AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jawan Poster: ವಿಜಯ್​ ಸೇತುಪತಿಗೆ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್​ ನೀಡಿದ ‘ಜವಾನ್​’ ಚಿತ್ರತಂಡ; ಹೊಸ ಪೋಸ್ಟರ್​ ಬಿಡುಗಡೆ

Vijay Sethupathi: ‘ಜವಾನ್​’ ಸಿನಿಮಾ ಸೆಪ್ಟೆಂಬರ್ 7ರಂದು ಬಿಡುಗಡೆ ಆಗಲಿದೆ. ವಿಜಯ್ ಸೇತುಪತಿ ಮತ್ತು ಶಾರುಖ್​ ಖಾನ್​ ಅವರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ.

Jawan Poster: ವಿಜಯ್​ ಸೇತುಪತಿಗೆ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್​ ನೀಡಿದ ‘ಜವಾನ್​’ ಚಿತ್ರತಂಡ; ಹೊಸ ಪೋಸ್ಟರ್​ ಬಿಡುಗಡೆ
ವಿಜಯ್​ ಸೇತುಪತಿ, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jul 24, 2023 | 4:26 PM

Share

ಬಾಲಿವುಡ್​ನ ಜನಪ್ರಿಯ ನಟ ಶಾರುಖ್ ಖಾನ್ (Shah Rukh Khan) ಅಭಿನಯಿಸುತ್ತಿರುವ ಹೊಸ ಸಿನಿಮಾ ‘ಜವಾನ್’ (Jawan) ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ‘ಜವಾನ್​’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್​ ಸೇತುಪತಿ. ಅವರ ಗೆಟಪ್​ ಹೇಗಿರಲಿದೆ ಎಂಬುದು ಈ ಫೋಸ್ಟರ್​ನಲ್ಲಿ ಗೊತ್ತಾಗಿದೆ. ವಿಜಯ್​ ಸೇತುಪತಿ (Vijay Sethupathi) ಅವರ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್​ ವೈರಲ್​ ಆಗಿದೆ.

‘ಜವಾನ್​’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್​ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.

ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್​ ಖಾನ್​ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್​’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್​ ಸೇತುಪತಿ ಅವರ ಪಾತ್ರದ ಝಲಕ್​ ಕಾಣಿಸಿತ್ತು. ಈಗ ಪೋಸ್ಟರ್​ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್​ ಸಿನಿಮಾಗಳಲ್ಲಿ ವಿಲನ್​ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್​ ಸೇತುಪತಿ ಅವರು ಶಾರುಖ್​ ಖಾನ್​ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.

ಇದನ್ನೂ ಓದಿ: Jawan: ‘ತಾಕತ್ತಿದ್ದರೆ ಜವಾನ್​ ಎದುರು ನಿಮ್ಮ ಸಿನಿಮಾ ರಿಲೀಸ್​ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೇರ ಸವಾಲು

‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್​ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್​ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ. ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್ಮೆಂಟ್’ ಬ್ಯಾನರ್​ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ