AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?

India Vs Pakistan: ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ರೋಚಕ ಪಂದ್ಯವನ್ನು ನೋಡಿ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಶಾರುಖ್ ಖಾನ್​ ಕೂಡ ತಮ್ಮ ಅನಿಸಿಕೆ ತಿಳಿಸಿದ್ದಾರೆ.

Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
ಶಾರುಖ್ ಖಾನ್, ವಿರಾಟ್ ಕೊಹ್ಲಿ
Follow us
TV9 Web
| Updated By: ಮದನ್​ ಕುಮಾರ್​

Updated on: Oct 24, 2022 | 12:43 PM

ನಟ ಶಾರುಖ್​ ಖಾನ್​ (Shah Rukh Khan) ಅವರು ಭರ್ಜರಿ ಕಮ್​ಬ್ಯಾಕ್​ ಮಾಡುವ ಉತ್ಸಾಹದಲ್ಲಿದ್ದಾರೆ. ಅವರಿಗೆ ಕ್ರಿಕೆಟ್​ ಬಗ್ಗೆಯೂ ಸಖತ್​ ಆಸಕ್ತಿ ಇದೆ. ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ (T20 World Cup)​ ನಡೆಯುತ್ತಿದೆ. ಭಾನುವಾರ (ಅ.23) ನಡೆದ ಪಂದ್ಯದಲ್ಲಿ ವಿರಾಟ ಕೊಹ್ಲಿ (Virat Kohli) ಪರಾಕ್ರಮ ಮೆರೆದಿದ್ದಾರೆ. ಅವರು ಬ್ಯಾಟ್​ ಬೀಸಿದ ವೈಖರಿಗೆ ಎಂಥವರೂ ಸೆಲ್ಯೂಟ್​ ಹೊಡೆಯಲೇಬೇಕು. ಇನ್ನೇನು ಕೈ ತಪ್ಪಿಹೋಯಿತು ಎಂಬಂತಿದ್ದ ಪಂದ್ಯವನ್ನು ಗೆಲುವಿನ ದಡಕ್ಕೆ ಸೇರಿಸಿದ ವಿರಾಟ್​ ಕೊಹ್ಲಿಗೆ ಎಲ್ಲರೂ ಭೇಷ್​ ಎಂದಿದ್ದಾರೆ. ಶಾರುಖ್​ ಖಾನ್​ ಕೂಡ ಕೊಹ್ಲಿ ಆಟಕ್ಕೆ ಮನಸೋತಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಶಾರುಖ್​ ಖಾನ್​ ಅವರು ಟ್ವಿಟರ್​ನಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಇಂಡಿಯಾ-ಪಾಕಿಸ್ತಾನ ಪಂದ್ಯ ನೋಡಿ ಖುಷಿ ಆಗಿರುವ ಅವರು, ಭಾರತದ ಆಟಗಾರರನ್ನು ಮನಸಾರೆ ಹೊಗಳಿದ್ದಾರೆ. ಭಾರತ ಗೆದ್ದಾಗ ಸ್ಟೇಡಿಯಂನಲ್ಲಿ ಮೊಳಗಿದ ‘ಚಕ್​ ದೇ ಇಂಡಿಯಾ..’ ಹಾಡಿನಿಂದಾಗಿ ಶಾರುಖ್​ಗೆ ಇನ್ನಷ್ಟು ರೋಮಾಂಚನ ಆಗಿದೆ. ಆ ಬಗ್ಗೆಯೂ ಅವರು ಟ್ವೀಟ್​ನಲ್ಲಿ ಪ್ರಸ್ತಾಪ ಮಾಡಿದ್ದಾರೆ.

ಇದನ್ನೂ ಓದಿ
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
Image
Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
Image
Nayanthara: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು

‘ಕ್ರಿಕೆಟ್​ನ ಈ ಅತ್ಯುತ್ತಮ ಪಂದ್ಯ ನೋಡಲು ಖುಷಿ ಆಯಿತು. ಭಾರತದ ಗೆಲುವನ್ನು ನೋಡಿ ಅದ್ಭುತ ಎನಿಸಿತು. ವಿರಾಟ್​ ಕೊಯ್ಲಿ ಅವರದ್ದು ಬ್ರಿಲಿಯಂಟ್​ ಬ್ಯಾಟಿಂಗ್​. ಅವರ ನಗು-ಅಳುವನ್ನು ನೋಡುವುದು ಸ್ಫೂರ್ತಿದಾಯಕವಾಗಿತ್ತು. ಹಿನ್ನೆಲೆಯಲ್ಲಿ ಚಕ್​ ದೇ ಇಂಡಿಯಾ ಹಾಡು! ಖುಷಿಯ ದೀಪಾವಳಿ ಈಗ ಶುರು ಆಯಿತು’ ಎಂದು ಶಾರುಖ್​ ಖಾನ್​ ಟ್ವೀಟ್​ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಶಾರುಖ್​ ಖಾನ್​ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಅವರು ನಟಿಸಿದ ‘ಜೀರೋ’ ಸಿನಿಮಾ 2018ರಲ್ಲಿ ಬಿಡುಗಡೆಯಾಗಿ ಸೋತಿತು. ಆ ಬಳಿಕ ಅವರ ಯಾವುದೇ ಚಿತ್ರ ತೆರೆಕಂಡಿಲ್ಲ. ಈಗ ಅವರು ಬ್ಯಾಕ್​ ಟು ಬ್ಯಾಕ್​ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. 2023ರಲ್ಲಿ ಅವರ ಮೂರಕ್ಕೂ ಹೆಚ್ಚು ಸಿನಿಮಾಗಳು ಬಿಡುಗಡೆ ಆಗಲಿವೆ. ಹಾಗಾಗಿ 2023ರ ಪೂರ್ತಿ ವರ್ಷ ಶಾರುಖ್​ ಪಾಲಿಗೆ ವಿಶೇಷವಾಗಿರಲಿದೆ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ತುರ್ತಾಗಿ ಒಂದು ಗೆಲುವು ಪಡೆಯಬೇಕು ಎಂಬ ಕಾರಣಕ್ಕೆ ಶಾರುಖ್​ ಖನ್​ ಅವರು ಒಳ್ಳೊಳ್ಳೆಯ ನಿರ್ದೇಶಕ ಜೊತೆ ಕೈ ಜೋಡಿಸುತ್ತಿದ್ದಾರೆ. ದಕ್ಷಿಣ ಭಾರತದ ಸ್ಟಾರ್​ ಡೈರೆಕ್ಟರ್​ ಅಟ್ಲಿ ಜೊತೆ ‘ಜವಾನ್​’, ಬಾಲಿವುಡ್​ನ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಜೊತೆ ‘ಡಂಕಿ’ ಹಾಗೂ ಸಿದ್ದಾರ್ಥ್​ ಆನಂದ್​ ಜೊತೆ ‘ಪಠಾಣ್​’ ಚಿತ್ರವನ್ನು ಶಾರುಖ್ ಮಾಡುತ್ತಿದ್ದಾರೆ. ಈ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ