AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್’ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ನಿಂದ ಸಿಕ್ತು ಯುಎ ಪ್ರಮಾಣಪತ್ರ; ಸಿನಿಮಾ ಅವಧಿ ಎಷ್ಟು?

ಸಿನಿಮಾದಲ್ಲಿ ವಿವಾದಾತ್ಮಕ ವಿಚಾರ ಇದ್ದರೆ ಮುಂದೆ ದೊಡ್ಡ ಮಟ್ಟದಲ್ಲಿ ವಿವಾದ ಉಂಟಾಗಬಹುದು. ಸಿನಿಮಾ ಬ್ಯಾನ್​ಗೆ ಒತ್ತಾಯ ಬರಬಹುದು. ಈ ಕಾರಣದಿಂದಲೇ ಸೆನ್ಸಾರ್ ಮಂಡಳಿಯವರು ಹೆಚ್ಚು ಎಚ್ಚರಿಕೆಯಿಂದ ಸಿನಿಮಾ ನೋಡುತ್ತಾರೆ. ‘ಜವಾನ್’ ಚಿತ್ರದ ಯಾವುದೇ ದೃಶ್ಯಕ್ಕೂ ಕತ್ತರಿ ಬಿದ್ದಿಲ್ಲ. ಹೀಗಾಗಿ, ಸಿನಿಮಾದಲ್ಲಿ ಯಾವುದೇ ವಿವಾದಾತ್ಮಕ ಅಂಶ ಇಲ್ಲ ಎಂಬುದು ಪಕ್ಕಾ ಆಗಿದೆ.

‘ಜವಾನ್’ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ನಿಂದ ಸಿಕ್ತು ಯುಎ ಪ್ರಮಾಣಪತ್ರ; ಸಿನಿಮಾ ಅವಧಿ ಎಷ್ಟು?
ಶಾರುಖ್ ಖಾನ್ ಜವಾನ್
ರಾಜೇಶ್ ದುಗ್ಗುಮನೆ
|

Updated on:Aug 23, 2023 | 12:26 PM

Share

‘ಜವಾನ್’ ಸಿನಿಮಾ (Jawan Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸೆಪ್ಟೆಂಬರ್ 7ರಂದು ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಈ ಚಿತ್ರದ ಪ್ರಿವ್ಯೂ ವಿಡಿಯೋ ನೋಡಿದ ಅನೇಕರಿಗೆ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದು ಸ್ಪಷ್ಟವಾಗಿದೆ. ಈ ಸಿನಿಮಾ ಭರ್ಜರಿ ಕಮಾಯಿ ಮಾಡುವ ಮುನ್ಸೂಚನೆ ಸಿಕ್ಕಿದೆ. ಈ ಬೆನ್ನಲ್ಲೇ ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಂಡಿದೆ. ವಿಶೇಷ ಎಂದರೆ ಚಿತ್ರದ ಯಾವುದೇ ದೃಶ್ಯಕ್ಕೆ ಕತ್ತರಿ ಪ್ರಯೋಗ ಆಗಿಲ್ಲ. ಇದು ಶಾರುಖ್ (Shah Rukh Khan) ಅಭಿಮಾನಿಗಳಿಗೆ ಖುಷಿ ನೀಡಿದೆ. ಚಿತ್ರದ ಟ್ರೇಲರ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

‘ಜವಾನ್’ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಎಲ್ಲರೂ ಸಿನಿಮಾ ವೀಕ್ಷಿಸಬಹುದು. ಆದರೆ, 18 ವರ್ಷ ಒಳಗಿನವರು ಪೋಷಕರ ಮಾರ್ಗದರ್ಶನದಲ್ಲಿ ಸಿನಿಮಾ ನೋಡಬಹುದು. ಇನ್ನು ಸಿನಿಮಾದ ಅವಧಿ 169.14 ನಿಮಿಷ ಇದೆ. ಅಂದರೆ ಸಿನಿಮಾದ ರನ್​ಟೈಮ್ ಎರಡು ಗಂಟೆ ನಲವತ್ತೊಂಭತ್ತು ನಿಮಿಷ ಇರಲಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷಿಸಲಾಗುತ್ತಿದೆ.

ಸಿನಿಮಾದಲ್ಲಿ ವಿವಾದಾತ್ಮಕ ವಿಚಾರ ಇದ್ದರೆ ಮುಂದೆ ದೊಡ್ಡ ಮಟ್ಟದಲ್ಲಿ ವಿವಾದ ಉಂಟಾಗಬಹುದು. ಸಿನಿಮಾ ಬ್ಯಾನ್​ಗೆ ಒತ್ತಾಯ ಬರಬಹುದು. ಈ ಕಾರಣದಿಂದಲೇ ಸೆನ್ಸಾರ್ ಮಂಡಳಿಯವರು ಹೆಚ್ಚು ಎಚ್ಚರಿಕೆಯಿಂದ ಸಿನಿಮಾ ನೋಡುತ್ತಾರೆ. ಏನಾದರೂ ವಿವಾದಾತ್ಮಕ ಅಂಶ ಕಂಡರೆ ಕತ್ತರಿ ಪ್ರಯೋಗ ಮಾಡಲು ಸೂಚಿಸುತ್ತಾರೆ. ಆದರೆ, ‘ಜವಾನ್’ ಚಿತ್ರದ ಯಾವುದೇ ದೃಶ್ಯಕ್ಕೂ ಕತ್ತರಿ ಬಿದ್ದಿಲ್ಲ. ಹೀಗಾಗಿ, ಸಿನಿಮಾದಲ್ಲಿ ಯಾವುದೇ ವಿವಾದಾತ್ಮಕ ಅಂಶ ಇಲ್ಲ ಎಂಬುದು ಪಕ್ಕಾ ಆಗಿದೆ.

ಇದನ್ನೂ ಓದಿ: ಹೆಚ್ಚಿತು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕ್ರೇಜ್​; 21 ದಿನ ಮೊದಲೇ ಬುಕಿಂಗ್ ಓಪನ್

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಕಾರಣದಿಂದ ಶಾರುಖ್ ಖಾನ್ ಅಭಿಮಾನಿಗಳಿಗೆ ‘ಜವಾನ್’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರೋ ಅಟ್ಲೀ ಅವರು ‘ಜವಾನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಭಾರತದ ಕಲಾವಿದರಾದ ನಯನತಾರಾ, ವಿಜಯ್​ ಸೇತುಪತಿ ಮೊದಲಾದವರು ನಟಿಸಿದ್ದಾರೆ. ಶಾರುಖ್ ಖಾನ್ ಸೈನಿಕನ ಪಾತ್ರದಲ್ಲಿ ಕಾಣಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:16 pm, Wed, 23 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!