿದ್ದಾರೆ.

Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
ಶಾರುಖ್ ಖಾನ್, ವಿರಾಟ್ ಕೊಹ್ಲಿ
TV9 Web
| Edited By: |

Updated on: Oct 24, 2022 | 12:43 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಭರ್ಜರಿ ಕಮ್​ಬ್ಯಾಕ್​ ಮಾಡುವ ಉತ್ಸಾಹದಲ್ಲಿದ್ದಾರೆ. ಅವರಿಗೆ ಕ್ರಿಕೆಟ್​ ಬಗ್ಗೆಯೂ ಸಖತ್​ ಆಸಕ್ತಿ ಇದೆ. ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ (T20 World Cup)​ ನಡೆಯುತ್ತಿದೆ. ಭಾನುವಾರ (ಅ.23) ನಡೆದ ಪಂದ್ಯದಲ್ಲಿ ವಿರಾಟ ಕೊಹ್ಲಿ (Virat Kohli) ಪರಾಕ್ರಮ ಮೆರೆದಿದ್ದಾರೆ. ಅವರು ಬ್ಯಾಟ್​ ಬೀಸಿದ ವೈಖರಿಗೆ ಎಂಥವರೂ ಸೆಲ್ಯೂಟ್​ ಹೊಡೆಯಲೇಬೇಕು. ಇನ್ನೇನು ಕೈ ತಪ್ಪಿಹೋಯಿತು ಎಂಬಂತಿದ್ದ ಪಂದ್ಯವನ್ನು ಗೆಲುವಿನ ದಡಕ್ಕೆ ಸೇರಿಸಿದ ವಿರಾಟ್​ ಕೊಹ್ಲಿಗೆ ಎಲ್ಲರೂ ಭೇಷ್​ ಎಂದಿದ್ದಾರೆ. ಶಾರುಖ್​ ಖಾನ್​ ಕೂಡ ಕೊಹ್ಲಿ ಆಟಕ್ಕೆ ಮನಸೋತಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಶಾರುಖ್​ ಖಾನ್​ ಅವರು ಟ್ವಿಟರ್​ನಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಇಂಡಿಯಾ-ಪಾಕಿಸ್ತಾನ ಪಂದ್ಯ ನೋಡಿ ಖುಷಿ ಆಗಿರುವ ಅವರು, ಭಾರತದ ಆಟಗಾರರನ್ನು ಮನಸಾರೆ ಹೊಗಳಿದ್ದಾರೆ. ಭಾರತ ಗೆದ್ದಾಗ ಸ್ಟೇಡಿಯಂನಲ್ಲಿ ಮೊಳಗಿದ ‘ಚಕ್​ ದೇ ಇಂಡಿಯಾ..’ ಹಾಡಿನಿಂದಾಗಿ ಶಾರುಖ್​ಗೆ ಇನ್ನಷ್ಟು ರೋಮಾಂಚನ ಆಗಿದೆ. ಆ ಬಗ್ಗೆಯೂ ಅವರು ಟ್ವೀಟ್​ನಲ್ಲಿ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
Image
Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
Image
Nayanthara: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು

‘ಕ್ರಿಕೆಟ್​ನ ಈ ಅತ್ಯುತ್ತಮ ಪಂದ್ಯ ನೋಡಲು ಖುಷಿ ಆಯಿತು. ಭಾರತದ ಗೆಲುವನ್ನು ನೋಡಿ ಅದ್ಭುತ ಎನಿಸಿತು. ವಿರಾಟ್​ ಕೊಯ್ಲಿ ಅವರದ್ದು ಬ್ರಿಲಿಯಂಟ್​ ಬ್ಯಾಟಿಂಗ್​. ಅವರ ನಗು-ಅಳುವನ್ನು ನೋಡುವುದು ಸ್ಫೂರ್ತಿದಾಯಕವಾಗಿತ್ತು. ಹಿನ್ನೆಲೆಯಲ್ಲಿ ಚಕ್​ ದೇ ಇಂಡಿಯಾ ಹಾಡು! ಖುಷಿಯ ದೀಪಾವಳಿ ಈಗ ಶುರು ಆಯಿತು’ ಎಂದು ಶಾರುಖ್​ ಖಾನ್​ ಟ್ವೀಟ್​ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಶಾರುಖ್​ ಖಾನ್​ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಅವರು ನಟಿಸಿದ ‘ಜೀರೋ’ ಸಿನಿಮಾ 2018ರಲ್ಲಿ ಬಿಡುಗಡೆಯಾಗಿ ಸೋತಿತು. ಆ ಬಳಿಕ ಅವರ ಯಾವುದೇ ಚಿತ್ರ ತೆರೆಕಂಡಿಲ್ಲ. ಈಗ ಅವರು ಬ್ಯಾಕ್​ ಟು ಬ್ಯಾಕ್​ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. 2023ರಲ್ಲಿ ಅವರ ಮೂರಕ್ಕೂ ಹೆಚ್ಚು ಸಿನಿಮಾಗಳು ಬಿಡುಗಡೆ ಆಗಲಿವೆ. ಹಾಗಾಗಿ 2023ರ ಪೂರ್ತಿ ವರ್ಷ ಶಾರುಖ್​ ಪಾಲಿಗೆ ವಿಶೇಷವಾಗಿರಲಿದೆ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ತುರ್ತಾಗಿ ಒಂದು ಗೆಲುವು ಪಡೆಯಬೇಕು ಎಂಬ ಕಾರಣಕ್ಕೆ ಶಾರುಖ್​ ಖನ್​ ಅವರು ಒಳ್ಳೊಳ್ಳೆಯ ನಿರ್ದೇಶಕ ಜೊತೆ ಕೈ ಜೋಡಿಸುತ್ತಿದ್ದಾರೆ. ದಕ್ಷಿಣ ಭಾರತದ ಸ್ಟಾರ್​ ಡೈರೆಕ್ಟರ್​ ಅಟ್ಲಿ ಜೊತೆ ‘ಜವಾನ್​’, ಬಾಲಿವುಡ್​ನ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ‘ಡಂಕಿ’ ಹಾಗೂ ಸಿದ್ದಾರ್ಥ್​ ಆನಂದ್​ ಜೊತೆ ‘ಪಠಾಣ್​’ ಚಿತ್ರವನ್ನು ಶಾರುಖ್ ಮಾಡುತ್ತಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?