AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಮತ್ತೆ 3 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಬಿಡುಗಡೆ ಆಗಲಿದೆ ‘ಪಠಾಣ್​’: ಈ ಬಾರಿ ‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿಯುತ್ತಾ?

Pathaan Movie: ಜುಲೈ 13ರಂದು ರಷ್ಯಾ, ತಜಿಕಿಸ್ತಾನ್​, ಅಜರ್​ಬೈಜಾನ್​ ಸೇರಿದಂತೆ ಹಲವು ದೇಶಗಳಲ್ಲಿ ‘ಪಠಾಣ್​’ ಸಿನಿಮಾ ತೆರೆಕಾಣಲಿದೆ. ಇದಕ್ಕಾಗಿ 3 ಸಾವಿರ ಪರದೆಗಳು ಮೀಸಲಾಗಿವೆ.

Shah Rukh Khan: ಮತ್ತೆ 3 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಬಿಡುಗಡೆ ಆಗಲಿದೆ ‘ಪಠಾಣ್​’: ಈ ಬಾರಿ ‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿಯುತ್ತಾ?
ಶಾರುಖ್​ ಖಾನ್​, ದೀಪಿಕಾ ಪಡುಕೋಣೆ
ಮದನ್​ ಕುಮಾರ್​
|

Updated on:Jun 10, 2023 | 8:40 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ಕಮ್​ಬ್ಯಾಕ್​ ಚಿತ್ರವಾಗಿ ಮೂಡಿಬಂದ ‘ಪಠಾಣ್​’ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿದ್ದು ಗೊತ್ತೇ ಇದೆ. ವಿಶ್ವಾದ್ಯಂತ ಈ ಸಿನಿಮಾ 1050 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿತು. ಆ ಯಶಸ್ಸಿನ ಅಲೆಯಲ್ಲಿ ಶಾರುಖ್​ ಖಾನ್​ ತೇಲುತ್ತಿದ್ದಾರೆ. ವಿಶೇಷ ಏನೆಂದರೆ ಈ ಸಿನಿಮಾ ಮತ್ತೆ ರಿಲೀಸ್​ ಆಗುತ್ತಿದೆ. ಹಾಗಂತ ಭಾರತದಲ್ಲಿ ಅಲ್ಲ. ರಷ್ಯಾ ಹಾಗೂ ಇತರೆ ದೇಶಗಳಲ್ಲಿ ‘ಪಠಾಣ್​’ (Pathaan) ಸಿನಿಮಾವನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ, ಅಂದಾಜು 3 ಸಾವಿರಕ್ಕೂ ಅಧಿಕ ಪರದೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾಗಿ ಈ ಚಿತ್ರದ ಟೋಟಲ್​ ಕಲೆಕ್ಷನ್​ ಹೆಚ್ಚಾಗಲಿದೆ. ಯಶ್​ ನಟನೆಯ ‘ಕೆಜಿಎಫ್​ 2’ (KGF 2 Movie) ಸಿನಿಮಾ 1200 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿತ್ತು. ಆ ಚಿತ್ರದ ದಾಖಲೆಯನ್ನು ‘ಪಠಾಣ್​’ ಮುರಿಯಲಿದೆಯೇ ಎಂಬ ಕೌತುಕ ನಿರ್ಮಾಣ ಆಗಿದೆ.

ಶಾರುಖ್​ ಖಾನ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಕೆಲವೇ ದಿನಗಳ ಹಿಂದೆ ‘ಪಠಾಣ್​’ ಸಿನಿಮಾವನ್ನು ಬಾಂಗ್ಲಾದೇಶದಲ್ಲಿ ಬಿಡುಗಡೆ ಮಾಡಲಾಗಿತ್ತು. ಅಲ್ಲಿ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಈಗ ರಷ್ಯಾದಲ್ಲೂ ಅದೇ ರೀತಿ ಜನಮೆಚ್ಚುಗೆ ಸಿಗಬಹುದು ಎಂಬ ನಿರೀಕ್ಷೆ ಇದೆ. ಜುಲೈ 13ರಂದು ರಷ್ಯಾ, ತಜಿಕಿಸ್ತಾನ್​, ಅಜರ್​ಬೈಜಾನ್​ ಸೇರಿದಂತೆ ಹಲವು ದೇಶಗಳಲ್ಲಿ ‘ಪಠಾಣ್​’ ಸಿನಿಮಾ ತೆರೆಕಾಣಲಿದೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ಗೆ ಜೋಡಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ವಿಲನ್​ ಪಾತ್ರದಲ್ಲಿ ಜಾನ್​ ಅಬ್ರಾಹಂ ಕಾಣಿಸಿಕೊಂಡಿದ್ದಾರೆ. ಯಶ್​ ರಾಜ್​ ಫಿಲ್ಮ್ಸ್​ ಮೂಲಕ ನಿರ್ಮಾಣವಾದ ಈ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: Shah Rukh Khan: ತಕ್ಷಣ ನೋಡಿ ಇದು ಶಾರುಖ್​ ಖಾನ್​ ಅಂದುಕೊಳ್ಳಬೇಡಿ; ಈ ವ್ಯಕ್ತಿಯ ಕಥೆ ಬೇರೆಯೇ ಇದೆ

ಶಾರುಖ್​ ಖಾನ್​ ಅವರು ‘ಪಠಾಣ್​’ ಸಿನಿಮಾದ ಗೆಲುವಿನ ಬಳಿಕ ಟ್ರ್ಯಾಕ್​ಗೆ ಮರಳಿದ್ದಾರೆ. ಈಗ ಅವರು ಅಭಿನಯಿಸುತ್ತಿರುವ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ಅತೀ ನಿರೀಕ್ಷಿತ ಮತ್ತು ದುಬಾರಿ ಬಜೆಟ್​ನ ಸಿನಿಮಾ ಎಂಬ ಹೆಗ್ಗಳಿಕೆಗೆ ‘ಜವಾನ್​’ ಪಾತ್ರವಾಗುತ್ತಿದೆ. ಈ ಚಿತ್ರವನ್ನು ಶಾರುಖ್ ಖಾನ್ ಅವರ ‘ರೆಡ್ ಚಿಲ್ಲೀಸ್ ಎಂಟರ್​ಟೈನ್​ಮೆಂಟ್’ ಸಂಸ್ಥೆ ನಿರ್ಮಿಸುತ್ತಿದೆ. ಕಾಲಿವುಡ್​ನ ಜನಪ್ರಿಯ ನಿರ್ದೇಶಕರಾದ ಅಟ್ಲಿ ಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಜವಾನ್’ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿರುವುದರಿಂದ, ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿವೆ. ದೊಡ್ಡ ಮೊತ್ತ ಕೊಟ್ಟು ಹಕ್ಕುಗಳನ್ನು ಖರೀದಿಸಿರುವ ಸುದ್ದಿ ಬಂದಿದೆ.

ಇದನ್ನೂ ಓದಿ: Suhana Khan: ಶಾರುಖ್​ ಖಾನ್​ ಮಗಳು ಸುಹಾನಾ ಖಾನ್​ ವ್ಯಕ್ತಿತ್ವ ಹೇಗಿದೆ? ಎಲ್ಲವನ್ನೂ ವಿವರಿಸಿದ ನೃತ್ಯ ನಿರ್ದೇಶಕ

‘ಜವಾನ್’ ಚಿತ್ರದ ಒಟಿಟಿ, ಸ್ಯಾಟಿಲೈಟ್ ಮತ್ತು ಆಡಿಯೋ ಹಕ್ಕುಗಳಿಗೆ ಬೇರೆಬೇರೆ ಸಂಸ್ಥೆಗಳು ದೊಡ್ಡ ಆಫರ್ ನೀಡಿವೆ ಎನ್ನಲಾಗುತ್ತಿದೆ. ಭಾರಿ ಮೊತ್ತಕ್ಕೆ ಹಕ್ಕುಗಳು ಸೇಲ್​ ಆಗಿರುವ ಸುದ್ದಿ ಇದೆ. ಆದರೆ, ಎಷ್ಟು ಕೋಟಿಗೆ ಹಕ್ಕುಗಳು ಮಾರಾಟವಾಗಿವೆ ಎಂಬ ಮಾಹಿತಿಯನ್ನು ಚಿತ್ರತಂಡದವರು ಬಹಿರಂಗಗೊಳಿಸಿಲ್ಲ. ಆಕ್ಷನ್ ಥ್ರಿಲ್ಲರ್ ಶೈಲಿಯ ‘ಜವಾನ್​’ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಅಭಿನಯಿಸಿದ್ದಾರೆ. ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕರಾದ ಅನಿರುದ್ಧ್ ರವಿಚಂದರ್ ಅವರು ಈ ಚಿತ್ರದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟಿದ್ದಾರೆ. ‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:34 am, Sat, 10 June 23

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!