AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ದೇಶದಲ್ಲಿ ಬೊಬ್ಬಿರಿದ ‘ಪಠಾಣ್’ ಸಿನಿಮಾ; ವೀಕೆಂಡ್​ನಲ್ಲಿ ಹುಡುಕಿದರೂ ಸಿಗುತ್ತಿಲ್ಲ ಟಿಕೆಟ್

ಬಾಂಗ್ಲಾದೇಶದಲ್ಲಿ ವರ್ಷಕ್ಕೆ 10 ವಿದೇಶಿ ಸಿನಿಮಾಗಳನ್ನು ಪ್ರದರ್ಶನ ಮಾಡಲು ಅವಕಾಶ ನೀಡಲಾಗಿದೆ. ಈ ಅವಕಾಶ ಸಿಕ್ಕ ಬೆನ್ನಲ್ಲೇ ‘ಪಠಾಣ್’ ರಿಲೀಸ್ ಮಾಡಲಾಗಿದೆ.

ಬಾಂಗ್ಲಾ ದೇಶದಲ್ಲಿ ಬೊಬ್ಬಿರಿದ ‘ಪಠಾಣ್’ ಸಿನಿಮಾ; ವೀಕೆಂಡ್​ನಲ್ಲಿ ಹುಡುಕಿದರೂ ಸಿಗುತ್ತಿಲ್ಲ ಟಿಕೆಟ್
ಪಠಾಣ್ ಸಿನಿಮಾ ಪೋಸ್ಟರ್​
Follow us
ರಾಜೇಶ್ ದುಗ್ಗುಮನೆ
|

Updated on: May 13, 2023 | 6:30 AM

ಶಾರುಖ್ ಖಾನ್ (Shah Rukh Khan) ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಯಾವ ದೇಶದಲ್ಲಿ ರಿಲೀಸ್ ಆದರೂ ಮೆಚ್ಚುಗೆ ಪಡೆಯುತ್ತವೆ. ಇತ್ತೀಚೆಗೆ ರಿಲೀಸ್ ಆದ ‘ಪಠಾಣ್’ ಸಿನಿಮಾ  (Pathaan Movie)ವಿಶ್ವಾದ್ಯಂತ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈಗ ‘ಪಠಾಣ್​’ ಚಿತ್ರ ಬಾಂಗ್ಲಾದೇಶದಲ್ಲಿ ರಿಲೀಸ್ ಆಗಿದೆ. ವೀಕೆಂಡ್ ಶೋನ ಟಿಕೆಟ್​ಗಳು ಸೋಲ್ಡ್​ಔಟ್ ಆಗಿದೆ. ಈ ಚಿತ್ರವನ್ನು ಅಲ್ಲಿನ ಪ್ರೇಕ್ಷಕರು ನೋಡಿ ಖುಷಿಪಡುತ್ತಿದ್ದಾರೆ.

ಬಾಂಗ್ಲಾದೇಶದಲ್ಲಿ ವಿದೇಶಿ ಸಿನಿಮಾಗಳು ರಿಲೀಸ್ ಆಗುತ್ತಿರಲಿಲ್ಲ. ಸ್ಥಳೀಯ ಸಿನಿಮಾಗಳಿಗೆ ಒತ್ತು ನೀಡಬೇಕು ಎಂಬುದು ಅಲ್ಲಿಯವರ ಉದ್ದೇಶ. ಹೀಗಾಗಿ, ಈ ನಿಯಮ ತರಲಾಗಿದೆ. ಈಗ ನಿಯಮ ಬದಲಿಸಲಾಗಿದೆ. ವರ್ಷಕ್ಕೆ 10 ವಿದೇಶಿ ಸಿನಿಮಾಗಳನ್ನು ಪ್ರದರ್ಶನ ಮಾಡಲು ಅವಕಾಶ ನೀಡಲಾಗಿದೆ. ಈ ಅವಕಾಶ ಸಿಕ್ಕ ಬೆನ್ನಲ್ಲೇ ‘ಪಠಾಣ್’ ರಿಲೀಸ್ ಮಾಡಲಾಗಿದೆ.

‘ಪಠಾಣ್’ ಸಿನಿಮಾ ಬಾಂಗ್ಲಾದೇಶದ 48 ಥಿಯೇಟರ್​ಗಳಲ್ಲಿ ರಿಲೀಸ್ ಆಗಿದೆ. ದಿನಕ್ಕೆ 200ಕ್ಕೂ ಅಧಿಕ ಶೋಗಳು ಲಭ್ಯವಾಗಿದೆ. ಮೊದಲ ಎರಡು ದಿನಗಳ ಟಿಕೆಟ್​ಗಳು ಸೋಲ್ಡ್​ಔಟ್ ಆಗಿದೆ. 1971ರ ಬಳಿಕ ಪೂರ್ಣಪ್ರಮಾಣದಲ್ಲಿ ರಿಲೀಸ್ ಆಗುತ್ತಿರುವ ಮೊದಲ ಹಿಂದಿ ಚಿತ್ರ ಇದು ಅನ್ನೋದು ವಿಶೇಷ.

2009ರಲ್ಲಿ ಸಲ್ಮಾನ್ ಖಾನ್ ನಟನೆಯ ‘ವಾಂಟೆಡ್​’ ಚಿತ್ರ ಬಾಂಗ್ಲಾದೇಶದಲ್ಲಿ ರಿಲೀಸ್ ಮಾಡಲಾಯಿತು. ಆದರೆ, ಸ್ಥಳೀಯ ಸಿನಿಮಾ ನಿರ್ಮಾತೃರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಸಿನಿಮಾ ಪ್ರದರ್ಶನ ನಿಲ್ಲಿಸಲಾಯಿತು. ಈಗ ‘ಪಠಾಣ್’ ಚಿತ್ರದ ಮೂಲಕ ಬಾಂಗ್ಲಾದೇಶದವರನ್ನು ರಂಜಿಸಲಾಗುತ್ತಿದೆ.

ಇದನ್ನೂ ಓದಿ: Shah Rukh Khan: ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ತಳ್ಳಿದ ಶಾರುಖ್​ ಖಾನ್​; ‘ಪಠಾಣ್​’ ಗೆದ್ದ ಮೇಲೆ ಸೊಕ್ಕು ಬಂತಾ?

‘ಪಠಾಣ್’ ಚಿತ್ರದಲ್ಲಿ ಶಾರುಖ್ ಖಾನ್​ಗೆ ಜೊತೆಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಜಾನ್ ಅಬ್ರಾಹಂ ಅವರು ವಿಲನ್ ಪಾತ್ರ ಮಾಡಿದ್ದಾರೆ. ಸಲ್ಮಾನ್ ಖಾನ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಭರ್ಜರಿ ಲಾಭ ಕಂಡಿದೆ. ಬಂದ ಲಾಭದಲ್ಲಿ ಶಾರುಖ್ ಖಾನ್​ಗೂ ಪಾಲಿದೆ. ಹೀಗಾಗಿ, ಅವರಿಗೂ ಒಳ್ಳೆಯ ಲಾಭ ಆಗಿದೆ. ಸಿದ್ದಾರ್ಥ್ ಆನಂದ್ ಅವರ ನಿರ್ದೇಶನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?