ಬೆಂಗಳೂರಿನಲ್ಲಿ 2400 ರೂಪಾಯಿಗೆ ಮಾರಾಟ ಆಗುತ್ತಿದೆ ‘ಜವಾನ್’ ಸಿನಿಮಾ ಟಿಕೆಟ್; ಕನಿಷ್ಠ ಬೆಲೆ ಎಷ್ಟು?

ಶಾರುಖ್ ಖಾನ್ ಅವರು ಮಾಸ್ ಅವತಾರ ತಾಳುತ್ತಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಸಖತ್ ಆ್ಯಕ್ಷನ್ ಮೆರೆದಿದ್ದರು. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಅನ್ನೋದಕ್ಕೆ ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್​ಗಳೇ ಸಾಕ್ಷಿ. ಇದರಿಂದ ಸಹಜವಾಗಿಯೇ ಟಿಕೆಟ್ ದರ ಹೆಚ್ಚಿದೆ.

ಬೆಂಗಳೂರಿನಲ್ಲಿ 2400 ರೂಪಾಯಿಗೆ ಮಾರಾಟ ಆಗುತ್ತಿದೆ ‘ಜವಾನ್’ ಸಿನಿಮಾ ಟಿಕೆಟ್; ಕನಿಷ್ಠ ಬೆಲೆ ಎಷ್ಟು?
ಜವಾನ್​ ಸಿನಿಮಾ ಪೋಸ್ಟರ್​
Follow us
|

Updated on: Sep 01, 2023 | 2:28 PM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಟ್ರೇಲರ್ ಮೂಲಕ ಗಮನ ಸೆಳೆಯುತ್ತಿದೆ. ಈ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ಹಲವು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ರಿಲೀಸ್​ಗೆ ಒಂದು ವಾರ ಇರುವಾಗ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಶಾರುಖ್ ಖಾನ್ ನಟನೆಯ ಈ ಚಿತ್ರದ ಟಿಕೆಟ್ ಬೆಲೆ ಗಗನಕ್ಕೇರಿದೆ. ಬೆಂಗಳೂರಿನಲ್ಲಿ 2400 ರೂಪಾಯಿವರೆಗೆ ‘ಜವಾನ್’ ಸಿನಿಮಾದ ಟಿಕೆಟ್​ಗಳು ಮಾರಾಟ ಆಗುತ್ತಿವೆ.

ಶಾರುಖ್ ಖಾನ್ ಅವರು ಮಾಸ್ ಅವತಾರ ತಾಳುತ್ತಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಸಖತ್ ಆ್ಯಕ್ಷನ್ ಮೆರೆದಿದ್ದರು. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಅನ್ನೋದಕ್ಕೆ ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್​ಗಳೇ ಸಾಕ್ಷಿ . ಇದೊಂದು ರೀತಿಯಲ್ಲಿ ದಕ್ಷಿಣ ಭಾರತ ಹಾಗೂ ಬಾಲಿವುಡ್​ ಸಮ್ಮಿಶ್ರಣದ ಸಿನಿಮಾ. ಈ ಚಿತ್ರದಲ್ಲಿ ಶಾರುಖ್ ಖಾನ್ ಹೀರೋ ಆಗಿ ನಟಿಸಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ‘ಜವಾನ್’ ನಿರ್ದೇಶನ ಮಾಡಿದ್ದಾರೆ. ನಯನತಾರಾ ಚಿತ್ರದ ನಾಯಕಿ. ತಮಿಳು ಹೀರೋ ವಿಜಯ್ ಸೇತುಪತಿ ವಿಲನ್ ಪಾತ್ರ ಮಾಡಿದ್ದಾರೆ. ಬಾಲಿವುಡ್ ನಾಯಕಿಯರಾದ ಸಾನ್ಯಾ ಮಲ್ಹೋತ್ರಾ ಹಾಗೂ ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದ ಭಾರತದಾದ್ಯಂತ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.

ಬೆಂಗಳೂರಿನ ಡೈರೆಕ್ಟರ್ಸ್ ಕಟ್ ಥಿಯೇಟರ್​ನಲ್ಲಿ ‘ಜವಾನ್’ ಟಿಕೆಟ್ ದರ 2400 ರೂಪಾಯಿ ಇದೆ. ಐಷಾರಾಮಿ ಮಲ್ಟಿಪ್ಲೆಕ್ಸ್ ಆಗಿರುವುದರಿಂದ ಟಿಕೆಟ್ ದರ ಇಷ್ಟೊಂದು ದುಬಾರಿ ಇದೆ. ಇನ್ನು, ಸಾಮಾನ್ಯ ಮಲ್ಟಿಪ್ಲೆಕ್ಸ್​ಗಳಲ್ಲೂ ಟಿಕೆಟ್ ದರ ಜೋರಾಗಿಯೇ ಇದೆ. ಲುಲು ಮಾಲ್​ನಲ್ಲಿರುವ ಸಿನಿಪೊಲಿಸ್​ನಲ್ಲಿ ರಾತ್ರಿ ಶೋಗಳ ಟಿಕೆಟ್ ಬೆಲೆ ಗರಿಷ್ಟ 1600 ರೂಪಾಯಿ ಇದೆ. ಬಿನ್ನಿಪೇಟೆ ಸಿನಿಪೊಲಿಸ್​ನಲ್ಲಿ ಗರಿಷ್ಠ ಬೆಲೆ 750 ರೂಪಾಯಿ ಇದೆ.

ಇದನ್ನೂ ಓದಿ: ‘ಜವಾನ್’ ಸಿನಿಮಾ ಆಡಿಯೋ ಲಾಂಚ್​​ಗೆ ಬರಲೇ ಇಲ್ಲ ನಯನತಾರಾ; ಅಸಲಿ ಕಾರಣ ಹುಡುಕಿದ ಫ್ಯಾನ್ಸ್

ಬಹುತೇಕ ಮಲ್ಟಿಪ್ಲೆಕ್ಸ್​ನಲ್ಲಿ 250 ರೂಪಾಯಿಯಿಂದ ‘ಜವಾನ್’ ಸಿನಿಮಾ ಟಿಕೆಟ್ ಬೆಲೆ ಆರಂಭ ಆಗುತ್ತಿದೆ. ಸಿಂಗಲ್ ಸ್ಕ್ರೀನ್​ಗಳಲ್ಲಿನ ದರದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಟಿಕೆಟ್ ದರ ಇಷ್ಟೊಂದು ದುಬಾರಿ ಆದರೆ ಜನಸಾಮಾನ್ಯರು ಸಿನಿಮಾ ನೋಡೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ಮೊದಲು ಸರ್ಕಾರದಿಂದ ಈ ರೀತಿಯ ಕ್ರಮ ಜಾರಿಗೆ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ