AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​

ಆರ್ಯನ್​ ಖಾನ್​ ಬಾಲಿವುಡ್​ಗೆ ಕಾಲಿಡೋದು ಬಹುತೇಕ ಪಕ್ಕಾ. ಇದಕ್ಕೂ ಮೊದಲು ವಿದೇಶಕ್ಕೆ ತೆರಳಿ ನಟನಾ ತರಬೇತಿ ಪಡೆಯುವ ಆಲೋಚನೆಯಲ್ಲಿ ಅವರು ಇದ್ದರು. ಆದರೆ. ಸದ್ಯದಮಟ್ಟಿಗಂತೂ ಇದು ದೂರದ ಮಾತು.

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​
ಆರ್ಯನ್​ ಖಾನ್​
TV9 Web
| Edited By: |

Updated on: Dec 18, 2021 | 4:03 PM

Share

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಮಗ ಆರ್ಯನ್​ ಖಾನ್ಡ್ರಗ್​ಕೇಸ್​ನಲ್ಲಿ (​Aryan Khan Drug Case) ಸಿಕ್ಕಿಬಿದ್ದ ನಂತರದಲ್ಲಿ ಸಾಕಷ್ಟು ಸಂಕಷ್ಟ ಎದುರಿಸಿದ್ದರು. ಈಗ ಈ ಸಂಕಷ್ಟಗಳು ಒಂದೊಂದಾಗಿ ದೂರವಾಗುತ್ತಿದೆ. ಆರ್ಯನ್​ ಖಾನ್​ಗೆ ಪ್ರತಿವಾರವೂ ಎನ್​ಸಿಬಿ ಕಚೇರಿಗೆ ತೆರಳಿ ಸಹಿ ಹಾಕಬೇಕಿತ್ತು. ಈ ಪ್ರಕ್ರಿಯೆಯಿಂದ ಅವರು ಇತ್ತೀಚೆಗೆ ರಿಲೀಫ್​ ಪಡೆದಿದ್ದರು. ಈಗ ಆರ್ಯನ್​ ಖಾನ್​ ಭವಿಷ್ಯದ ಬಗ್ಗೆ ಶಾರುಖ್​ ಚಿಂತನೆ ಮಾಡಿದ್ದಾರೆ. ಖ್ಯಾತ ಪ್ರೊಡಕ್ಷನ್​ಹೌಸ್​ ಜತೆ ಆರ್ಯನ್​ ಖಾನ್​ ಕೆಲಸ ಮಾಡುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ.

ಆರ್ಯನ್​ ಖಾನ್​ ಬಾಲಿವುಡ್​ಗೆ ಕಾಲಿಡೋದು ಬಹುತೇಕ ಪಕ್ಕಾ. ಇದಕ್ಕೂ ಮೊದಲು ವಿದೇಶಕ್ಕೆ ತೆರಳಿ ನಟನಾ ತರಬೇತಿ ಪಡೆಯುವ ಆಲೋಚನೆಯಲ್ಲಿ ಅವರು ಇದ್ದರು. ಆದರೆ. ಸದ್ಯದಮಟ್ಟಿಗಂತೂ ಇದು ದೂರದ ಮಾತು. ಆರ್ಯನ್​ ಖಾನ್​ ಜೈಲು ಸೇರಿದ ಒಂದು ತಿಂಗಳು ನಂತರದಲ್ಲಿ ಜಾಮೀನು ಪಡೆದು ಬಂದಿದ್ದರು. ಜಾಮೀನು ಪಡೆದ ನಂತರದಲ್ಲಿ ಅವರು ಪಾಸ್​ಪೋರ್ಟ್ಅನ್ನು ಕೋರ್ಟ್​ಗೆ ನೀಡಬೇಕಿತ್ತು. ಹೀಗಾಗಿ, ಪ್ರಕರಣ ಮುಗಿಯುವವರೆಗೆ ಅವರು ವಿದೇಶಕ್ಕೆ ತೆರಳುವಂತಿಲ್ಲ. ಹೀಗಾಗಿ ಎಸ್​ಆರ್​ಕೆ ಬೇರೆ ಪ್ಲ್ಯಾನ್​ ಒಂದನ್ನು ಮಾಡಿಕೊಂಡಿದ್ದಾರೆ.

ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಸಂಸ್ಥೆಯ ಮುಖ್ಯಸ್ಥ ಆದಿತ್ಯ ಚೋಪ್ರಾ ಹಾಗೂ ಧರ್ಮ ಪ್ರೊಡಕ್ಷನ್​​ ಹೌಸ್​ ಒಡೆಯ ಕರಣ್ ಜೋಹರ್​ ಜತೆಗೆ ಶಾರುಖ್​ ಖಾನ್​ ಅವರು ಒಡನಾಟ ಹೊಂದಿದ್ದಾರೆ. ಹೀಗಾಗಿ ಇವರ ಜತೆ ಆರ್ಯನ್​ ಖಾನ್​ ಕೆಲಸ ಮಾಡೋ ಸಾಧ್ಯತೆ ಇದೆ. ಈ ಮೂಲಕ ಸಿನಿಮಾಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಆರ್ಯನ್ ಕಲಿಯಬಹುದು ಎಂಬುದು ಶಾರುಖ್​ ಪ್ಲ್ಯಾನ್​.

ಅಕ್ಟೋಬರ್‌ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿದ್ದರು. ಅಕ್ಟೋಬರ್​ ತಿಂಗಳ ಆರಂಭದಲ್ಲೇ ಆರ್ಯನ್ ಅವರನ್ನು ಬಂಧಿಸಲಾಗಿತ್ತು. ಇದರಿಂದ ಶಾರುಖ್​ ಕುಗ್ಗಿದ್ದಾರೆ. ಅವರು ಸೋಶಿಯಲ್​ ಮೀಡಿಯಾದಿಂದ ದೂರ ಉಳಿದುಕೊಂಡಿದ್ದಾರೆ. ಇತ್ತೀಚಿಗೆ ಸಮಾರಂಭದಲ್ಲಿ ಅವರು ಕಾಣಿಸಿಕೊಂಡಿದ್ದರು.

ಆರ್ಯನ್​ ಖಾನ್​ ಹಾಗೂ ದೀಪಿಕಾ ಪಡುಕೋಣೆ ನಟಿಸುತ್ತಿರುವ ‘ಪಠಾಣ್​’ ಸಿನಿಮಾ ಕೆಲಸಗಳು ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ. ಆರ್ಯನ್​ ಖಾನ್​ ಪ್ರಕರಣ ಮುನ್ನೆಲೆಗೆ ಬಂದ ನಂತರದಲ್ಲಿ ಶಾರುಖ್​ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದರು. ಈಗ 15-20 ದಿನಗಳ ಕಾಲ ಮುಂಬೈನಲ್ಲಿ ಶೂಟಿಂಗ್​ ನಡೆಯಲಿದೆ. ಆ ಬಳಿಕ ವಿದೇಶದಲ್ಲಿ ಶೂಟಿಂಗ್​ ನಡೆಯಲಿದೆ.

ಇದನ್ನೂ ಓದಿ:  ಆರ್ಯನ್ ಖಾನ್ ಡ್ರಗ್ಸ್​ ಪ್ರಕರಣ: ಆರೋಪಿಗಳ ಸಂಚು ನಿರೂಪಿಸುವ ಪುರಾವೆ ಇಲ್ಲ ಎಂದ ಬಾಂಬೆ ಹೈಕೋರ್ಟ್

Aryan Khan: ಆರ್ಯನ್​ ಖಾನ್​ಗೆ ಬಿಗ್ ರಿಲೀಫ್ ನೀಡಿದ ಬಾಂಬೆ ಹೈಕೋರ್ಟ್; ಜಾಮೀನು ಷರತ್ತು ಸಡಿಲಗೊಳಿಸಿ ಆದೇಶ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ