AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ‘ಸಲಾರ್’ Vs ‘ಡಂಕಿ’; ಪ್ರಭಾಸ್-ಶಾರುಖ್ ಮಧ್ಯೆ ಗೆಲ್ಲೋರು ಯಾರು?

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾ ಹಾಗೂ ಶಾರುಖ್ ಸಿನಿಮಾ ಮುಖಾಮುಖಿ ಆಗುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಶಾರುಖ್ ಅಭಿನಯದ ‘ಜೀರೋ’ ಹಾಗೂ ಹೊಂಬಾಳೆ ನಿರ್ಮಾಣದ ‘ಡಂಕಿ’ ಸಿನಿಮಾ ಒಟ್ಟಾಗಿ ರಿಲೀಸ್ ಆಗಿತ್ತು. ಆ ವೇಳೆ ‘ಕೆಜಿಎಫ್’ ಗೆದ್ದಿತ್ತು.

ಬಾಕ್ಸ್ ಆಫೀಸ್​ನಲ್ಲಿ ‘ಸಲಾರ್’ Vs ‘ಡಂಕಿ’; ಪ್ರಭಾಸ್-ಶಾರುಖ್ ಮಧ್ಯೆ ಗೆಲ್ಲೋರು ಯಾರು?
ಶಾರುಖ್​-ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on:Sep 26, 2023 | 7:57 AM

Share

ಎಲ್ಲವೂ ಅಂದುಕೊಂಡಂತೆ ನಡೆದರೆ ‘ಸಲಾರ್’ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದಕ್ಕೆ ಹೋಯಿತು. ಈಗ ಸಿನಿಮಾ ಕ್ರಿಸ್​ಮಸ್​ಗೆ ಬರೋಕೆ ರೆಡಿ ಆಗಿದೆ. ಒಂದೊಮ್ಮೆ ಈ ಸುದ್ದಿ ನಿಜವೇ ಆದಲ್ಲಿ ‘ಸಲಾರ್’ ಹಾಗೂ ಶಾರುಖ್ ಖಾನ್ (Shah Rukh Khan) ನಟನೆಯ ‘ಡಂಕಿ’ ಮಧ್ಯೆ ಭರ್ಜರಿ ಕ್ಲ್ಯಾಶ್ ಏರ್ಪಡಲಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ. ಹೊಂಬಾಳೆ ಫಿಲ್ಮ್ಸ್ ಶೀಘ್ರವೇ ಈ ಬಗ್ಗೆ ಘೋಷಣೆ ಮಾಡಲಿದೆ.

‘ಸಲಾರ್’ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಗಮನ ಸೆಳೆದಿದೆ. ಈ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿತ್ತು. ಮೂಲಗಳ ಪ್ರಕಾರ ‘ಕೆಜಿಎಫ್ 2’ ಚಿತ್ರಕ್ಕೂ ‘ಸಲಾರ್’ಗೂ ಲಿಂಕ್ ಇದೆ ಎಂದು ಹೇಳಲಾಗುತ್ತಿದೆ. ಈಗ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

‘ಹೌದು ಇದು ನಿಜ. ಎಸ್​ಆರ್​ಕೆ vs ಪ್ರಭಾಸ್. ಈ ಕ್ರಿಸ್​ಮಸ್​ಗೆ ‘ಡಂಕಿ’ vs ಸಲಾರ್. ಸಲಾರ್ ಕ್ರಿಸ್​ಮಸ್​ಗೆ ರಿಲೀಸ್ ಆಗಲಿದೆ ಎಂದು ಪ್ರದರ್ಶಕರಿಗೆ ಮೇಲ್ ಬಂದಿದೆ. ಶುಕ್ರವಾರ (ಸೆಪ್ಟೆಂಬರ್ 29) ನಿರ್ಮಾಪಕರು ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ’ ಎಂದು ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಸಲಾರ್​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಕಡೆಗೂ ಮೌನ ಮುರಿದ ‘ಹೊಂಬಾಳೆ ಫಿಲ್ಮ್ಸ್​’

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾ ಹಾಗೂ ಶಾರುಖ್ ಸಿನಿಮಾ ಮುಖಾಮುಖಿ ಆಗುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಶಾರುಖ್ ಅಭಿನಯದ ‘ಜೀರೋ’ ಹಾಗೂ ಹೊಂಬಾಳೆ ನಿರ್ಮಾಣದ ‘ಕೆಜಿಎಫ್’ ಸಿನಿಮಾ ಒಟ್ಟಾಗಿ ರಿಲೀಸ್ ಆಗಿತ್ತು. ಆ ವೇಳೆ ‘ಕೆಜಿಎಫ್’ ಗೆದ್ದಿತ್ತು. ಈಗ ಯಾವ ಸಿನಿಮಾ ರೂಲ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಗ್ಗೆ ಚರ್ಚೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Tue, 26 September 23

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ