AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ತಮ್ಮದೇ ನಿರ್ಮಾಣ ಸಂಸ್ಥೆಗೆ ದೊಡ್ಡ ಲಾಭ ಮಾಡಿಕೊಟ್ಟ ಶಾರುಖ್ ಖಾನ್; ‘ಡಂಕಿ’, ‘ಜವಾನ್​’ನಿಂದ ಬಂದ ಹಣ ಎಷ್ಟು?

‘ಜವಾನ್’ ಸಿನಿಮಾದ ಸ್ಯಾಟಲೈಟ್, ಡಿಜಿಟಲ್ ಹಾಗೂ ಮ್ಯೂಸಿಕ್ ರೈಟ್ಸ್ ಬರೋಬ್ಬರಿ 250 ಕೋಟಿ ರೂಪಾಯಿಗೆ ಮಾರಾಟ ಆಗಿದೆಯಂತೆ. ಡಂಕಿ ಸಿನಿಮಾ ಕೂಡ ಇದರಲ್ಲಿ ಹಿಂದೆ ಬಿದ್ದಿಲ್ಲ.

Shah Rukh Khan: ತಮ್ಮದೇ ನಿರ್ಮಾಣ ಸಂಸ್ಥೆಗೆ ದೊಡ್ಡ ಲಾಭ ಮಾಡಿಕೊಟ್ಟ ಶಾರುಖ್ ಖಾನ್; ‘ಡಂಕಿ’, ‘ಜವಾನ್​’ನಿಂದ ಬಂದ ಹಣ ಎಷ್ಟು?
ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on: Jul 05, 2023 | 2:20 PM

Share

ಶಾರುಖ್ ಖಾನ್ (Shah Rukh Khan) ಎಂಬ ಹೆಸರು ಈಗ ಬ್ರ್ಯಾಂಡ್ ಆಗಿದೆ. ಅವರ ಸಿನಿಮಾಗಳು ಒಳ್ಳೆಯ ಬಿಸ್ನೆಸ್ ಮಾಡುತ್ತವೆ. ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಯಶಸ್ಸು ಕಂಡ ಬಳಿಕ ಅವರ ಬೇಡಿಕೆ ಹೆಚ್ಚಿದೆ. ‘ಜವಾನ್’ ಹಾಗೂ ‘ಡಂಕಿ’ (Dunki Movie) ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಎರಡೂ ಚಿತ್ರಗಳಿಗೆ ಶಾರುಖ್ ಖಾನ್ ಅವರೇ ಬಂಡವಾಳ ಹೂಡಿದ್ದಾರೆ. ಈ ಎರಡೂ ಸಿನಿಮಾಗಳಿಂದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್​’ಗೆ ದೊಡ್ಡ ಲಾಭ ಆಗಿದೆ ಎನ್ನಲಾಗುತ್ತಿದೆ.

‘ಜವಾನ್’ ಚಿತ್ರಕ್ಕೆ ಅಟ್ಲಿ ಅವರ ನಿರ್ದೇಶನ ಇದೆ. ತಮಿಳು ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಅವರು ಈ ಚಿತ್ರದ ಮೂಲಕ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಶಾರುಖ್​ಗೆ ಜೊತೆಯಾಗಿ ನಯನತಾರಾ ನಟಿಸಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಸೈನಿಕನಾಗಿ ಶಾರುಖ್ ಖಾನ್ ನಟಿಸುತ್ತಿದ್ದಾರೆ. ದೇಶಭಕ್ತಿ ಪ್ರಧಾನ ಸಿನಿಮಾ ಇದಾಗಿರಲಿದೆ ಎಂಬುದು ಅನೇಕರ ಊಹೆ. ಇನ್ನು, ‘ಡಂಕಿ’ ಸಿನಿಮಾ ಬಗ್ಗೆಯೂ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರವನ್ನು ಗೆಲುವಿನ ಸರದಾರ ರಾಜ್​ಕುಮಾರ್ ಹಿರಾನಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೊದಲ ಗ್ಲಿಂಪ್ಸ್​ ಗಮನ ಸೆಳೆದಿದೆ. ಈ ಸಿನಿಮಾಗಳು ಶೂಟಿಂಗ್ ಹಂತದಲ್ಲಿರುವಾಗಲೇ ಒಳ್ಳೆಯ ಬಿಸ್ನೆಸ್ ಮಾಡಿವೆ.

ಪಿಂಕ್​ವಿಲ್ಲಾ ವರದಿ ಮಾಡಿರುವ ಪ್ರಕಾರ, ‘ಜವಾನ್’ ಸಿನಿಮಾದ ಸ್ಯಾಟಲೈಟ್, ಡಿಜಿಟಲ್ ಹಾಗೂ ಮ್ಯೂಸಿಕ್ ರೈಟ್ಸ್ ಬರೋಬ್ಬರಿ 250 ಕೋಟಿ ರೂಪಾಯಿಗೆ ಮಾರಾಟ ಆಗಿದೆಯಂತೆ. ಇನ್ನು, ‘ಡಂಕಿ’ ಸಿನಿಮಾದಿಂದ 230 ಕೋಟಿ ರೂಪಾಯಿ ಬಿಸ್ನೆಸ್ ಆಗಿದೆ ಎಂದು ವರದಿ ಆಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾಗೆ ದೊಡ್ಡ ಲಾಭ ಆಗಿದೆ.

ಇದನ್ನೂ ಓದಿ: Shah Rukh Khan: ಅಮೆರಿಕದಲ್ಲಿ ಶೂಟಿಂಗ್ ವೇಳೆ ಅವಘಡ; ನಟ ಶಾರುಖ್ ಖಾನ್ ಮೂಗಿಗೆ ಬಲವಾದ ಪೆಟ್ಟು

ಬಿಡುಗಡೆ ಪೂರ್ವ ಬಿಸ್ನೆಸ್ ಕೂಡ ಬಾಕ್ಸ್ ಆಫೀಸ್ ಗಳಿಕೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ರಿಲೀಸ್​ಗೂ ಮೊದಲೇ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡಿದರೆ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗುತ್ತದೆ. ಆಗ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಬಿಸ್ನೆಸ್ ಮಾಡುವ ಸಾಧ್ಯತೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ