AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ತಂಡದವರ ವಿರುದ್ಧವೇ ಕೇಸ್ ಹಾಕಿದ ಶಾರುಖ್ ಖಾನ್; ಏನು ಕಾರಣ?

ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದ್ದಾಗ ಆ ಚಿತ್ರದ ಕ್ಲಿಪ್, ಸೆಟ್​​ನ ಫೋಟೋ ಹಾಗೂ ಮ್ಯೂಸಿಕ್​ಗಳನ್ನು ಲೀಕ್ ಮಾಡಲಾಗುತ್ತದೆ. ‘ಜವಾನ್’ ಚಿತ್ರಕ್ಕೂ ಇದೇ ತೊಂದರೆ ಎದುರಾಗಿದೆ. ಕೆಲವರು ಈ ಚಿತ್ರದ ಕ್ಲಿಪ್​ನ ಹರಿಬಿಟ್ಟಿದ್ದು, ಶಾರುಖ್ ಖಾನ್ ಚಿಂತೆಗೆ ಕಾರಣ ಆಗಿದೆ. ಹಾಗಾಗಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

‘ಜವಾನ್​’ ತಂಡದವರ ವಿರುದ್ಧವೇ ಕೇಸ್ ಹಾಕಿದ ಶಾರುಖ್ ಖಾನ್; ಏನು ಕಾರಣ?
ಜವಾನ್​ ಸಿನಿಮಾ ಪೋಸ್ಟರ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 13, 2023 | 8:49 AM

Share

ನಟ ಶಾರುಖ್ ಖಾನ್ (Shah Rukh Khan) ಅಭಿನಯದ ‘ಜವಾನ್’ ಸಿನಿಮಾ (Jawan Movie) ಬಗ್ಗೆ ಮೂಡಿರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈ ಸಿನಿಮಾ ಅಪೂರ್ವ ಸಂಗಮಕ್ಕೆ ಸಾಕ್ಷಿ ಆಗಿದೆ. ಬಾಲಿವುಡ್​ ನಟ ಶಾರುಖ್ ಖಾನ್​ ಹಾಗೂ ತಮಿಳು ನಿರ್ದೇಶಕ ಅಟ್ಲೀ ಅವರು ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ. ಶಾರುಖ್ ಚಿತ್ರದಲ್ಲಿ ವಿಜಯ್ ಸೇತುಪತಿ ಇದೇ ಮೊದಲ ಬಾರಿಗೆ ವಿಲನ್ ಪಾತ್ರ ಮಾಡಿದ್ದಾರೆ. ಶಾರುಖ್ ಖಾನ್ ಜೊತೆ ನಯನತಾರಾ ತೆರೆ ಹಂಚಿಕೊಂಡಿದ್ದಾರೆ. ಇಷ್ಟೆಲ್ಲ ವಿಶೇಷತೆಗಳನ್ನು ಹೊಂದಿರುವ ಈ ಚಿತ್ರ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಈ ಮಧ್ಯೆ ಶಾರುಖ್​ ಖಾನ್ ಒಡೆತನದ ರೆಡ್​ ಚಿಲ್ಲೀಸ್ ಎಂಟರ್​ಟೇನ್​ಮೆಂಟ್ (Red Chillies Entertainment) ದೂರೊಂದನ್ನು ನೀಡಿದೆ. ಇದನ್ನು ಆಧರಿಸಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದ್ದಾಗ ಆ ಚಿತ್ರದ ಕ್ಲಿಪ್, ಸೆಟ್​​ನ ಫೋಟೋ ಹಾಗೂ ಮ್ಯೂಸಿಕ್​ಗಳನ್ನು ಲೀಕ್ ಮಾಡಲಾಗುತ್ತದೆ. ‘ಜವಾನ್’ ಚಿತ್ರಕ್ಕೂ ಇದೇ ತೊಂದರೆ ಎದುರಾಗಿದೆ. ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿರುವುದರಿಂದ ಕೆಲವರು ಈ ಚಿತ್ರದ ಕ್ಲಿಪ್​ನ ಹರಿಬಿಟ್ಟಿದ್ದಾರೆ. ಇದು ಶಾರುಖ್ ಖಾನ್ ಚಿಂತೆಗೆ ಕಾರಣ ಆಗಿದೆ. ಈ ಕಾರಣಕ್ಕೆ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

‘ಸುಮ್ಮನಿರಿ.. 2 ಮಕ್ಕಳ ತಾಯಿ ಅವರು’: ನಯನತಾರಾ ಮೇಲೆ ಲವ್​ ಆಯ್ತಾ ಅಂತ ಕೇಳಿದ್ದಕ್ಕೆ ಶಾರುಖ್​ ಉತ್ತರ

ಆಗಸ್ಟ್ 10ರಂದು ಮುಂಬೈನ ಸಾಂತಾಕ್ರ್ಯೂಜ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕ್ಲಿಪ್ ಲೀಕ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾರುಖ್ ಖಾನ್ ಸೂಚಿಸಿದ್ದಾರೆ ಎನ್ನಲಾಗಿದೆ. ಸಿನಿಮಾದ ಕ್ಲಿಪ್​ಗಳು ತಂಡದವರನ್ನು ಹೊರತುಪಡಿಸಿ ಮತ್ತಾರಿಗೂ ಸಿಗುವುದಿಲ್ಲ. ಶಾರುಖ್​ಗೆ ಈ ಬಗ್ಗೆ ಅನುಮಾನ ಮೂಡಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಹೀಗಾಗಿ ಶಾರುಖ್ ಖಾನ್ ತಂಡದವರ ವಿರುದ್ಧವೇ ಕೇಸ್ ಹಾಕಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಜವಾನ್​ ಸಿನಿಮಾ ಬಗ್ಗೆ ಶಾರುಖ್ ಖಾನ್ ಟ್ವೀಟ್​:

‘ಜವಾನ್’ ಸಿನಿಮಾದ ಕ್ಲಿಪ್​ಗಳು ಲೀಕ್ ಆಗಿದ್ದು ಇದೇ ಮೊದಲೇನೂ ಅಲ್ಲ. ಶೂಟಿಂಗ್ ಆರಂಭ ಆದಾಗಿನಿಂದಲೂ ತಂಡಕ್ಕೆ ಈ ರೀತಿಯ ತೊಂದರೆ ಎದುರಾಗುತ್ತಲೇ ಇದೆ. ಈ ಮೊದಲು ಕೂಡ ರೆಡ್​ ಚಿಲ್ಲೀಸ್​ನವರು ಕೋರ್ಟ್ ಮೆಟ್ಟಿಲು ಹತ್ತಿದ್ದರು. ತಂಡದ ಪರವಾಗಿ ಕೋರ್ಟ್ ಆದೇಶ ನೀಡಿತ್ತು. ಲೀಕ್ ಆದ ಕ್ಲಿಪ್​ಗಳನ್ನು ತೆಗೆಯುವಂತೆ ಸೋಶಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೆ ಕೋರ್ಟ್ ಆದೇಶ ನೀಡಿತ್ತು. ಇನ್ನು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಲೀಕ್ ತಪ್ಪಿಸಲು ಮೊಬೈಲ್ ಫೋನ್​ಗಳ ಮೇಲೆ ಬ್ಯಾನ್ ಹೇರಲಾಗಿತ್ತು.

ಇದನ್ನೂ ಓದಿ: ಜೋರಾಯ್ತು ‘ಜವಾನ್​’ ಚಿತ್ರದ ಹವಾ; ಕೆಲವೇ ನಿಮಿಷಗಳಲ್ಲಿ ಮಿಲಿಯನ್​ ದಾಟಿದ ‘ಜಿಂದಾ ಬಂದಾ’ ಹಾಡಿನ ವೀಕ್ಷಣೆ

‘ಜವಾನ್​’ ಚಿತ್ರವನ್ನು ರೆಡ್ ಚಿಲ್ಲೀಸ್ ಬ್ಯಾನರ್ ಅಡಿಯಲ್ಲಿ ಶಾರುಖ್ ಖಾನ್ ಪತ್ನಿ ಗೌರಿ ಖಾನ್ ನಿರ್ಮಾಣ ಮಾಡುತ್ತಿದ್ದಾರೆ. ತಮಿಳಿನಲ್ಲಿ ಬ್ಯಾಕ್​ ಟು ಬ್ಯಾಕ್ ಹಿಟ್ ನೀಡಿರುವ ಅಟ್ಲೀ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ದೊಡ್ಡ ತಾರಾ ಬಳಗ ಚಿತ್ರಕ್ಕಿದೆ. ಈಗಾಗಲೇ ಚಿತ್ರದ ಪ್ರಿವ್ಯೂ ವಿಡಿಯೋ ಹಾಗೂ ಟೀಸರ್ ಗಮನ ಸೆಳೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?