AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಶಾರುಖ್ ಖಾನ್-ಹಿರಾನಿ ಸಿನಿಮಾಗೆ ಆರಂಭದಲ್ಲೇ ಹಿನ್ನಡೆ; ಸಿನಿಮಾದಿಂದ ಹೊರ ನಡೆದ ಪ್ರಮುಖ ವ್ಯಕ್ತಿ

‘ಡಂಕಿ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಕಂಬ್ಯಾಕ್ ಮಾಡಿದ ನಂತರ ಶಾರುಖ್ ಖಾನ್ ಒಪ್ಪಿಕೊಂಡ ಮೂರನೇ ಚಿತ್ರ ಇದಾಗಿದೆ. ಇನ್ನು, ಸೋಲೇ ಕಾಣದೇ ಇರುವ ರಾಜ್​ಕುಮಾರ್ ಹಿರಾನಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳುತ್ತಿದ್ದಾರೆ.

 ಶಾರುಖ್ ಖಾನ್-ಹಿರಾನಿ ಸಿನಿಮಾಗೆ ಆರಂಭದಲ್ಲೇ ಹಿನ್ನಡೆ; ಸಿನಿಮಾದಿಂದ ಹೊರ ನಡೆದ ಪ್ರಮುಖ ವ್ಯಕ್ತಿ
ಹಿರಾನಿ-ಶಾರುಖ್
TV9 Web
| Edited By: |

Updated on: Jul 12, 2022 | 6:45 PM

Share

ಶಾರುಖ್ ಖಾನ್ (Shah Rukh Khan) ಅವರು ‘ಡಂಕಿ’ ಸಿನಿಮಾದ (Dunki Movie) ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸುಮಾರು 20 ದಿನಗಳ ಕಾಲ ಸಿನಿಮಾದ ಶೂಟಿಂಗ್ ಕೂಡ ಪೂರ್ಣಗೊಂಡಿತ್ತು. ಈಗ ಚಿತ್ರಕ್ಕೆ ಆಘಾತ ಎದುರಾಗಿದೆ. ಪ್ರಮುಖ ತಂತ್ರಜ್ಞರೊಬ್ಬರು ಚಿತ್ರದಿಂದ ಹೊರ ನಡೆದಿದ್ದಾರೆ. ಇದರಿಂದ ಚಿತ್ರಕ್ಕೆ ಹಿನ್ನಡೆ ಆಗಿದೆ. ಈ ಬಗ್ಗೆ ಶಾರುಖ್ ಖಾನ್ ಫ್ಯಾನ್ಸ್ ಕೊಂಚ ಬೇಸರಗೊಂಡಿದ್ದಾರೆ.

‘ಡಂಕಿ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಇದಕ್ಕೆ ಕಾರಣ ಹಲವು. ಕಂಬ್ಯಾಕ್ ಮಾಡಿದ ನಂತರ ಶಾರುಖ್ ಖಾನ್ ಒಪ್ಪಿಕೊಂಡ ಮೂರನೇ ಚಿತ್ರ ಇದಾಗಿದೆ. ಇನ್ನು, ಸೋಲೇ ಕಾಣದೇ ಇರುವ ರಾಜ್​ಕುಮಾರ್ ಹಿರಾನಿ ಅವರು ಈ ಚಿತ್ರಕ್ಕೆ ಆ್ಯಕ್ಷನ್​ ಕಟ್ ಹೇಳುತ್ತಿದ್ದಾರೆ. ಈ ಚಿತ್ರಕ್ಕೆ ಅಮಿತ್ ರಾಯ್ ಛಾಯಾಗ್ರಹಣ ಮಾಡಬೇಕಿತ್ತು. ಈಗ ಅವರು ಚಿತ್ರದಿಂದ ಹೊರ ನಡೆದಿರುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಅಮಿತ್ ಅವರು 2003ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ‘ಇಷ್ಕ್​ ವಿಷ್ಕ್​’ (2003) ಅವರ ಮೊದಲ ಸಿನಿಮಾ. ನಂತರ, ‘ದಿಲ್ ಮಾಂಗೆ ಮೋರ್​’ (2004), ‘ರಾಮ್ ಗೋಪಾಲ್ ವರ್ಮಾ ಕಿ ಆಗ್​’ (2007), ‘ಸರ್ಕಾರ್​ ರಾಜ್​’ (2008), ‘ದೀವಾನಾ ಮೇ ದೀವಾನಾ’ (2013) ಮೊದಲಾದ ಚಿತ್ರಗಳಿಗೆ ಅವರು ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಿಂದ ಹೊರ ನಡೆದ ಬಗ್ಗೆ ಅವರು ಇಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ನಾನು ಡಂಕಿ ಸಿನಿಮಾ ಮಾಡುತ್ತಿಲ್ಲ. 18-19 ದಿನಗಳ ಕಾಲ ಶೂಟಿಂಗ್ ಮಾಡಿದೆ. ನಂತರ ಹೊರಬಂದೆ. ರಾಜ್​ಕುಮಾರ್ ಹಿರಾನಿ ಹಾಗೂ ನನ್ನ ಆಲೋಚನೆಗಳು ಬೇರೆ ರೀತಿಯಲ್ಲಿವೆ. ಇಬ್ಬರೂ ಒಂದೇ ರೀತಿಯಲ್ಲಿ ಯೋಚಿಸಲು ಸಾಧ್ಯವಾಗಿಲ್ಲ. ನಾವಿಬ್ಬರೂ ಸೌಹಾರ್ದಯುತವಾಗಿಯೇ ಬೇರೆ ಆಗಿದ್ದೇವೆ’ ಎಂದು ಅಮಿತ್​ ಹೇಳಿಕೊಂಡಿದ್ದಾರೆ.

‘ನಾನು ‘ಸಂಜು’ ಚಿತ್ರಕ್ಕಾಗಿ ‘ಬಾಬಾ ಬೋಲ್ತಾ ಹೈ ಬಸ್ ಹೋ ಗಯಾ..’ ಹಾಡನ್ನು ಶೂಟ್ ಮಾಡಿಕೊಟ್ಟಿದ್ದೆ. ಆಗ ನಾವಿಬ್ಬರೂ ಖುಷಿಯಿಂದ ಸಮಯ ಕಳೆದಿದ್ದೇವೆ. ಅವರ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯ ಇದೆ. ‘ಡಂಕಿ’ ಚಿತ್ರದಲ್ಲಿ ನಾನು ತೆಗದ ಶಾಟ್​ಗಳನ್ನು ಹಾಗೆಯೇ ಇಟ್ಟುಕೊಳ್ಳಲಾಗಿದೆ’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಶಾರುಖ್ ಖಾನ್ ಅಸಲಿ ವಯಸ್ಸೆಷ್ಟು? ಫ್ಯಾನ್ಸ್​ಗೆ ಹುಟ್ಟಿದೆ ದೊಡ್ಡ ಅನುಮಾನ

ಜಿಯೋ ಸ್ಟುಡಿಯೋ, ರೆಡ್​ ಚಿಲ್ಲೀಸ್ ಎಂಟರ್​​ಟೇನ್​ಮೆಂಟ್ ಹಾಗೂ ರಾಜ್​ಕುಮಾರ್ ಹಿರಾನಿ ಫಿಲ್ಮ್ಸ್​ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. 2023ರ ಡಿಸೆಂಬರ್ 22ರಂದು ಚಿತ್ರ ತೆರೆಗೆ ಬರುತ್ತಿದೆ. ಈಗ ಚಿತ್ರಕ್ಕೆ ಬರುವ ಹೊಸ ಕ್ಯಾಮೆರಾಮ್ಯಾನ್​ ಯಾರು ಎಂಬ ಕೌತುಕ ಮೂಡಿದೆ.

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ