AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​

ಆರ್ಯನ್​ ಖಾನ್​ ಬಾಲಿವುಡ್​ಗೆ ಕಾಲಿಡೋದು ಬಹುತೇಕ ಪಕ್ಕಾ. ಇದಕ್ಕೂ ಮೊದಲು ವಿದೇಶಕ್ಕೆ ತೆರಳಿ ನಟನಾ ತರಬೇತಿ ಪಡೆಯುವ ಆಲೋಚನೆಯಲ್ಲಿ ಅವರು ಇದ್ದರು. ಆದರೆ. ಸದ್ಯದಮಟ್ಟಿಗಂತೂ ಇದು ದೂರದ ಮಾತು.

 ಖ್ಯಾತ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಆರ್ಯನ್​ ಖಾನ್​; ಶಾರುಖ್​ ಮಗನ ಬಗ್ಗೆ ಹೊಸ ಅಪ್​ಡೇಟ್​
ಆರ್ಯನ್​ ಖಾನ್​
TV9 Web
| Edited By: |

Updated on: Dec 18, 2021 | 4:03 PM

Share

ಬಾಲಿವುಡ್​ ನಟ ಶಾರುಖ್​ ಖಾನ್​ (Shah Rukh Khan) ಮಗ ಆರ್ಯನ್​ ಖಾನ್ಡ್ರಗ್​ಕೇಸ್​ನಲ್ಲಿ (​Aryan Khan Drug Case) ಸಿಕ್ಕಿಬಿದ್ದ ನಂತರದಲ್ಲಿ ಸಾಕಷ್ಟು ಸಂಕಷ್ಟ ಎದುರಿಸಿದ್ದರು. ಈಗ ಈ ಸಂಕಷ್ಟಗಳು ಒಂದೊಂದಾಗಿ ದೂರವಾಗುತ್ತಿದೆ. ಆರ್ಯನ್​ ಖಾನ್​ಗೆ ಪ್ರತಿವಾರವೂ ಎನ್​ಸಿಬಿ ಕಚೇರಿಗೆ ತೆರಳಿ ಸಹಿ ಹಾಕಬೇಕಿತ್ತು. ಈ ಪ್ರಕ್ರಿಯೆಯಿಂದ ಅವರು ಇತ್ತೀಚೆಗೆ ರಿಲೀಫ್​ ಪಡೆದಿದ್ದರು. ಈಗ ಆರ್ಯನ್​ ಖಾನ್​ ಭವಿಷ್ಯದ ಬಗ್ಗೆ ಶಾರುಖ್​ ಚಿಂತನೆ ಮಾಡಿದ್ದಾರೆ. ಖ್ಯಾತ ಪ್ರೊಡಕ್ಷನ್​ಹೌಸ್​ ಜತೆ ಆರ್ಯನ್​ ಖಾನ್​ ಕೆಲಸ ಮಾಡುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ.

ಆರ್ಯನ್​ ಖಾನ್​ ಬಾಲಿವುಡ್​ಗೆ ಕಾಲಿಡೋದು ಬಹುತೇಕ ಪಕ್ಕಾ. ಇದಕ್ಕೂ ಮೊದಲು ವಿದೇಶಕ್ಕೆ ತೆರಳಿ ನಟನಾ ತರಬೇತಿ ಪಡೆಯುವ ಆಲೋಚನೆಯಲ್ಲಿ ಅವರು ಇದ್ದರು. ಆದರೆ. ಸದ್ಯದಮಟ್ಟಿಗಂತೂ ಇದು ದೂರದ ಮಾತು. ಆರ್ಯನ್​ ಖಾನ್​ ಜೈಲು ಸೇರಿದ ಒಂದು ತಿಂಗಳು ನಂತರದಲ್ಲಿ ಜಾಮೀನು ಪಡೆದು ಬಂದಿದ್ದರು. ಜಾಮೀನು ಪಡೆದ ನಂತರದಲ್ಲಿ ಅವರು ಪಾಸ್​ಪೋರ್ಟ್ಅನ್ನು ಕೋರ್ಟ್​ಗೆ ನೀಡಬೇಕಿತ್ತು. ಹೀಗಾಗಿ, ಪ್ರಕರಣ ಮುಗಿಯುವವರೆಗೆ ಅವರು ವಿದೇಶಕ್ಕೆ ತೆರಳುವಂತಿಲ್ಲ. ಹೀಗಾಗಿ ಎಸ್​ಆರ್​ಕೆ ಬೇರೆ ಪ್ಲ್ಯಾನ್​ ಒಂದನ್ನು ಮಾಡಿಕೊಂಡಿದ್ದಾರೆ.

ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಸಂಸ್ಥೆಯ ಮುಖ್ಯಸ್ಥ ಆದಿತ್ಯ ಚೋಪ್ರಾ ಹಾಗೂ ಧರ್ಮ ಪ್ರೊಡಕ್ಷನ್​​ ಹೌಸ್​ ಒಡೆಯ ಕರಣ್ ಜೋಹರ್​ ಜತೆಗೆ ಶಾರುಖ್​ ಖಾನ್​ ಅವರು ಒಡನಾಟ ಹೊಂದಿದ್ದಾರೆ. ಹೀಗಾಗಿ ಇವರ ಜತೆ ಆರ್ಯನ್​ ಖಾನ್​ ಕೆಲಸ ಮಾಡೋ ಸಾಧ್ಯತೆ ಇದೆ. ಈ ಮೂಲಕ ಸಿನಿಮಾಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಆರ್ಯನ್ ಕಲಿಯಬಹುದು ಎಂಬುದು ಶಾರುಖ್​ ಪ್ಲ್ಯಾನ್​.

ಅಕ್ಟೋಬರ್‌ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿದ್ದರು. ಅಕ್ಟೋಬರ್​ ತಿಂಗಳ ಆರಂಭದಲ್ಲೇ ಆರ್ಯನ್ ಅವರನ್ನು ಬಂಧಿಸಲಾಗಿತ್ತು. ಇದರಿಂದ ಶಾರುಖ್​ ಕುಗ್ಗಿದ್ದಾರೆ. ಅವರು ಸೋಶಿಯಲ್​ ಮೀಡಿಯಾದಿಂದ ದೂರ ಉಳಿದುಕೊಂಡಿದ್ದಾರೆ. ಇತ್ತೀಚಿಗೆ ಸಮಾರಂಭದಲ್ಲಿ ಅವರು ಕಾಣಿಸಿಕೊಂಡಿದ್ದರು.

ಆರ್ಯನ್​ ಖಾನ್​ ಹಾಗೂ ದೀಪಿಕಾ ಪಡುಕೋಣೆ ನಟಿಸುತ್ತಿರುವ ‘ಪಠಾಣ್​’ ಸಿನಿಮಾ ಕೆಲಸಗಳು ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ. ಆರ್ಯನ್​ ಖಾನ್​ ಪ್ರಕರಣ ಮುನ್ನೆಲೆಗೆ ಬಂದ ನಂತರದಲ್ಲಿ ಶಾರುಖ್​ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದರು. ಈಗ 15-20 ದಿನಗಳ ಕಾಲ ಮುಂಬೈನಲ್ಲಿ ಶೂಟಿಂಗ್​ ನಡೆಯಲಿದೆ. ಆ ಬಳಿಕ ವಿದೇಶದಲ್ಲಿ ಶೂಟಿಂಗ್​ ನಡೆಯಲಿದೆ.

ಇದನ್ನೂ ಓದಿ:  ಆರ್ಯನ್ ಖಾನ್ ಡ್ರಗ್ಸ್​ ಪ್ರಕರಣ: ಆರೋಪಿಗಳ ಸಂಚು ನಿರೂಪಿಸುವ ಪುರಾವೆ ಇಲ್ಲ ಎಂದ ಬಾಂಬೆ ಹೈಕೋರ್ಟ್

Aryan Khan: ಆರ್ಯನ್​ ಖಾನ್​ಗೆ ಬಿಗ್ ರಿಲೀಫ್ ನೀಡಿದ ಬಾಂಬೆ ಹೈಕೋರ್ಟ್; ಜಾಮೀನು ಷರತ್ತು ಸಡಿಲಗೊಳಿಸಿ ಆದೇಶ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!