AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರ್ಷದ ಭಾರತೀಯ 2023’: ಕುಟುಂಬದ ಕಡುಕಷ್ಟದ ಬಳಿಕ ಶಾರುಖ್​ ಖಾನ್​ಗೆ ಸಿಕ್ತು ಪ್ರಶಸ್ತಿ

‘ಇತ್ತೀಚಿನ ಕೆಲವು ವರ್ಷಗಳಲ್ಲಿ ನನಗೆ ಮತ್ತು ನನ್ನ ಕುಟುಂಬದವರಿಗೆ ಕಷ್ಟ ಎದುರಾಯಿತು. ನನ್ನ ಹಲವು ಸಿನಿಮಾಗಳು ಫ್ಲಾಪ್​ ಆದವು. ಕೆಲವರು ನನ್ನ ಬದುಕು ಅಂತ್ಯವಾಯ್ತು ಎನ್ನಲು ಆರಂಭಿಸಿದರು’ ಎಂದು ಕಷ್ಟದ ದಿನಗಳನ್ನು ಶಾರುಖ್​ ಖಾನ್​ ಮೆಲುಕು ಹಾಕಿದ್ದಾರೆ.

‘ವರ್ಷದ ಭಾರತೀಯ 2023’: ಕುಟುಂಬದ ಕಡುಕಷ್ಟದ ಬಳಿಕ ಶಾರುಖ್​ ಖಾನ್​ಗೆ ಸಿಕ್ತು ಪ್ರಶಸ್ತಿ
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jan 11, 2024 | 11:20 AM

Share

ನಟ ಶಾರುಖ್​ ಖಾನ್​ (Shah Rukh khan) ಅವರು ಭಾರತೀಯ ಚಿತ್ರರಂಗದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. 3 ದಶಕಗಳ ವೃತ್ತಿಬದುಕಿನಲ್ಲಿ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಶಾರುಖ್​ ಖಾನ್​ ಮತ್ತು ಅವರ ಕುಟುಂಬದವರು ಅನೇಕ ಕಷ್ಟಗಳನ್ನು ಎದುರಿಸಿದರು. ಆದರೆ 2023ರಲ್ಲಿ ಅವರು ಮತ್ತೆ ಏಳಿಗೆ ಕಂಡರು. ಅಲ್ಲದೇ ಅವರಿಗೆ ಈಗ ‘ವರ್ಷದ ಭಾರತೀಯ 2023’ (Indian of The Year 2023) ಪ್ರಶಸ್ತಿ ಕೂಡ ಸಿಕ್ಕಿದೆ. ಈ ಪ್ರಶಸ್ತಿಯನ್ನು ಅವರು ಬಹಳ ಖುಷಿಯಿಂದ ಸ್ವೀಕರಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನೇಕ ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

‘ಕಳೆದ ಕೆಲವು ವರ್ಷಗಳಲ್ಲಿ ನನಗೆ ಮತ್ತು ನನ್ನ ಕುಟುಂಬದವರಿಗೆ ಕಷ್ಟ ಎದುರಾಯಿತು. ನನ್ನ ಹಲವು ಸಿನಿಮಾಗಳು ಫ್ಲಾಪ್​ ಆದವು. ಕೆಲವರು ನನ್ನ ಬದುಕು ಅಂತ್ಯವಾಯ್ತು ಎನ್ನಲು ಆರಂಭಿಸಿದರು. ವೈಯಕ್ತಿಕ ಬದುಕಿನಲ್ಲೂ ಅನೇಕ ಘಟನೆಗಳು ನಡೆದವು. ಅದರಿಂದ ನಾನು ಪಾಠ ಕಲಿತೆ. ಶಾಂತವಾಗಿರಬೇಕು, ಕಷ್ಟಪಟ್ಟು ಕೆಲಸ ಮಾಡಬೇಕು ಎಂಬುದನ್ನು ಕಲಿತೆ. ಎಲ್ಲವೂ ಸರಿ ಇದೆ ಎನ್ನುವಾಗ ಏನಾದರೂ ಬಂದು ಬಡಿಯಬಹುದು. ಆದರೆ ಈ ಸಂದರ್ಭದಲ್ಲಿ ನೀವು ಭರವಸೆ ಉಳಿಸಿಕೊಳ್ಳಬೇಕು’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

‘100 ಪರ್ಸೆಂಟ್​ ಎಂಬುದು ಕಥೆಯ ಅಂತ್ಯವಲ್ಲ. ಸಿನಿಮಾದ ರೀತಿ ಜೀವನದ ಅಂತ್ಯದಲ್ಲೂ ಕೂಡ ಎಲ್ಲವೂ ಸರಿ ಆಗುತ್ತದೆ ಅಂತ ನನಗೆ ಯಾರೋ ಹೇಳಿದ್ದರು. ಸರಿ ಆಗಿಲ್ಲ ಎಂದರೆ ಅಂತ್ಯ ಆಗಿಲ್ಲ ಎಂದು ಅರ್ಥ. ಪಿಕ್ಚರ್​ ಇನ್ನೂ ಬಾಕಿ ಇದೆ ಮೇರೆ ದೋಸ್ತ್​. ಆ ಮಾತಿನ ಮೇಲೆ ನನಗೆ ನಂಬಿಕೆ ಇದೆ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ. 2023ರಲ್ಲಿ ಅವರು ‘ಜವಾನ್​’, ‘ಪಠಾಣ್​’, ‘ಡಂಕಿ’ ಸಿನಿಮಾಗಳ ಮೂಲಕ ಗೆಲುವ ಕಂಡಿದ್ದಾರೆ.

ಇದನ್ನೂ ಓದಿ: ವಿಶ್ವಾದ್ಯಂತ 444 ಕೋಟಿ ರೂಪಾಯಿ ಗಳಿಸಿದ ‘ಡಂಕಿ’; ಶಾರುಖ್​ಗೆ ಹ್ಯಾಟ್ರಿಕ್ ಗೆಲುವು

‘ಒಂದಷ್ಟು ವರ್ಷಗಳ ಹಿಂದೆ ಪ್ರಶಸ್ತಿ ಪಡೆದಾಗ ಅದನ್ನು ಮನೆಗೆ ತೆಗೆದುಕೊಂಡು ಹೋಗಿ ಮಕ್ಕಳಿಗೆ ನೀಡುತ್ತಿದ್ದೆ. ಅದರಿಂದ ಅವರ ಬದುಕಿಗೆ ಪ್ರೋತ್ಸಾಹ ಸಿಗುತ್ತಿತ್ತು. ಕಳೆದ ಕೆಲವು ವರ್ಷಗಳಿಂದ ನನ್ನ ಕುಟುಂಬಕ್ಕೆ ಈ ಪ್ರೋತ್ಸಾಹದ ಅಗತ್ಯವಿತ್ತು. ಹಾಗಾಗಿ ಅವರಿಗೋಸ್ಕರ ನಾನು ಈ ಪ್ರಶಸ್ತಿಯನ್ನು ಮನೆಗೆ ತೆಗೆದುಕೊಂಡು ಹೋಗುತ್ತೇನೆ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್