Dunki: ‘ಯು/ಎ’ ಪ್ರಮಾಣಪತ್ರ ಪಡೆದ ‘ಡಂಕಿ’; ಸಿನಿಮಾದ ಅವಧಿ ಬಗ್ಗೆಯೂ ಸಿಕ್ತು ಮಾಹಿತಿ

‘ಡಂಕಿ’ ಸಿನಿಮಾದಲ್ಲಿನ ಕೆಲವು ದೃಶ್ಯಗಳಿಗೆ ಸೆನ್ಸಾರ್​ ಸದಸ್ಯರು ಬದಲಾವಣೆ ಸೂಚಿಸಿದ್ದಾರೆ. ಆ ಎಲ್ಲ ಸೂಚನೆಗಳನ್ನು ಪಾಲಿಸಿದ ಬಳಿಕ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಲಾಗಿದೆ. ಡಿಸೆಂಬರ್​ 21ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಶಾರುಖ್​ ಖಾನ್​ ಅಭಿಮಾನಿಗಳು ‘ಡಂಕಿ’ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Dunki: ‘ಯು/ಎ’ ಪ್ರಮಾಣಪತ್ರ ಪಡೆದ ‘ಡಂಕಿ’; ಸಿನಿಮಾದ ಅವಧಿ ಬಗ್ಗೆಯೂ ಸಿಕ್ತು ಮಾಹಿತಿ
ಶಾರುಖ್​ ಖಾನ್​
Follow us
|

Updated on: Dec 17, 2023 | 8:05 AM

ನಟ ಶಾರುಖ್​ ಖಾನ್​ (Shah Rukh Khan) ಹಾಗೂ ತಾಪ್ಸಿ ಪನ್ನು ಅವರು ಜೋಡಿಯಾಗಿ ನಟಿಸಿರುವ ಡಂಕಿ’ (Dunki) ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಡಿಸೆಂಬರ್​ 21ರಂದು ಈ ಸಿನಿಮಾ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್​ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ರಾಜ್​ಕುಮಾರ್​ ಹಿರಾನಿ ನಿರ್ದೇಶನ ಮಾಡಿರುವ ಸಿನಿಮಾ ಆದ್ದರಿಂದ ನಿರೀಕ್ಷೆ ಡಬಲ್​ ಆಗಿದೆ. ಈಗ ‘ಡಂಕಿ’ ಸಿನಿಮಾದ ಸೆನ್ಸಾರ್​ ಪ್ರಕ್ರಿಯೆ ಮುಗಿದಿದ್ದು, ಯು/ಎ ಪ್ರಮಾಣಪತ್ರ (UA Certificate) ಪಡೆದುಕೊಂಡಿದೆ. ಅಲ್ಲದೇ, ಸಿನಿಮಾದ ಅವಧಿ 2 ಗಂಟೆ 41 ನಿಮಿಷ ಇದೆ ಎಂಬುದು ಕೂಡ ತಿಳಿದುಬಂದಿದೆ.

ಯು/ಎ ಪ್ರಮಾಣ ಪತ್ರ ಸಿಕ್ಕರೆ ಚಿತ್ರಕ್ಕೆ ತುಂಬ ಅನುಕೂಲ ಆಗುತ್ತದೆ. 18 ವರ್ಷಕ್ಕಿಂತ ಕಿರಿಯ ಪ್ರೇಕ್ಷಕರು ಕೂಡ ಪಾಲಕರ ಜೊತೆ ಬಂದು ಈ ಸಿನಿಮಾವನ್ನು ನೋಡಬಹುದು. ಹಾಗಾಗಿ ಮಕ್ಕಳೊಂದಿಗೆ ಬಂದು ‘ಡಂಕಿ’ ಸಿನಿಮಾವನ್ನು ವೀಕ್ಷಿಸಬೇಕು ಎಂದುಕೊಂಡ ಪ್ರೇಕ್ಷಕರಿಗೆ ಯಾವುದೇ ಅಡ್ಡಿ ಇರುವುದಿಲ್ಲ. ಇದರಿಂದ ಫ್ಯಾಮಿಲಿ ಪ್ರೇಕ್ಷಕರನ್ನು ಚಿತ್ರ ಸೆಳೆದುಕೊಳ್ಳುತ್ತದೆ.

ಇದನ್ನೂ ಓದಿ: ‘ಡಂಕಿ’ ಚಿತ್ರದ ರಿಲೀಸ್​ ಟೆನ್ಷನ್​ ಮರೆತು ಮಾಲ್ಡೀವ್ಸ್​ಗೆ ತೆರಳಿದ ತಾಪ್ಸಿ ಪನ್ನು

‘ಡಂಕಿ’ ಸಿನಿಮಾದಲ್ಲಿನ ಕೆಲವು ದೃಶ್ಯಗಳಿಗೆ ಸೆನ್ಸಾರ್​ ಸದಸ್ಯರು ಬದಲಾವಣೆ ಸೂಚಿಸಿದ್ದಾರೆ. ಆತ್ಮಹತ್ಯೆಯ ದೃಶ್ಯ ಇರುವಲ್ಲಿ ‘ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ’ ಎಂಬ ಸೂಚನೆಯನ್ನು ನೀಡಲು ತಿಳಿಸಲಾಗಿದೆ. ಅಲ್ಲದೇ ಸಿನಿಮಾದ ಕೊನೆಯಲ್ಲಿ ತೋರಿಸಿದ ಕೆಲವು ವಿಷಯಗಳಿಗೆ ಪುರಾವೆ ಒದಗಿಸುವಂತೆ ಸೂಚಿಸಲಾಗಿದೆ. ಈ ಎಲ್ಲ ಸೂಚನೆಗಳನ್ನು ಪಾಲಿಸಿದ ಬಳಿಕ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ನೀಡಲಾಗಿದೆ.

ಇದನ್ನೂ ಓದಿ: ‘ಜವಾನ್​’, ‘ಪಠಾಣ್​’ ರೀತಿಯೇ ‘ಡಂಕಿ’ ಕೂಡ ಹಿಟ್​ ಆಗುತ್ತೆ ಎಂಬುದಕ್ಕೆ ಇಲ್ಲಿವೆ ಕಾರಣಗಳು..

ರಾಜ್​ಕುಮಾರ್​ ಹಿರಾನಿ ಅವರ ಸಿನಿಮಾದಲ್ಲಿ ಕಥೆಗೆ ಹೆಚ್ಚು ಮಹತ್ವ ನೀಡಲಾಗಿರುತ್ತದೆ. ಇದೇ ಮೊದಲ ಬಾರಿಗೆ ಅವರು ಶಾರುಖ್​ ಖಾನ್​ ಜೊತೆ ಕೈ ಜೋಡಿಸಿರುವುದರಿಂದ ಕೌತುಕ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಬೋಮನ್ ಇರಾನಿ, ವಿಕ್ಕಿ ಕೌಶಲ್​ ಮುಂತಾದ ಕಲಾವಿದರು ಕೂಡ ನಟಿಸಿದ್ದಾರೆ. ವಲಸೆಯ ಕುರಿತ ಕಥೆ ‘ಡಂಕಿ’ ಚಿತ್ರದಲ್ಲಿ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ಕಾದು ನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ