AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನಿ ಹೈಸ್ಟ್’ ಸೀರಿಸ್​ ಆಧರಿಸಿ ಸಿದ್ಧಗೊಂಡಿತಾ ‘ಜವಾನ್’? ಹೊರಬಿತ್ತು ಅಸಲಿ ವಿಚಾರ

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಪ್ರಿವ್ಯೂ ವಿಡಿಯೋ ನೋಡಿದ ಬಳಿಕ ಕೆಲವರು ಇದನ್ನು ಸ್ಪಾನಿಶ್ ವೆಬ್ ಸೀರಿಸ್ ‘ಮನಿ ಹೈಸ್ಟ್’ಗೆ ಹೋಲಿಕೆ ಮಾಡಿದ್ದರು. ‘ಜವಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ಅವರದ್ದು ಪ್ರೊಫೆಸರ್ ಪಾತ್ರ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಆದರೆ, ಆ ರೀತಿ ಇಲ್ಲ ಎಂಬುದು ಚಿತ್ರತಂಡದ ಸ್ಪಷ್ಟನೆ.

‘ಮನಿ ಹೈಸ್ಟ್’ ಸೀರಿಸ್​ ಆಧರಿಸಿ ಸಿದ್ಧಗೊಂಡಿತಾ ‘ಜವಾನ್’? ಹೊರಬಿತ್ತು ಅಸಲಿ ವಿಚಾರ
ಜವಾನ್-ಶಾರುಖ್ ಖಾನ್
ರಾಜೇಶ್ ದುಗ್ಗುಮನೆ
|

Updated on:Aug 26, 2023 | 9:06 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಸೆಪ್ಟೆಂಬರ್ 7ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಈ ಚಿತ್ರವನ್ನು ಅಟ್ಲಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಪಠಾಣ್’ (Pathaan Movie) ರಿಲೀಸ್ ಬಳಿಕ ತೆರೆಗೆ ಬರುತ್ತಿರುವ ಅವರ ಮುಂದಿನ ಸಿನಿಮಾ ಇದು ಎನ್ನುವ ಕಾರಣಕ್ಕೂ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದಕ್ಕೆ ಪ್ರಿವ್ಯೂ ವಿಡಿಯೋದಲ್ಲಿ ಸಾಕ್ಷಿ ಸಿಕ್ಕಿತ್ತು. ಈ ವಿಡಿಯೋ ನೋಡಿದ ಬಳಿಕ ಎಲ್ಲರಲ್ಲೂ ಒಂದು ಅನುಮಾನ ಸೃಷ್ಟಿ ಆಗಿತ್ತು. ಆ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಪ್ರಿವ್ಯೂ ವಿಡಿಯೋ ನೋಡಿದ ಬಳಿಕ ಕೆಲವರು ಇದನ್ನು ಸ್ಪಾನಿಶ್ ವೆಬ್ ಸೀರಿಸ್ ‘ಮನಿ ಹೈಸ್ಟ್’ಗೆ ಹೋಲಿಕೆ ಮಾಡಿದ್ದರು. ಇಡೀ ಬ್ಯಾಂಕ್​ನ ದರೋಡೆ ಮಾಡಲು ಪ್ರೊಫೆಸರ್ ಸಿದ್ಧನಾಗುತ್ತಾನೆ. ಆತ ಬೇರೆಯವರಿಗೆ ತರಬೇತಿ ನೀಡಿ ಬ್ಯಾಂಕ್​ನ ಕೊಳ್ಳೆ ಹೊಡೆಯುತ್ತಾನೆ. ‘ಜವಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ಅವರದ್ದು ಪ್ರೊಫೆಸರ್ ಪಾತ್ರ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಆದರೆ, ಆ ರೀತಿ ಇಲ್ಲ ಎಂಬುದು ಚಿತ್ರತಂಡದ ಸ್ಪಷ್ಟನೆ.

‘ಜವಾನ್’ ಸಿನಿಮಾದಲ್ಲಿ ಕಾಸ್ಟಿಂಗ್ ಡೈರೆಕ್ಟರ್ ಆಗಿರುವ ಮುಕೇಶ್ ಛಬ್ರಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಯಾರಿಗೆ ಯಾವ ರೀತಿಯಲ್ಲಿ ಊಹೆ ಮಾಡಬೇಕನಿಸಿತೋ ಮಾಡಿಕೊಳ್ಳಿ. ಆದರೆ, ಜವಾನ್ ರಿಲೀಸ್ ಆದಾಗ ನಿಮಗೆ ಸಿನಿಮಾ ಏನೆಂಬುದು ತಿಳಿಯುತ್ತದೆ. ಟ್ರೇಲರ್ ರಿಲೀಸ್ ಆದ ಬಳಿಕ ನನಗೆ ಸಾಕಷ್ಟು ಮೆಸೇಜ್​ಗಳು ಬಂದವು. ಆದರೆ, ನಾನು ಏನನ್ನೂ ಬಿಟ್ಟುಕೊಟ್ಟಿಲ್ಲ. ಇದನ್ನು ದೊಡ್ಡ ಪರದೆಮೇಲೆ ನೋಡಿ ಕಣ್ತುಂಬಿಕೊಳ್ಳಲಿ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ತಮಿಳು ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಜೊತೆ ನಯನಾತಾರಾ, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ ಮೊದಲಾದವರು ನಟಿಸಿದ್ದಾರೆ. ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್ ಮೂಲಕ ಗೌರಿ ಖಾನ್ ಚಿತ್ರ ನಿರ್ಮಾಣ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:11 am, Sat, 26 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು