AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ

Shah Rukh Khan: ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ‘ಜವಾನ್’ ಸಿನಿಮಾ ಜಪಾನಿ ಭಾಷೆಯಲ್ಲಿ, ಜಪಾನ್ ದೇಶದಲ್ಲಿ ಬಿಡುಗಡೆ ಆಗುತ್ತಿದೆ.

ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on:Sep 13, 2024 | 6:47 PM

Share

ಭಾರತದ ಸಿನಿಮಾಗಳಿಗೆ ಜಪಾನ್ನಲ್ಲಿ ಸಖತ್ ಬೇಡಿಕೆ ಇದೆ ಎಂಬುದು ನಿಮಗೆ ಗೊತ್ತೇ? ಈ ಮೊದಲು ಪ್ರಭಾಸ್ ನಟನೆಯ ‘ಬಾಹುಬಲಿ’ ಸಿನಿಮಾ ಇಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಕನ್ನಡದ ‘ಕೆಜಿಎಫ್’, ರಾಮ್ ಚರಣ್ ಹಾಗೂ ಜೂನಿಯರ್ ಎನ್ಟಿಆರ್ ನಟನೆಯ ‘ಆರ್ಆರ್ಆರ್’ ಕೂಡ ಇಲ್ಲಿ ರಿಲೀಸ್ ಆಗಿತ್ತು. ಈಗ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಸರದಿ. ಚಿತ್ರ ನವೆಂಬರ್ 29ರಂದು ಜಪಾನ್ನಲ್ಲಿ ತೆರೆಗೆ ಬರುತ್ತಿದೆ.

ಅಟ್ಲಿ ಅವರು ‘ಜವಾನ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಗಮನ ಸೆಳೆದಿದೆ. ಈಗ ಈ ಚಿತ್ರವನ್ನು ಜಪಾನ್ಗೆ ಡಬ್ ಮಾಡಿ ರಿಲೀಸ್ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ತಂಡದ ಕಡೆಯಿಂದ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಪ್ಡೇಟ್ ನೀಡಲಾಗಿದೆ.

‘ಜವಾನ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿತ್ತು. ಈ ಸಿನಿಮಾ 2023ರ ಸೆಪ್ಟೆಂಬರ್ನಲ್ಲಿ ರಿಲೀಸ್ ಆಗಿ 1,148 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಸಿನಿಮಾ ಜಪಾನ್ನಲ್ಲಿ ಬಿಡುಗಡೆ ಕಾಣುತ್ತಿರುವುದರಿಂದ ಅಲ್ಲಿಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ:‘ಜವಾನ್’ ಸಿನಿಮಾ ಒಪ್ಪಿಕೊಳ್ಳೋಕೆ ಅಸಲಿ ಕಾರಣ ಕೊಟ್ಟ ನಯನತಾರಾ

‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಮೂಲಕ ಗೌರಿ ಖಾನ್ ಹಾಗೂ ಗೌರವ್ ವರ್ಮಾ ಅವರು ‘ಜವಾನ್’ ಸಿನಿಮಾ ನಿರ್ಮಾಣ ಮಾಡಿದ್ದರು. ಶಾರುಖ್ ಖಾನ್, ವಿಜಯ್ ಸೇತುಪತಿ, ನಯನತಾರಾ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ತಮಿಳಿನ ಅಟ್ಲಿ ಅವರು ಈ ಚಿತ್ರ ನಿರ್ದೇಶನ ಮಾಡಿದ್ದರು. ಸಾಮಾಜಿಕ ಸಮಸ್ಯೆಗಳ ಕುರಿತು ಈ ಸಿನಿಮಾ ಇದೆ.

ಶಾರುಖ್ ಖಾನ್ ಅವರಿಗೆ ಜಪಾನ್ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆಯಂತೆ. ಅಲ್ಲಿನ ಮಂದಿ ಭಾರತದ ಸಿನಿಮಾಗಳನ್ನು ನೋಡಿ ಆ್ಯಕ್ಷನ್ ಚಿತ್ರಗಳನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದಾರೆ. ಶೀಘ್ರವೇ ಅವರು ‘ಕಿಂಗ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. 2025ರ ಅಂತ್ಯಕ್ಕೆ ಅಥವಾ 2026ರಲ್ಲಿ ಈ ಚಿತ್ರ ರಿಲೀಸ್ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Fri, 13 September 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ