AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 2400 ರೂಪಾಯಿಗೆ ಮಾರಾಟ ಆಗುತ್ತಿದೆ ‘ಜವಾನ್’ ಸಿನಿಮಾ ಟಿಕೆಟ್; ಕನಿಷ್ಠ ಬೆಲೆ ಎಷ್ಟು?

ಶಾರುಖ್ ಖಾನ್ ಅವರು ಮಾಸ್ ಅವತಾರ ತಾಳುತ್ತಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಸಖತ್ ಆ್ಯಕ್ಷನ್ ಮೆರೆದಿದ್ದರು. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಅನ್ನೋದಕ್ಕೆ ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್​ಗಳೇ ಸಾಕ್ಷಿ. ಇದರಿಂದ ಸಹಜವಾಗಿಯೇ ಟಿಕೆಟ್ ದರ ಹೆಚ್ಚಿದೆ.

ಬೆಂಗಳೂರಿನಲ್ಲಿ 2400 ರೂಪಾಯಿಗೆ ಮಾರಾಟ ಆಗುತ್ತಿದೆ ‘ಜವಾನ್’ ಸಿನಿಮಾ ಟಿಕೆಟ್; ಕನಿಷ್ಠ ಬೆಲೆ ಎಷ್ಟು?
ಜವಾನ್​ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: Sep 01, 2023 | 2:28 PM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಟ್ರೇಲರ್ ಮೂಲಕ ಗಮನ ಸೆಳೆಯುತ್ತಿದೆ. ಈ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ಹಲವು ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ರಿಲೀಸ್​ಗೆ ಒಂದು ವಾರ ಇರುವಾಗ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಶಾರುಖ್ ಖಾನ್ ನಟನೆಯ ಈ ಚಿತ್ರದ ಟಿಕೆಟ್ ಬೆಲೆ ಗಗನಕ್ಕೇರಿದೆ. ಬೆಂಗಳೂರಿನಲ್ಲಿ 2400 ರೂಪಾಯಿವರೆಗೆ ‘ಜವಾನ್’ ಸಿನಿಮಾದ ಟಿಕೆಟ್​ಗಳು ಮಾರಾಟ ಆಗುತ್ತಿವೆ.

ಶಾರುಖ್ ಖಾನ್ ಅವರು ಮಾಸ್ ಅವತಾರ ತಾಳುತ್ತಿದ್ದಾರೆ. ‘ಪಠಾಣ್’ ಸಿನಿಮಾದಲ್ಲಿ ಅವರು ಸಖತ್ ಆ್ಯಕ್ಷನ್ ಮೆರೆದಿದ್ದರು. ‘ಜವಾನ್’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಅನ್ನೋದಕ್ಕೆ ಪ್ರಿವ್ಯೂ ವಿಡಿಯೋ ಹಾಗೂ ಟ್ರೇಲರ್​ಗಳೇ ಸಾಕ್ಷಿ . ಇದೊಂದು ರೀತಿಯಲ್ಲಿ ದಕ್ಷಿಣ ಭಾರತ ಹಾಗೂ ಬಾಲಿವುಡ್​ ಸಮ್ಮಿಶ್ರಣದ ಸಿನಿಮಾ. ಈ ಚಿತ್ರದಲ್ಲಿ ಶಾರುಖ್ ಖಾನ್ ಹೀರೋ ಆಗಿ ನಟಿಸಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ‘ಜವಾನ್’ ನಿರ್ದೇಶನ ಮಾಡಿದ್ದಾರೆ. ನಯನತಾರಾ ಚಿತ್ರದ ನಾಯಕಿ. ತಮಿಳು ಹೀರೋ ವಿಜಯ್ ಸೇತುಪತಿ ವಿಲನ್ ಪಾತ್ರ ಮಾಡಿದ್ದಾರೆ. ಬಾಲಿವುಡ್ ನಾಯಕಿಯರಾದ ಸಾನ್ಯಾ ಮಲ್ಹೋತ್ರಾ ಹಾಗೂ ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಎಲ್ಲಾ ಕಾರಣಗಳಿಂದ ಭಾರತದಾದ್ಯಂತ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ.

ಬೆಂಗಳೂರಿನ ಡೈರೆಕ್ಟರ್ಸ್ ಕಟ್ ಥಿಯೇಟರ್​ನಲ್ಲಿ ‘ಜವಾನ್’ ಟಿಕೆಟ್ ದರ 2400 ರೂಪಾಯಿ ಇದೆ. ಐಷಾರಾಮಿ ಮಲ್ಟಿಪ್ಲೆಕ್ಸ್ ಆಗಿರುವುದರಿಂದ ಟಿಕೆಟ್ ದರ ಇಷ್ಟೊಂದು ದುಬಾರಿ ಇದೆ. ಇನ್ನು, ಸಾಮಾನ್ಯ ಮಲ್ಟಿಪ್ಲೆಕ್ಸ್​ಗಳಲ್ಲೂ ಟಿಕೆಟ್ ದರ ಜೋರಾಗಿಯೇ ಇದೆ. ಲುಲು ಮಾಲ್​ನಲ್ಲಿರುವ ಸಿನಿಪೊಲಿಸ್​ನಲ್ಲಿ ರಾತ್ರಿ ಶೋಗಳ ಟಿಕೆಟ್ ಬೆಲೆ ಗರಿಷ್ಟ 1600 ರೂಪಾಯಿ ಇದೆ. ಬಿನ್ನಿಪೇಟೆ ಸಿನಿಪೊಲಿಸ್​ನಲ್ಲಿ ಗರಿಷ್ಠ ಬೆಲೆ 750 ರೂಪಾಯಿ ಇದೆ.

ಇದನ್ನೂ ಓದಿ: ‘ಜವಾನ್’ ಸಿನಿಮಾ ಆಡಿಯೋ ಲಾಂಚ್​​ಗೆ ಬರಲೇ ಇಲ್ಲ ನಯನತಾರಾ; ಅಸಲಿ ಕಾರಣ ಹುಡುಕಿದ ಫ್ಯಾನ್ಸ್

ಬಹುತೇಕ ಮಲ್ಟಿಪ್ಲೆಕ್ಸ್​ನಲ್ಲಿ 250 ರೂಪಾಯಿಯಿಂದ ‘ಜವಾನ್’ ಸಿನಿಮಾ ಟಿಕೆಟ್ ಬೆಲೆ ಆರಂಭ ಆಗುತ್ತಿದೆ. ಸಿಂಗಲ್ ಸ್ಕ್ರೀನ್​ಗಳಲ್ಲಿನ ದರದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಟಿಕೆಟ್ ದರ ಇಷ್ಟೊಂದು ದುಬಾರಿ ಆದರೆ ಜನಸಾಮಾನ್ಯರು ಸಿನಿಮಾ ನೋಡೋದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಈ ಮೊದಲು ಸರ್ಕಾರದಿಂದ ಈ ರೀತಿಯ ಕ್ರಮ ಜಾರಿಗೆ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು