AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Collection: 1000 ಕೋಟಿ ಕ್ಲಬ್​ ಸನಿಹದಲ್ಲಿ ‘ಪಠಾಣ್​’ ಚಿತ್ರ; ಈಗ ಟಿಕೆಟ್​​ ಬೆಲೆ ಕೇವಲ 110 ರೂಪಾಯಿ

Shah Rukh Khan | Pathaan Movie Total Collection: ‘ಪಠಾಣ್​’ ಚಿತ್ರ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಶಾರುಖ್​ ಖಾನ್​ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ಶೀಘ್ರದಲ್ಲೇ ಈ ಚಿತ್ರ ಸಾವಿರ ಕೋಟಿ ರೂಪಾಯಿ ಗಡಿ ಮುಟ್ಟಲಿದೆ.

Pathaan Collection: 1000 ಕೋಟಿ ಕ್ಲಬ್​ ಸನಿಹದಲ್ಲಿ ‘ಪಠಾಣ್​’ ಚಿತ್ರ; ಈಗ ಟಿಕೆಟ್​​ ಬೆಲೆ ಕೇವಲ 110 ರೂಪಾಯಿ
ಪಠಾಣ್ ಸಿನಿಮಾ ಪೋಸ್ಟರ್
ಮದನ್​ ಕುಮಾರ್​
| Edited By: |

Updated on:Feb 20, 2023 | 6:42 AM

Share

ಶಾರುಖ್​ ಖಾನ್​ ಅವರ ‘ಪಠಾಣ್​’ ಸಿನಿಮಾ (Pathaan Movie) ಜಯಭೇರಿ ಬಾರಿಸಿದೆ. ವಿರೋಧಿಸುವವರು ಎಷ್ಟೇ ಅಪಪ್ರಚಾರ ಮಾಡಿದರೂ ಈ ಸಿನಿಮಾದ ಕಲೆಕ್ಷನ್​ಗೆ ಧಕ್ಕೆ ಆಗಿಲ್ಲ. ಸಿನಿಪ್ರಿಯರು ‘ಪಠಾಣ್​’ ಸಿನಿಮಾವನ್ನು ಮುಗಿಬಿದ್ದು ನೋಡಿದ್ದಾರೆ. ಅದರ ಪರಿಣಾಮವಾಗಿ ವಿಶ್ವಾದ್ಯಂತ ಈ ಚಿತ್ರಕ್ಕೆ 988 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಇದರಿಂದಾಗಿ ಶಾರುಖ್​ ಖಾನ್​ (Shah Rukh Khan) ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಖುಷಿ ಆಗಿದೆ. ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರಲು ಇನ್ನು 12 ಕೋಟಿ ರೂಪಾಯಿ ಮಾತ್ರ ಬಾಕಿ ಇದೆ. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಹೊಸ ಪ್ಲ್ಯಾನ್​ ಮಾಡಲಾಗಿದೆ. ‘ಪಠಾಣ್’ ಚಿತ್ರದ ಟಿಕೆಟ್​ ಬೆಲೆಯನ್ನು (Pathaan Movie Ticket Price) ಕೇವಲ 110 ರೂಪಾಯಿಗೆ ಇಳಿಸಲಾಗಿದೆ.

ಜನವರಿ 25ರಂದು ‘ಪಠಾಣ್​’ ಚಿತ್ರ ತೆರೆಕಂಡಾಗ ಟಿಕೆಟ್​ ಬೆಲೆ ದುಬಾರಿ ಆಗಿತ್ತು. ಆದರೂ ಜನರು ಮುಗಿಬಿದ್ದು ಈ ಸಿನಿಮಾ ನೋಡಿದರು. ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಓಪನಿಂಗ್ ಸಿಕ್ಕಿತು. ಇನ್ನು ಕೆಲವೇ ದಿನಗಳ ಕಾಲ ಚಿತ್ರಮಂದಿರದಲ್ಲಿ ‘ಪಠಾಣ್​’ ಪ್ರದರ್ಶನ ಕಾಣಲಿದೆ. ಅದಕ್ಕಾಗಿ ಟಿಕೆಟ್​ ಬೆಲೆ ತಗ್ಗಿಸಲಾಗಿದೆ. ಸೋಮವಾರದಿಂದ (ಫೆ.20) ಶುಕ್ರವಾರದವರೆಗೆ (ಫೆ.24) ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಕೇವಲ 110 ರೂಪಾಯಿಗೆ ಈ ಚಿತ್ರದ ಟಿಕೆಟ್​ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ

ಹಿಂದಿ, ತೆಲುಗು, ತಮಿಳು ವರ್ಷನ್​ ಸೇರಿ ಭಾರತದಲ್ಲಿ ‘ಪಠಾಣ್​’ ಸಿನಿಮಾ 25 ದಿನಕ್ಕೆ 511 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಅಲ್ಲೊಂದು ಇಲ್ಲೊಂದು ಚಿತ್ರಮಂದಿರಗಳಲ್ಲಿ ಈಗಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಂದರ್ಭದಲ್ಲಿ ಟಿಕೆಟ್​ ಬೆಲೆ ತಗ್ಗಿಸಿದರೆ ಖಂಡಿತವಾಗಿಯೂ ಇನ್ನೂ ಒಂದಷ್ಟು ದಿನಗಳ ಕಾಲ ‘ಪಠಾಣ್​’ ಆಟ ಯಶಸ್ವಿಯಾಗಿ ಮುಂದುವರಿಯಲಿದೆ ಎಂಬುದು ನಿರ್ಮಾಪಕರ ಆಲೋಚನೆ. ಅದಕ್ಕಾಗಿ ವಾರದ ದಿನಗಳಲ್ಲಿ ಟಿಕೆಟ್​ ಬೆಲೆಯನ್ನು 110 ರೂಪಾಯಿಗೆ ಇಳಿಸಲಾಗಿದೆ.

ಇದನ್ನೂ ಓದಿ: Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ

‘ಪಠಾಣ್​’ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಗೆಲುವಿನಿಂದಾಗಿ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಬಾಲಿವುಡ್​ನಲ್ಲಿ ತಾವು ಭರವಸೆಯ ನಿರ್ದೇಶಕ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ. ಈ ಹಿಂದೆ ಸಿದ್ದಾರ್ಥ್​ ಆನಂದ್​ ನಿರ್ದೇಶಿಸಿದ್ದ ‘ವಾರ್​’ ಸಿನಿಮಾ ಕೂಡ ಸೂಪರ್​ ಹಿಟ್​ ಆಗಿತ್ತು.

ಶಾರುಖ್​ ಖಾನ್​ ಅವರಿಗೆ ನಿರೀಕ್ಷೆಗೂ ಮೀರಿದ ಗೆಲುವು ಸಿಕ್ಕಿದೆ. ನಾಲ್ಕು ವರ್ಷದ ಬಳಿಕ ಕಮ್​ಬ್ಯಾಕ್​ ಮಾಡಿದ ಅವರನ್ನು ಜನರು ಒಪ್ಪಿಕೊಂಡಿದ್ದಾರೆ. ಇದರಿಂದ ಶಾರುಖ್​ ವೃತ್ತಿಜೀವನಕ್ಕೆ ಮತ್ತೆ ಕಳೆ ಬಂದಿದೆ. ಅವರ ಮುಂಬರುವ ಸಿನಿಮಾಗಳಿಗಾಗಿ ಪ್ರೇಕ್ಷಕರು ಕಾತರದಿಂದ ಕಾಯುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:00 am, Mon, 20 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್