‘ಜವಾನ್’ ಸಿನಿಮಾ ಶೂಟಿಂಗ್ ಸೆಟ್​​ನಲ್ಲಿ ಶಾರುಖ್ ಖಾನ್ ತಮಿಳು ಮಾತನಾಡಿದ ಅಪರೂಪದ ವಿಡಿಯೋ

‘ಜವಾನ್’ಸಿನಿಮಾದಲ್ಲಿ ‘ಚಲಿಯಾ..’ ಹಾಡು ಇದೆ. ಈ ಹಾಡಿನಲ್ಲಿ ಬರುವ ತಮಿಳಿನ ಸಾಲಿಗಾಗಿ ಅವರು ಈ ತಯಾರಿ ಮಾಡಿಕೊಂಡಿದ್ದರು. ಶಾರುಖ್ ಖಾನ್ ಅವರು ಸೆಟ್​ನಲ್ಲಿ ತಮಿಳು ಮಾತನಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಅವರು ಕಷ್ಟಪಟ್ಟು ಅಟ್ಲಿ ಜೊತೆ ತಮಿಳಿನಲ್ಲಿ ಮಾತನಾಡುತ್ತಾರೆ. ಈ ವಿಡಿಯೋ ಸಖತ್ ಫನ್ನಿಯಾಗಿದೆ.

‘ಜವಾನ್’ ಸಿನಿಮಾ ಶೂಟಿಂಗ್ ಸೆಟ್​​ನಲ್ಲಿ ಶಾರುಖ್ ಖಾನ್ ತಮಿಳು ಮಾತನಾಡಿದ ಅಪರೂಪದ ವಿಡಿಯೋ
ಶಾರುಖ್-ಅಟ್ಲಿ
Follow us
|

Updated on: Sep 14, 2023 | 10:55 AM

‘ಜವಾನ್’ ಸಿನಿಮಾ (Jawan Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಈ ನಿರೀಕ್ಷೆ ಹುಸಿ ಆಗಿಲ್ಲ. ವಾರದ ದಿನಗಳಲ್ಲೂ ಸಿನಿಮಾ ಕೋಟಿ ಕೋಟಿ ರೂಪಾಯಿ ಗಳಿಕೆ ಮಾಡುತ್ತಿದೆ. ಬುಧವಾರ (ಸೆಪ್ಟೆಂಬರ್ 14) ಈ ಚಿತ್ರ ಹಿಂದಿಯಲ್ಲಿ 21 ಕೋಟಿ ರೂಪಾಯಿ ಗಳಿಕೆ ಮಾಡಿಕೊಂಡಿದೆ. ಈ ಚಿತ್ರದ ಶೂಟಿಂಗ್ ಸಖತ್ ಫನ್ ಆಗಿತ್ತು. ಅದನ್ನು ತಂಡದವರು ಹಲವು ಬಾರಿ ಹೇಳಿಕೊಂಡಿದ್ದಿದೆ. ಈಗ ‘ಜವಾನ್’ ಸಿನಿಮಾ ಶೂಟಿಂಗ್ ಸಂದರ್ಭದ ವಿಡಿಯೋ ಒಂದು ವೈರಲ್ ಆಗಿದೆ.

ಶಾರುಖ್ ಖಾನ್ ಬಾಲಿವುಡ್​ನವರು. ಅವರು ಹಿಂದಿಯನ್ನೇ ಮಾತನಾಡುತ್ತಾ ಬರುತ್ತಿದ್ದಾರೆ. ಹೀಗಾಗಿ ಅವರಿಗೆ ತಮಿಳು ಭಾಷೆ ಹೊಸದು. ಆದರೆ, ‘ಜವಾನ್’ ಸಿನಿಮಾದಲ್ಲಿ ತಮಿಳು ಮಾತನಾಡುವವರ ಜೊತೆ ಒಳ್ಳೆಯ ಒಡನಾಟ ಬೆಳೆಯಿತು. ನಿರ್ದೇಶಕ ಅಟ್ಲಿ ಅವರು ತಮಿಳುನಾಡಿನವರು. ಪಾತ್ರವರ್ಗದಲ್ಲಿರುವ ನಯನತಾರಾ, ವಿಜಯ್ ಸೇತುಪತಿ ಹಾಗೂ ಪ್ರಿಯಾಮಣಿಗೂ ತಮಿಳು ಭಾಷೆ ಬರುತ್ತದೆ. ಈ ಕಾರಣದಿಂದ ಸಿನಿಮಾದ ಹಾಡೊಂದರಲ್ಲಿ ತಮಿಳಿನ ಸಾಲನ್ನು ಬೆರೆಸಲಾಗಿದೆ.

‘ಜವಾನ್’ಸಿನಿಮಾದಲ್ಲಿ ‘ಚಲಿಯಾ..’ ಹಾಡು ಇದೆ. ಈ ಹಾಡಿನಲ್ಲಿ ಬರುವ ತಮಿಳಿನ ಸಾಲಿಗಾಗಿ ಅವರು ಈ ತಯಾರಿ ಮಾಡಿಕೊಂಡಿದ್ದರು. ಶಾರುಖ್ ಖಾನ್ ಅವರು ಸೆಟ್​ನಲ್ಲಿ ತಮಿಳು ಮಾತನಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ಅವರು ಕಷ್ಟಪಟ್ಟು ಅಟ್ಲಿ ಜೊತೆ ತಮಿಳಿನಲ್ಲಿ ಮಾತನಾಡುತ್ತಾರೆ. ಈ ವಿಡಿಯೋ ಸಖತ್ ಫನ್ನಿಯಾಗಿದೆ. ಸದ್ಯ ಅಭಿಮಾನಿಗಳ ವಲಯದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಶಾರುಖ್ ಖಾನ್ ಅವರು ಸಾಕಷ್ಟು ಶ್ರದ್ಧೆಯಿಂದ ಈ ಸಾಲುಗಳನ್ನು ಕಲಿತು ಹೇಳಿದ್ದಾರೆ.

View this post on Instagram

A post shared by Maha (@mahasrk1)

ಇದನ್ನೂ ಓದಿ: ‘ಜವಾನ್​ 2’ ಬಗ್ಗೆ ಈಗಲೇ ಶುರುವಾಗಿದೆ ಚರ್ಚೆ; ನಟಿ ಸಾನ್ಯಾ ಮಲ್ಹೋತ್ರಾ ಹೇಳೋದೇನು?

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಮೊದಲ ದಿನವೇ ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಸಿನಿಮಾ ಈಗಲೂ ಒಳ್ಳೆಯ ಗಳಿಕೆ ಮಾಡುತ್ತಿದೆ. ಹಿಂದಿ ಭಾಗದಲ್ಲಿ ಚಿತ್ರಕ್ಕೆ ಒಳ್ಳೆಯ ಗಳಿಕೆ ಆಗುತ್ತಿದೆ. ಮುಂದಿನ ವಾರ ಗಣೇಶ ಚತುರ್ಥಿ ಪ್ರಯುಕ್ತ ರಜೆ ಇದೆ. ಇದು ಚಿತ್ರಕ್ಕೆ ಸಹಕಾರಿ ಆಗಲಿದೆ. ಶೀಘ್ರವೇ ಶಾರುಖ್ ಖಾನ್ ಅವರು ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​