AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ

Shah Rukh Khan: ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ‘ಜವಾನ್’ ಸಿನಿಮಾ ಜಪಾನಿ ಭಾಷೆಯಲ್ಲಿ, ಜಪಾನ್ ದೇಶದಲ್ಲಿ ಬಿಡುಗಡೆ ಆಗುತ್ತಿದೆ.

ಜಪಾನ್​ನಲ್ಲಿ ಸದ್ದು ಮಾಡೋಕೆ ರೆಡಿ ಆದ ಶಾರುಖ್ ಖಾನ್ ಸಿನಿಮಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 13, 2024 | 6:47 PM

Share

ಭಾರತದ ಸಿನಿಮಾಗಳಿಗೆ ಜಪಾನ್ನಲ್ಲಿ ಸಖತ್ ಬೇಡಿಕೆ ಇದೆ ಎಂಬುದು ನಿಮಗೆ ಗೊತ್ತೇ? ಈ ಮೊದಲು ಪ್ರಭಾಸ್ ನಟನೆಯ ‘ಬಾಹುಬಲಿ’ ಸಿನಿಮಾ ಇಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಕನ್ನಡದ ‘ಕೆಜಿಎಫ್’, ರಾಮ್ ಚರಣ್ ಹಾಗೂ ಜೂನಿಯರ್ ಎನ್ಟಿಆರ್ ನಟನೆಯ ‘ಆರ್ಆರ್ಆರ್’ ಕೂಡ ಇಲ್ಲಿ ರಿಲೀಸ್ ಆಗಿತ್ತು. ಈಗ ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಸರದಿ. ಚಿತ್ರ ನವೆಂಬರ್ 29ರಂದು ಜಪಾನ್ನಲ್ಲಿ ತೆರೆಗೆ ಬರುತ್ತಿದೆ.

ಅಟ್ಲಿ ಅವರು ‘ಜವಾನ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಗಮನ ಸೆಳೆದಿದೆ. ಈಗ ಈ ಚಿತ್ರವನ್ನು ಜಪಾನ್ಗೆ ಡಬ್ ಮಾಡಿ ರಿಲೀಸ್ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ತಂಡದ ಕಡೆಯಿಂದ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಪ್ಡೇಟ್ ನೀಡಲಾಗಿದೆ.

‘ಜವಾನ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿತ್ತು. ಈ ಸಿನಿಮಾ 2023ರ ಸೆಪ್ಟೆಂಬರ್ನಲ್ಲಿ ರಿಲೀಸ್ ಆಗಿ 1,148 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈಗ ಸಿನಿಮಾ ಜಪಾನ್ನಲ್ಲಿ ಬಿಡುಗಡೆ ಕಾಣುತ್ತಿರುವುದರಿಂದ ಅಲ್ಲಿಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ:‘ಜವಾನ್’ ಸಿನಿಮಾ ಒಪ್ಪಿಕೊಳ್ಳೋಕೆ ಅಸಲಿ ಕಾರಣ ಕೊಟ್ಟ ನಯನತಾರಾ

‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಮೂಲಕ ಗೌರಿ ಖಾನ್ ಹಾಗೂ ಗೌರವ್ ವರ್ಮಾ ಅವರು ‘ಜವಾನ್’ ಸಿನಿಮಾ ನಿರ್ಮಾಣ ಮಾಡಿದ್ದರು. ಶಾರುಖ್ ಖಾನ್, ವಿಜಯ್ ಸೇತುಪತಿ, ನಯನತಾರಾ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸಾನ್ಯಾ ಮಲ್ಹೋತ್ರಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ತಮಿಳಿನ ಅಟ್ಲಿ ಅವರು ಈ ಚಿತ್ರ ನಿರ್ದೇಶನ ಮಾಡಿದ್ದರು. ಸಾಮಾಜಿಕ ಸಮಸ್ಯೆಗಳ ಕುರಿತು ಈ ಸಿನಿಮಾ ಇದೆ.

ಶಾರುಖ್ ಖಾನ್ ಅವರಿಗೆ ಜಪಾನ್ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆಯಂತೆ. ಅಲ್ಲಿನ ಮಂದಿ ಭಾರತದ ಸಿನಿಮಾಗಳನ್ನು ನೋಡಿ ಆ್ಯಕ್ಷನ್ ಚಿತ್ರಗಳನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದಾರೆ. ಶೀಘ್ರವೇ ಅವರು ‘ಕಿಂಗ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. 2025ರ ಅಂತ್ಯಕ್ಕೆ ಅಥವಾ 2026ರಲ್ಲಿ ಈ ಚಿತ್ರ ರಿಲೀಸ್ ಆಗುವ ನಿರೀಕ್ಷೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Fri, 13 September 24

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!