AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರ್ಷದ ಭಾರತೀಯ 2023’: ಕುಟುಂಬದ ಕಡುಕಷ್ಟದ ಬಳಿಕ ಶಾರುಖ್​ ಖಾನ್​ಗೆ ಸಿಕ್ತು ಪ್ರಶಸ್ತಿ

‘ಇತ್ತೀಚಿನ ಕೆಲವು ವರ್ಷಗಳಲ್ಲಿ ನನಗೆ ಮತ್ತು ನನ್ನ ಕುಟುಂಬದವರಿಗೆ ಕಷ್ಟ ಎದುರಾಯಿತು. ನನ್ನ ಹಲವು ಸಿನಿಮಾಗಳು ಫ್ಲಾಪ್​ ಆದವು. ಕೆಲವರು ನನ್ನ ಬದುಕು ಅಂತ್ಯವಾಯ್ತು ಎನ್ನಲು ಆರಂಭಿಸಿದರು’ ಎಂದು ಕಷ್ಟದ ದಿನಗಳನ್ನು ಶಾರುಖ್​ ಖಾನ್​ ಮೆಲುಕು ಹಾಕಿದ್ದಾರೆ.

‘ವರ್ಷದ ಭಾರತೀಯ 2023’: ಕುಟುಂಬದ ಕಡುಕಷ್ಟದ ಬಳಿಕ ಶಾರುಖ್​ ಖಾನ್​ಗೆ ಸಿಕ್ತು ಪ್ರಶಸ್ತಿ
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jan 11, 2024 | 11:20 AM

Share

ನಟ ಶಾರುಖ್​ ಖಾನ್​ (Shah Rukh khan) ಅವರು ಭಾರತೀಯ ಚಿತ್ರರಂಗದಲ್ಲಿ ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. 3 ದಶಕಗಳ ವೃತ್ತಿಬದುಕಿನಲ್ಲಿ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಶಾರುಖ್​ ಖಾನ್​ ಮತ್ತು ಅವರ ಕುಟುಂಬದವರು ಅನೇಕ ಕಷ್ಟಗಳನ್ನು ಎದುರಿಸಿದರು. ಆದರೆ 2023ರಲ್ಲಿ ಅವರು ಮತ್ತೆ ಏಳಿಗೆ ಕಂಡರು. ಅಲ್ಲದೇ ಅವರಿಗೆ ಈಗ ‘ವರ್ಷದ ಭಾರತೀಯ 2023’ (Indian of The Year 2023) ಪ್ರಶಸ್ತಿ ಕೂಡ ಸಿಕ್ಕಿದೆ. ಈ ಪ್ರಶಸ್ತಿಯನ್ನು ಅವರು ಬಹಳ ಖುಷಿಯಿಂದ ಸ್ವೀಕರಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನೇಕ ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ.

‘ಕಳೆದ ಕೆಲವು ವರ್ಷಗಳಲ್ಲಿ ನನಗೆ ಮತ್ತು ನನ್ನ ಕುಟುಂಬದವರಿಗೆ ಕಷ್ಟ ಎದುರಾಯಿತು. ನನ್ನ ಹಲವು ಸಿನಿಮಾಗಳು ಫ್ಲಾಪ್​ ಆದವು. ಕೆಲವರು ನನ್ನ ಬದುಕು ಅಂತ್ಯವಾಯ್ತು ಎನ್ನಲು ಆರಂಭಿಸಿದರು. ವೈಯಕ್ತಿಕ ಬದುಕಿನಲ್ಲೂ ಅನೇಕ ಘಟನೆಗಳು ನಡೆದವು. ಅದರಿಂದ ನಾನು ಪಾಠ ಕಲಿತೆ. ಶಾಂತವಾಗಿರಬೇಕು, ಕಷ್ಟಪಟ್ಟು ಕೆಲಸ ಮಾಡಬೇಕು ಎಂಬುದನ್ನು ಕಲಿತೆ. ಎಲ್ಲವೂ ಸರಿ ಇದೆ ಎನ್ನುವಾಗ ಏನಾದರೂ ಬಂದು ಬಡಿಯಬಹುದು. ಆದರೆ ಈ ಸಂದರ್ಭದಲ್ಲಿ ನೀವು ಭರವಸೆ ಉಳಿಸಿಕೊಳ್ಳಬೇಕು’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

‘100 ಪರ್ಸೆಂಟ್​ ಎಂಬುದು ಕಥೆಯ ಅಂತ್ಯವಲ್ಲ. ಸಿನಿಮಾದ ರೀತಿ ಜೀವನದ ಅಂತ್ಯದಲ್ಲೂ ಕೂಡ ಎಲ್ಲವೂ ಸರಿ ಆಗುತ್ತದೆ ಅಂತ ನನಗೆ ಯಾರೋ ಹೇಳಿದ್ದರು. ಸರಿ ಆಗಿಲ್ಲ ಎಂದರೆ ಅಂತ್ಯ ಆಗಿಲ್ಲ ಎಂದು ಅರ್ಥ. ಪಿಕ್ಚರ್​ ಇನ್ನೂ ಬಾಕಿ ಇದೆ ಮೇರೆ ದೋಸ್ತ್​. ಆ ಮಾತಿನ ಮೇಲೆ ನನಗೆ ನಂಬಿಕೆ ಇದೆ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ. 2023ರಲ್ಲಿ ಅವರು ‘ಜವಾನ್​’, ‘ಪಠಾಣ್​’, ‘ಡಂಕಿ’ ಸಿನಿಮಾಗಳ ಮೂಲಕ ಗೆಲುವ ಕಂಡಿದ್ದಾರೆ.

ಇದನ್ನೂ ಓದಿ: ವಿಶ್ವಾದ್ಯಂತ 444 ಕೋಟಿ ರೂಪಾಯಿ ಗಳಿಸಿದ ‘ಡಂಕಿ’; ಶಾರುಖ್​ಗೆ ಹ್ಯಾಟ್ರಿಕ್ ಗೆಲುವು

‘ಒಂದಷ್ಟು ವರ್ಷಗಳ ಹಿಂದೆ ಪ್ರಶಸ್ತಿ ಪಡೆದಾಗ ಅದನ್ನು ಮನೆಗೆ ತೆಗೆದುಕೊಂಡು ಹೋಗಿ ಮಕ್ಕಳಿಗೆ ನೀಡುತ್ತಿದ್ದೆ. ಅದರಿಂದ ಅವರ ಬದುಕಿಗೆ ಪ್ರೋತ್ಸಾಹ ಸಿಗುತ್ತಿತ್ತು. ಕಳೆದ ಕೆಲವು ವರ್ಷಗಳಿಂದ ನನ್ನ ಕುಟುಂಬಕ್ಕೆ ಈ ಪ್ರೋತ್ಸಾಹದ ಅಗತ್ಯವಿತ್ತು. ಹಾಗಾಗಿ ಅವರಿಗೋಸ್ಕರ ನಾನು ಈ ಪ್ರಶಸ್ತಿಯನ್ನು ಮನೆಗೆ ತೆಗೆದುಕೊಂಡು ಹೋಗುತ್ತೇನೆ’ ಎಂದು ಶಾರುಖ್​ ಖಾನ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ