Shah Rukh Khan: ಅಂದುಕೊಂಡಂತೆ ನಡೆಯಲೇ ಇಲ್ಲ ಶಾರುಖ್ ಖಾನ್ ಪ್ಲಾನ್; ‘ಜವಾನ್​’ಗೆ ಹಿನ್ನಡೆ

Jawan Movie: ಶಾರುಖ್ ಖಾನ್ ನಟನೆಯ ಈ ಚಿತ್ರಕ್ಕೆ ನಯನತಾರಾ ನಾಯಕಿ. ವಿಜಯ್ ಸೇತುಪತಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕೆಲಸಗಳು ವಿಳಂಬ ಆಗಿವೆ.

Shah Rukh Khan: ಅಂದುಕೊಂಡಂತೆ ನಡೆಯಲೇ ಇಲ್ಲ ಶಾರುಖ್ ಖಾನ್ ಪ್ಲಾನ್; ‘ಜವಾನ್​’ಗೆ ಹಿನ್ನಡೆ
ಶಾರುಖ್ ಖಾನ್
Follow us
|

Updated on: May 05, 2023 | 7:18 AM

ದೊಡ್ಡ ಬಜೆಟ್​ ಚಿತ್ರಗಳನ್ನು ಅಂದುಕೊಂಡ ಡೇಟ್​ಗೆ ರಿಲೀಸ್ ಮಾಡೋದು ದೊಡ್ಡ ಚಾಲೆಂಜ್​. ಹೀರೋಗಳಿಗೆ ಇರುವ ಬೇರೆ ಕಮಿಟ್​ಮೆಂಟ್, ಶೂಟಿಂಗ್ ವೇಳೆ ಆಗುವ ತೊಂದರೆ ಮತ್ತಿತ್ಯಾದಿ ವಿಚಾರಗಳಿಂದ ರಿಲೀಸ್ ಡೇಟ್ ಮುಂದಕ್ಕೆ ಹಾಕಿಕೊಳ್ಳಬೇಕಾದ ಅನಿವಾರ್ಯತೆ ಬರುತ್ತದೆ. ಈಗ ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್’ (Jawan Movie) ಚಿತ್ರಕ್ಕೂ ಹಾಗೆಯೇ ಆಗಿದೆ. ಈ ಚಿತ್ರವನ್ನು ಜೂನ್ 2ರಂದು ತೆರೆಗೆ ತರಬೇಕು ಎಂದು ತಂಡ ಟಾರ್ಗೆಟ್ ಇಟ್ಟುಕೊಂಡಿತ್ತು. ಆದರೆ, ಅದು ತಲೆಕೆಳಗಾಗಿದೆ. ‘ಜವಾನ್​’ ಸಿನಿಮಾ ಅಂದುಕೊಂಡ ಡೇಟ್​ಗೆ ರಿಲೀಸ್ ಆಗುತ್ತಿಲ್ಲ.

ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ಬ್ಯಾಕ್​ ಟು ಬ್ಯಾಕ್ ಸಿನಿಮಾ ಮಾಡಿ ಜನಪ್ರಿಯತೆ ಪಡೆದವರು ಅಟ್ಲೀ. ಅವರು ‘ಜವಾನ್’ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಶಾರುಖ್ ಖಾನ್ ನಟನೆಯ ಈ ಚಿತ್ರಕ್ಕೆ ನಯನತಾರಾ ನಾಯಕಿ. ವಿಜಯ್ ಸೇತುಪತಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಾರುಖ್ ಒಡೆತನದ ರೆಡ್ ಚಿಲ್ಲೀಸ್​ ಎಂಟರ್​ಟೇನ್​ಮೆಂಟ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಸಿನಿಮಾದ ಕೆಲಸಗಳು ವಿಳಂಬ ಆಗಿವೆ.

‘ಪಠಾಣ್’ ಸಿನಿಮಾ ಗೆದ್ದ ಬಳಿಕ ಶಾರುಖ್ ‘ಜವಾನ್​’ ಸಿನಿಮಾ ಚಿತ್ರೀಕರಣವನ್ನು ಪೂರ್ಣಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಈ ಚಿತ್ರದ ವಿಎಫ್​ಎಕ್ಸ್ ಕೆಲಸಗಳು ಬಾಕಿ ಉಳಿದಿವೆ. ಅವನ್ನು ಇನ್ನೊಂದು ತಿಂಗಳಲ್ಲಿ ಪೂರ್ಣಗೊಳಿಸೋದು ಅಸಾಧ್ಯ. ಇಷ್ಟೇ ಅಲ್ಲ, ಈ ಮಧ್ಯೆ ಟ್ರೇಲರ್, ಸಾಂಗ್​ಗಳನ್ನು ರಿಲೀಸ್ ಮಾಡೋಕೆ ಆಗುವುದಿಲ್ಲ. ಹೀಗಾಗಿ, ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಿದೆ. ‘ಪಠಾಣ್’ ರೀತಿಯೇ ‘ಜವಾನ್’ ಸಿನಿಮಾದಲ್ಲೂ ಭರ್ಜರಿ ಆ್ಯಕ್ಷನ್ ಇರಲಿದೆ.

ಇದನ್ನೂ ಓದಿ: Shah Rukh Khan: ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ತಳ್ಳಿದ ಶಾರುಖ್​ ಖಾನ್​; ‘ಪಠಾಣ್​’ ಗೆದ್ದ ಮೇಲೆ ಸೊಕ್ಕು ಬಂತಾ?

‘ಪಠಾಣ್​’ ದೇಶಪ್ರೇಮ ಇರುವ ಸಿನಿಮಾ ಆಗಿತ್ತು. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಆಗಿದ್ದು ಚಿತ್ರಕ್ಕೆ ಸಹಕಾರಿ ಆಗಿತ್ತು. ಈಗ ‘ಜವಾನ್’ ಸಿನಿಮಾ ಕೂಡ ಆಗಸ್ಟ್ 15ರ ಸಂದರ್ಭದಲ್ಲಿ ರಿಲೀಸ್ ಮಾಡಿದರೆ ಉತ್ತಮ ಅನ್ನೋದು ಶಾರುಖ್ ಖಾನ್ ಪ್ಲ್ಯಾನ್. ಈ ಸಂದರ್ಭದಲ್ಲಿ ಹಲವು ಸಿನಿಮಾಗಳು ರಿಲೀಸ್​ಗೆ ರೆಡಿ ಇರುತ್ತವೆ. ಅವುಗಳ ಜೊತೆ ‘ಜವಾನ್​’ ಸ್ಪರ್ಧೆಗೆ ಇಳಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

‘ಜವಾನ್’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. ಈ ಚಿತ್ರದಲ್ಲಿ ಶಾರುಖ್ ಅವರು ಸೈನಿಕನ ಪಾತ್ರ ಮಾಡಿದ್ದಾರೆ. ಈ ಸಿನಿಮಾದಿಂದ ಶಾರುಖ್ ಖಾನ್ ಮತ್ತೊಂದು ಗೆಲುವು ಕಾಣುವ ಕನಸು ಕಾಣುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ