AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Movie: ಪಾಕಿಸ್ತಾನದಲ್ಲಿ ‘ಪಠಾಣ್​’ ಚಿತ್ರದ ಅಕ್ರಮ ಪ್ರದರ್ಶನ; ಕಾನೂನು ಕ್ರಮ ಕೈಗೊಂಡ ಸೆನ್ಸಾರ್​ ಮಂಡಳಿ

Shah Rukh Khan Fans | Pakistan: ಕರಾಚಿಯಲ್ಲಿ ‘ಪಠಾಣ್​’ ಸಿನಿಮಾವನ್ನು ಕಾನೂನು ಬಾಹಿರವಾಗಿ ಪ್ರದರ್ಶಿಸಲಾಗಿದೆ. ಆನ್​ಲೈನ್​ ಮೂಲಕ 900 ರೂಪಾಯಿ ಬೆಲೆಗೆ ಟಿಕೆಟ್​ ಮಾರಾಟ ಮಾಡಲಾಗಿದೆ.

Pathaan Movie: ಪಾಕಿಸ್ತಾನದಲ್ಲಿ ‘ಪಠಾಣ್​’ ಚಿತ್ರದ ಅಕ್ರಮ ಪ್ರದರ್ಶನ; ಕಾನೂನು ಕ್ರಮ ಕೈಗೊಂಡ ಸೆನ್ಸಾರ್​ ಮಂಡಳಿ
ಶಾರುಖ್ ಖಾನ್
ಮದನ್​ ಕುಮಾರ್​
|

Updated on: Feb 06, 2023 | 3:15 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಪಾಕಿಸ್ತಾನದಲ್ಲೂ ಅವರನ್ನು ಇಷ್ಟಪಡುವ ಜನರು ಸಾಕಷ್ಟು ಮಂದಿ ಇದ್ದಾರೆ. ಆದರೆ ಕಾರಣಾಂತರಗಳಿಂದ ಅಲ್ಲಿ ಭಾರತದ ಸಿನಿಮಾಗಳು ರಿಲೀಸ್​ ಆಗುತ್ತಿಲ್ಲ. ‘ಪಠಾಣ್​’ ಚಿತ್ರದ ಪ್ರದರ್ಶನಕ್ಕೆ ಪಾಕಿಸ್ತಾನದಲ್ಲಿ (Pakistan) ಅವಕಾಶ ಸಿಕ್ಕಿಲ್ಲ. ಹಾಗಿದ್ದರೂ ಕೂಡ ಕೆಲವರು ಈ ಸಿನಿಮಾವನ್ನು ಕದ್ದುಮುಚ್ಚಿ ನೋಡಿದ್ದಾರೆ. ಅಕ್ರಮವಾಗಿ ‘ಪಠಾಣ್​’ ಚಿತ್ರವನ್ನು ಪ್ರದರ್ಶನ ಮಾಡಿದವರ ಮೇಲೆ ಅಲ್ಲಿನ ಸೆನ್ಸಾರ್​ ಮಂಡಳಿ ಕ್ರಮ ಕೈಗೊಂಡಿದೆ ಎಂದು ವರದಿ ಆಗಿದೆ. ವಿಶ್ವಾದ್ಯಂತ ‘ಪಠಾಣ್​’ ಸಿನಿಮಾ (Pathaan Movie) ಅಬ್ಬರಿಸುತ್ತಿದೆ. ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆದರೆ ಪಾಕ್​ನಲ್ಲಿರುವ ಶಾರುಖ್​ ಖಾನ್​ ಅಭಿಮಾನಿಗಳು ಈ ಚಿತ್ರವನ್ನು ಮಿಸ್​ ಮಾಡಿಕೊಂಡಿದ್ದಾರೆ.

ಸಿದ್ದಾರ್ಥ್​ ಆನಂದ್​ ಅವರು ‘ಪಠಾಣ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ದೀಪಿಕಾ ಪಡುಕೋಣೆ, ಜಾನ್​ ಅಬ್ರಾಹಂ ಕೂಡ ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಕರಾಚಿಯಲ್ಲಿ ‘ಪಠಾಣ್​’ ಸಿನಿಮಾವನ್ನು ಕಾನೂನು ಬಾಹಿರವಾಗಿ ಪ್ರದರ್ಶಿಸಲಾಗುತ್ತಿತ್ತು. ಆನ್​ಲೈನ್​ ಮೂಲಕ 900 ರೂಪಾಯಿ ಬೆಲೆಗೆ ಟಿಕೆಟ್​ ಮಾರಾಟ ಮಾಡಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಅಲ್ಲಿನ ಸೆನ್ಸಾರ್​ ಮಂಡಳಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ‘ಪಠಾಣ್​’ ಪ್ರದರ್ಶನವನ್ನು ಕೂಡಲೇ ನಿಲ್ಲಿಸಿದ್ದಾರೆ.

ಇದನ್ನೂ ಓದಿ: Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಸೆನ್ಸಾರ್​ ಮಂಡಳಿಯಿಂದ ಸೂಕ್ತ ಪ್ರಮಾಣಪತ್ರ ಸಿಗದ ಹೊರತು ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳು ಯಾವುದೇ ಸಿನಿಮಾವನ್ನು ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಿ ಪ್ರದರ್ಶನ ಮಾಡುವಂತಿಲ್ಲ. ಈ ನಿಯಮ ಉಲ್ಲಂಘಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ಸೆನ್ಸಾರ್​ ಮಂಡಳಿ ತಿಳಿಸಿದೆ ಎಂದು ವರದಿ ಆಗಿದೆ.

ಬಾಂಗ್ಲಾದೇಶದಿಂದ ಭಾರತಕ್ಕೆ ಬಂದು ‘ಪಠಾಣ್​’ ನೋಡಿದ ಫ್ಯಾನ್ಸ್​:

ಕಾನೂನಿನ ಕೆಲವು ಅಡೆತಡೆಗಳ ಕಾರಣದಿಂದಾಗಿ ಬಾಂಗ್ಲಾದೇಶದಲ್ಲಿ ‘ಪಠಾಣ್​’ ಸಿನಿಮಾ ರಿಲೀಸ್​ ಆಗಿಲ್ಲ. ಆದರೆ ಅಲ್ಲಿರುವ ಶಾರುಖ್​ ಖಾನ್​ ಅಭಿಮಾನಿಗಳ ಉತ್ಸಾಹ ಕಡಿಮೆಯಾಗಿಲ್ಲ. ಹೇಗಾದರೂ ಮಾಡಿ ತಮ್ಮ ನೆಚ್ಚಿನ ನಟ ಸಿನಿಮಾ ನೋಡಲೇಬೇಕು ಎಂಬ ಹಠದಿಂದ ಕೆಲವು ಅಭಿಮಾನಿಗಳು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತದ ತ್ರಿಪುರಕ್ಕೆ ಬಂದು ‘ಪಠಾಣ್​’ ಚಿತ್ರವನ್ನು ನೋಡಿದ್ದಾರೆ.

ಇದನ್ನೂ ಓದಿ: Shah Rukh Khan: ‘ಪಠಾಣ್​’ ಕಲೆಕ್ಷನ್​ ಇಷ್ಟೇನಾ ಅಂತ ಕೇಳಿದವರಿಗೆ ಸಾವಿರಾರು ಕೋಟಿ ಲೆಕ್ಕ ನೀಡಿದ ಶಾರುಖ್​ ಖಾನ್​

ತ್ರಿಪುರದಲ್ಲಿನ ಚಿತ್ರಮಂದಿರದ ಮಾಲೀಕರೊಬ್ಬರು ಈ ವಿಚಾರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ‘ಇದು ನಿಜಕ್ಕೂ ಗ್ರೇಟ್​. ಜನರು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದು ‘ಪಠಾಣ್​’ ಸಿನಿಮಾವನ್ನು ನೋಡಿದ್ದಾರೆ. ನಮ್ಮ ‘ರೂಪಸಿ’ ಚಿತ್ರಮಂದಿರಕ್ಕೆ ಬಂದಿದ್ದಕ್ಕೆ ಧನ್ಯವಾದಗಳು’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು