AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ತಂಡದವರ ವಿರುದ್ಧವೇ ಕೇಸ್ ಹಾಕಿದ ಶಾರುಖ್ ಖಾನ್; ಏನು ಕಾರಣ?

ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದ್ದಾಗ ಆ ಚಿತ್ರದ ಕ್ಲಿಪ್, ಸೆಟ್​​ನ ಫೋಟೋ ಹಾಗೂ ಮ್ಯೂಸಿಕ್​ಗಳನ್ನು ಲೀಕ್ ಮಾಡಲಾಗುತ್ತದೆ. ‘ಜವಾನ್’ ಚಿತ್ರಕ್ಕೂ ಇದೇ ತೊಂದರೆ ಎದುರಾಗಿದೆ. ಕೆಲವರು ಈ ಚಿತ್ರದ ಕ್ಲಿಪ್​ನ ಹರಿಬಿಟ್ಟಿದ್ದು, ಶಾರುಖ್ ಖಾನ್ ಚಿಂತೆಗೆ ಕಾರಣ ಆಗಿದೆ. ಹಾಗಾಗಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

‘ಜವಾನ್​’ ತಂಡದವರ ವಿರುದ್ಧವೇ ಕೇಸ್ ಹಾಕಿದ ಶಾರುಖ್ ಖಾನ್; ಏನು ಕಾರಣ?
ಜವಾನ್​ ಸಿನಿಮಾ ಪೋಸ್ಟರ್​
Follow us
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​

Updated on: Aug 13, 2023 | 8:49 AM

ನಟ ಶಾರುಖ್ ಖಾನ್ (Shah Rukh Khan) ಅಭಿನಯದ ‘ಜವಾನ್’ ಸಿನಿಮಾ (Jawan Movie) ಬಗ್ಗೆ ಮೂಡಿರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈ ಸಿನಿಮಾ ಅಪೂರ್ವ ಸಂಗಮಕ್ಕೆ ಸಾಕ್ಷಿ ಆಗಿದೆ. ಬಾಲಿವುಡ್​ ನಟ ಶಾರುಖ್ ಖಾನ್​ ಹಾಗೂ ತಮಿಳು ನಿರ್ದೇಶಕ ಅಟ್ಲೀ ಅವರು ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಶಾರುಖ್ ಚಿತ್ರದಲ್ಲಿ ವಿಜಯ್ ಸೇತುಪತಿ ಇದೇ ಮೊದಲ ಬಾರಿಗೆ ವಿಲನ್ ಪಾತ್ರ ಮಾಡಿದ್ದಾರೆ. ಶಾರುಖ್ ಖಾನ್ ಜೊತೆ ನಯನತಾರಾ ತೆರೆ ಹಂಚಿಕೊಂಡಿದ್ದಾರೆ. ಇಷ್ಟೆಲ್ಲ ವಿಶೇಷತೆಗಳನ್ನು ಹೊಂದಿರುವ ಈ ಚಿತ್ರ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಮಧ್ಯೆ ಶಾರುಖ್​ ಖಾನ್ ಒಡೆತನದ ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್ (Red Chillies Entertainment) ದೂರೊಂದನ್ನು ನೀಡಿದೆ. ಇದನ್ನು ಆಧರಿಸಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದ್ದಾಗ ಆ ಚಿತ್ರದ ಕ್ಲಿಪ್, ಸೆಟ್​​ನ ಫೋಟೋ ಹಾಗೂ ಮ್ಯೂಸಿಕ್​ಗಳನ್ನು ಲೀಕ್ ಮಾಡಲಾಗುತ್ತದೆ. ‘ಜವಾನ್’ ಚಿತ್ರಕ್ಕೂ ಇದೇ ತೊಂದರೆ ಎದುರಾಗಿದೆ. ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿರುವುದರಿಂದ ಕೆಲವರು ಈ ಚಿತ್ರದ ಕ್ಲಿಪ್​ನ ಹರಿಬಿಟ್ಟಿದ್ದಾರೆ. ಇದು ಶಾರುಖ್ ಖಾನ್ ಚಿಂತೆಗೆ ಕಾರಣ ಆಗಿದೆ. ಈ ಕಾರಣಕ್ಕೆ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

‘ಸುಮ್ಮನಿರಿ.. 2 ಮಕ್ಕಳ ತಾಯಿ ಅವರು’: ನಯನತಾರಾ ಮೇಲೆ ಲವ್​ ಆಯ್ತಾ ಅಂತ ಕೇಳಿದ್ದಕ್ಕೆ ಶಾರುಖ್​ ಉತ್ತರ

ಆಗಸ್ಟ್ 10ರಂದು ಮುಂಬೈನ ಸಾಂತಾಕ್ರ್ಯೂಜ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕ್ಲಿಪ್ ಲೀಕ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾರುಖ್ ಖಾನ್ ಸೂಚಿಸಿದ್ದಾರೆ ಎನ್ನಲಾಗಿದೆ. ಸಿನಿಮಾದ ಕ್ಲಿಪ್​ಗಳು ತಂಡದವರನ್ನು ಹೊರತುಪಡಿಸಿ ಮತ್ತಾರಿಗೂ ಸಿಗುವುದಿಲ್ಲ. ಶಾರುಖ್​ಗೆ ಈ ಬಗ್ಗೆ ಅನುಮಾನ ಮೂಡಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಹೀಗಾಗಿ ಶಾರುಖ್ ಖಾನ್ ತಂಡದವರ ವಿರುದ್ಧವೇ ಕೇಸ್ ಹಾಕಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಜವಾನ್​ ಸಿನಿಮಾ ಬಗ್ಗೆ ಶಾರುಖ್ ಖಾನ್ ಟ್ವೀಟ್​:

‘ಜವಾನ್’ ಸಿನಿಮಾದ ಕ್ಲಿಪ್​ಗಳು ಲೀಕ್ ಆಗಿದ್ದು ಇದೇ ಮೊದಲೇನೂ ಅಲ್ಲ. ಶೂಟಿಂಗ್ ಆರಂಭ ಆದಾಗಿನಿಂದಲೂ ತಂಡಕ್ಕೆ ಈ ರೀತಿಯ ತೊಂದರೆ ಎದುರಾಗುತ್ತಲೇ ಇದೆ. ಈ ಮೊದಲು ಕೂಡ ರೆಡ್​ ಚಿಲ್ಲೀಸ್​ನವರು ಕೋರ್ಟ್ ಮೆಟ್ಟಿಲು ಹತ್ತಿದ್ದರು. ತಂಡದ ಪರವಾಗಿ ಕೋರ್ಟ್ ಆದೇಶ ನೀಡಿತ್ತು. ಲೀಕ್ ಆದ ಕ್ಲಿಪ್​ಗಳನ್ನು ತೆಗೆಯುವಂತೆ ಸೋಶಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೆ ಕೋರ್ಟ್ ಆದೇಶ ನೀಡಿತ್ತು. ಇನ್ನು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಲೀಕ್ ತಪ್ಪಿಸಲು ಮೊಬೈಲ್ ಫೋನ್​ಗಳ ಮೇಲೆ ಬ್ಯಾನ್ ಹೇರಲಾಗಿತ್ತು.

ಇದನ್ನೂ ಓದಿ: ಜೋರಾಯ್ತು ‘ಜವಾನ್​’ ಚಿತ್ರದ ಹವಾ; ಕೆಲವೇ ನಿಮಿಷಗಳಲ್ಲಿ ಮಿಲಿಯನ್​ ದಾಟಿದ ‘ಜಿಂದಾ ಬಂದಾ’ ಹಾಡಿನ ವೀಕ್ಷಣೆ

‘ಜವಾನ್​’ ಚಿತ್ರವನ್ನು ರೆಡ್ ಚಿಲ್ಲೀಸ್ ಬ್ಯಾನರ್ ಅಡಿಯಲ್ಲಿ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ನಿರ್ಮಾಣ ಮಾಡುತ್ತಿದ್ದಾರೆ. ತಮಿಳಿನಲ್ಲಿ ಬ್ಯಾಕ್​ ಟು ಬ್ಯಾಕ್ ಹಿಟ್ ನೀಡಿರುವ ಅಟ್ಲೀ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ದೊಡ್ಡ ತಾರಾ ಬಳಗ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ಪ್ರಿವ್ಯೂ ವಿಡಿಯೋ ಹಾಗೂ ಟೀಸರ್ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?