AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಾದ್ಯಂತ 444 ಕೋಟಿ ರೂಪಾಯಿ ಗಳಿಸಿದ ‘ಡಂಕಿ’; ಶಾರುಖ್​ಗೆ ಹ್ಯಾಟ್ರಿಕ್ ಗೆಲುವು

‘ಡಂಕಿ’ ಸಿನಿಮಾ ಕ್ಲಾಸ್​ ಆಗಿ ಮೂಡಿಬಂದಿದೆ. ಹಾಗಾಗಿ ಈ ಸಿನಿಮಾ ಮೊದಲ ದಿನ ದೊಡ್ಡ ಓಪನಿಂಗ್​ ಪಡೆದುಕೊಳ್ಳಲಿಲ್ಲ. ‘ಪಠಾಣ್​’ ಮತ್ತು ‘ಜವಾನ್​’ ಸಿನಿಮಾಗಳ ರೀತಿ ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಕೂಡ ಮಾಡಲಿಲ್ಲ. ಆದರೂ ವಿಶ್ವಾದ್ಯಂತ 444 ಕೋಟಿ ರೂಪಾಯಿ ಗಳಿಸುವಲ್ಲಿ ಯಶಸ್ವಿಯಾಗಿದೆ.

ವಿಶ್ವಾದ್ಯಂತ 444 ಕೋಟಿ ರೂಪಾಯಿ ಗಳಿಸಿದ ‘ಡಂಕಿ’; ಶಾರುಖ್​ಗೆ ಹ್ಯಾಟ್ರಿಕ್ ಗೆಲುವು
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Jan 09, 2024 | 10:57 AM

Share

2023ರಲ್ಲಿ ಶಾರುಖ್​ ಖಾನ್​ (Shah Rukh Khan) ಅವರು ‘ಪಠಾಣ್​’ ಮತ್ತು ‘ಜವಾನ್​’ ಸಿನಿಮಾ ಮೂಲಕ ಭರ್ಜರಿ ಗೆಲುವು ಕಂಡಿದ್ದರು. ಆದರೆ ಮೂರನೇ ಸಿನಿಮಾ ‘ಡಂಕಿ’ ಅಂದುಕೊಂಡ ಮಟ್ಟಕ್ಕೆ ಕಲೆಕ್ಷನ್​ ಮಾಡಲಿಲ್ಲ. ಹಾಗಂತ ಈ ಸಿನಿಮಾ ಸೋತಿಲ್ಲ. 19 ದಿನಗಳ ಕಾಲ ಪ್ರದರ್ಶನ ಕಂಡಿರುವ ಡಂಕಿ’ ಸಿನಿಮಾ (Dunki Movie) ವಿಶ್ವಾದ್ಯಂತ ಉತ್ತಮವಾಗಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾದ ಕಲೆಕ್ಷನ್​ (Dunki Box Office Collection) 444 ಕೋಟಿ ರೂಪಾಯಿ ಆಗಿದೆ. ಈ ಮಾಹಿತಿಯನ್ನು ಸ್ವತಃ ‘ಡಂಕಿ’ ಚಿತ್ರತಂಡವೇ ಹಂಚಿಕೊಂಡಿದೆ. ಈ ಗೆಲುವಿನ ಮೂಲಕ ಶಾರುಖ್​ ಖಾನ್​ ಅವರಿಗೆ 2023ರಲ್ಲಿ ಹ್ಯಾಟ್ರಿಕ್​ ಯಶಸ್ಸು ಸಿಕ್ಕಂತೆ ಆಗಿದೆ.

‘ಡಂಕಿ’ ಸಿನಿಮಾ ಕ್ಲಾಸ್​ ಆಗಿ ಮೂಡಿಬಂದಿದೆ. ಹಾಗಾಗಿ ಈ ಸಿನಿಮಾ ಮೊದಲ ದಿನ ದೊಡ್ಡ ಓಪನಿಂಗ್​ ಪಡೆದುಕೊಳ್ಳಲಿಲ್ಲ. ‘ಪಠಾಣ್​’ ಮತ್ತು ‘ಜವಾನ್​’ ಸಿನಿಮಾಗಳ ರೀತಿ ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್​ ಕೂಡ ಮಾಡಲಿಲ್ಲ. ಆದರೆ ಹಾಕಿದ ಬಂಡವಾಳಕ್ಕೆ ಮೋಸ ಆಗಿಲ್ಲ. ವಿಶ್ವಾದ್ಯಂತ ಬಿಡುಗಡೆ ಆದ ಈ ಸಿನಿಮಾ 444 ಕೋಟಿ ರೂಪಾಯಿ ಗಳಿಸುವಲ್ಲಿ ಸಫಲವಾಗಿದೆ.

ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಕಳ್ಳದಾರಿಯ ಮೂಲಕ ವಿದೇಶಕ್ಕೆ ಪ್ರಯಾಣ ಮಾಡುವ ಯುವಕರ ಕಥೆಯನ್ನು ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ. ಈ ಸಿನಿಮಾಗೆ ರಾಜ್​ಕುಮಾರ್​ ಹಿರಾನಿ ಅವರು ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​, ಬೊಮನ್​ ಇರಾನಿ, ವಿಕ್ಕಿ ಕೌಶಲ್​, ತಾಪ್ಸಿ ಪನ್ನು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ.

ಇದನ್ನೂ ಓದಿ: ‘ವಯಸ್ಸಿಗೆ ತಕ್ಕ ಪಾತ್ರ ಮಾಡ್ತೀನಿ’: ಮುಂದಿನ ಪ್ಲ್ಯಾನ್​ ತಿಳಿಸಿದ ಶಾರುಖ್ ಖಾನ್​

ಶಾರುಖ್​ ಖಾನ್​ ಅವರ ಮೂರು ಸಿನಿಮಾಗಳು 2023ರಲ್ಲಿ ಬಂಗಾರದ ಬೆಳೆ ತೆಗೆದಿವೆ. 2024ರಲ್ಲಿ ಅವರ ಸಿನಿಮಾಗಳ ಸಂಖ್ಯೆ ಕಡಿಮೆ ಆಗಬಹುದು. ಯಾಕೆಂದರೆ, ಇನ್ನೂ ಅವರು ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಸ್ಕ್ರಿಪ್ಟ್​ ಆಯ್ಕೆಯಲ್ಲಿ ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರೆ. ವಯಸ್ಸಿಗೆ ತಕ್ಕ ಪಾತ್ರ ಮಾಡುವುದಾಗಿ ಅವರು ಇತ್ತೀಚಿನ ಸಂದರ್ಶನದಲ್ಲಿ ಸುಳಿವು ನೀಡಿದ್ದರು. ಹಾಗಾಗಿ ಅವರ ಮುಂದಿನ ಪ್ರಾಜೆಕ್ಟ್​ ಬಗ್ಗೆ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು