AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಪಠಾಣ್​’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ಗೆ ದಿನಾಂಕ ನಿಗದಿ; ಅಂದೇ ಶಾರುಖ್​ ಖಾನ್​ ಭವಿಷ್ಯ ನಿರ್ಧಾರ

Pathaan Advance Ticket Booking: ಮೊದಲ ದಿನವೇ ‘ಪಠಾಣ್​’ ಚಿತ್ರವನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿರುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅವರೆಲ್ಲರೂ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.

Shah Rukh Khan: ‘ಪಠಾಣ್​’ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ಗೆ ದಿನಾಂಕ ನಿಗದಿ; ಅಂದೇ ಶಾರುಖ್​ ಖಾನ್​ ಭವಿಷ್ಯ ನಿರ್ಧಾರ
ಶಾರುಖ್ ಖಾನ್, ದೀಪಿಕಾ ಪಡುಕೋಣೆ
TV9 Web
| Edited By: |

Updated on:Jan 18, 2023 | 9:03 AM

Share

ಬಹುನಿರೀಕ್ಷಿತ ‘ಪಠಾಣ್​’ ಸಿನಿಮಾದ (Pathaan Movie) ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಹತ್ತು ಹಲವು ಕಾರಣಗಳಿಂದಾಗಿ ಈ ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ. ಜನವರಿ 25ರಂದು ಬಿಡುಗಡೆ ಆಗಲಿರುವ ‘ಪಠಾಣ್​’ ಚಿತ್ರ ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಮೂಡಿದೆ. ಶಾರುಖ್​ ಖಾನ್​ (Shah Rukh Khan) ಅಭಿಮಾನಿಗಳು ಈ ಚಿತ್ರವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಬೇಕು ಎಂದು ಕಾದು ಕುಳಿತಿದ್ದಾರೆ. ವಿಶ್ವಾದ್ಯಂತ ಬಿಡುಗಡೆ ಆಗಲಿರುವ ಈ ಚಿತ್ರಕ್ಕೆ ಶೀಘ್ರದಲ್ಲೇ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ (Pathaan Advance Ticket Booking) ಓಪನ್​ ಆಗಲಿದೆ. ಭಾರತದಲ್ಲಿ ಜನವರಿ 20ರಿಂದ ಟಿಕೆಟ್​ ಬುಕ್​ ಮಾಡಬಹುದು. ಅಂದು ಸಿನಿಪ್ರಿಯರಿಂದ ಯಾವ ರೀತಿ ರೆಸ್ಪಾನ್ಸ್​ ಸಿಗಲಿದೆ ಎಂಬುದರ ಆಧಾರದ ಮೇಲೆ ಶಾರುಖ್​ ಖಾನ್​ ಅವರ ಭವಿಷ್ಯ ನಿರ್ಧಾರ ಆಗಲಿದೆ.

ಇದು ಶಾರುಖ್​ ಖಾನ್​ ಅವರ ಕಮ್​ಬ್ಯಾಕ್​ ಸಿನಿಮಾ. ಬರೋಬ್ಬರಿ ನಾಲ್ಕು ವರ್ಷಗಳ ನಂತರ ಅವರು ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಹಾಗಾಗಿ ಅವರ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇದೆ. ಮೊದಲ ದಿನವೇ ‘ಪಠಾಣ್​’ ಚಿತ್ರವನ್ನು ನೋಡಬೇಕು ಎಂದು ಆಸೆ ಇಟ್ಟುಕೊಂಡಿರುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅವರೆಲ್ಲರೂ ಅಡ್ವಾನ್ಸ್​ ಟಿಕೆಟ್​ ಬುಕಿಂಗ್​ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.

Pathaan: ವಿಕಲಚೇತನ ಪ್ರೇಕ್ಷಕರಿಗಾಗಿ ‘ಪಠಾಣ್​’ ಚಿತ್ರಕ್ಕೆ ಆಡಿಯೋ ವಿವರಣೆ, ಸಬ್​ಟೈಟಲ್​ ಅಳವಡಿಸಲು ಕೋರ್ಟ್​ ಸೂಚನೆ

ಇದನ್ನೂ ಓದಿ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Deepika Padukone: ‘ಬೇಷರಂ​ ರಂಗ್​’ ಹಾಡಿನ ವಿವಾದ; ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದಕ್ಕೂ ನೆಟ್ಟಿಗರ ತಕರಾರು
Image
Besharam Rang: ಹೊಸ ಹಾಡಿನಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ದೀಪಿಕಾ; ‘ಪಠಾಣ್​’ ಚಿತ್ರದ ಮೇಲೆ ಹೆಚ್ಚಿತು ನಿರೀಕ್ಷೆ
Image
Besharam Rang: ಕೆಲವೇ ನಿಮಿಷಗಳಲ್ಲಿ 1 ಮಿಲಿಯನ್​ ವೀಕ್ಷಣೆ ಕಂಡ ‘ಪಠಾಣ್​’ ಸಿನಿಮಾ ಹಾಡು​

ಸೆನ್ಸಾರ್​ ಮಂಡಳಿಯಿಂದ ‘ಪಠಾಣ್​’ ಸಿನಿಮಾಗೆ ‘ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಈ ಚಿತ್ರದ ಒಟ್ಟು ಅವಧಿ 2 ಗಂಟೆ 26 ನಿಮಿಷ ಇದೆ. ಭರ್ಜರಿ ಸಾಹಸ ದೃಶ್ಯಗಳನ್ನು ನೋಡಲು ಪ್ರೇಕ್ಷಕರು ಕಾದಿದ್ದಾರೆ. ತುಂಬ ಅದ್ದೂರಿಯಾಗಿ ಈ ಚಿತ್ರವನ್ನು ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿದೆ. ಅಷ್ಟೇ ಗ್ರ್ಯಾಂಡ್​ ಆಗಿ ವಿಶ್ವಾದ್ಯಂತ ರಿಲೀಸ್​ ಮಾಡಲಾಗುತ್ತಿದೆ.

Shah Rukh Khan: ಭಾರತದಲ್ಲಿ ‘ಪಠಾಣ್​’ ಚಿತ್ರಕ್ಕೆ ವಿರೋಧ; ದುಬೈಗೆ ಹೋಗಿ ಸಿನಿಮಾ ಪ್ರಚಾರ ಮಾಡಿದ ಶಾರುಖ್​ ಖಾನ್​

ಸಿದ್ದಾರ್ಥ್​ ಆನಂದ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಆ ಕಾರಣದಿಂದಲೂ ಹೈಪ್​ ಹೆಚ್ಚಿದೆ. ಶಾರುಖ್​ ಖಾನ್​ ಅವರಿಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ವಿಲನ್​ ಪಾತ್ರದಲ್ಲಿ ಜಾನ್​ ಅಬ್ರಾಹಂ ನಟಿಸಿದ್ದಾರೆ. ವಿವಿಧ ದೇಶಗಳಲ್ಲಿ ‘ಪಠಾಣ್​’ ಚಿತ್ರೀಕರಣ ಮಾಡಲಾಗಿದೆ. ಶಾರುಖ್​ ಖಾನ್​ ಅವರ ಗೆಟಪ್​ ಗಮನ ಸೆಳೆಯುತ್ತಿದೆ.

Shah Rukh Khan: ‘ಪಠಾಣ್​’ ಚಿತ್ರದಲ್ಲಿ ‘ಪ್ರಧಾನ ಮಂತ್ರಿ’ ಪದಕ್ಕೆ ಕತ್ತರಿ ಹಾಕಿದ ಸೆನ್ಸಾರ್​ ಮಂಡಳಿ; 13 ಕಡೆಗಳಲ್ಲಿ ಬದಲಾವಣೆ

‘ಪಠಾಣ್​’ ಚಿತ್ರಕ್ಕೆ ಒಂದು ವರ್ಗದ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಸಿನಿಮಾದ ‘ಬೇಷರಂ ರಂಗ್​..’ ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಿಕಿನಿಗೆ ಕೆಲವರು ಕಿರಿಕ್​ ಮಾಡಿದ್ದಾರೆ. ಆದರೆ ಟ್ರೇಲರ್​ನಲ್ಲಿ ದೇಶಭಕ್ತಿ ಕಥಾಹಂದರ ಇರುವುದು ಕಂಡು ಒಂದಷ್ಟು ಮಂದಿ ಸೈಲೆಂಟ್​ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:00 am, Wed, 18 January 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?