Pathaan: ಬಾಂಗ್ಲಾದೇಶದಲ್ಲಿ ರಿಲೀಸ್​ ಆಗಲಿದೆ ‘ಪಠಾಣ್​’; 8 ವರ್ಷಗಳ ಬಳಿಕ ಭಾರತದ ಸಿನಿಮಾ ಪ್ರದರ್ಶನಕ್ಕೆ ಅವಕಾಶ

Pathaan release in Bangladesh: ಬಾಂಗ್ಲಾದೇಶದಲ್ಲಿ ಸಿನಿಮಾಗೆ ಸಂಬಂಧಿಸಿದ 19 ಸಂಘಟನೆಗಳು ಒಮ್ಮತದ ನಿರ್ಧಾರಕ್ಕೆ ಬಂದಿವೆ. ಭಾರತದ​ ಚಿತ್ರಗಳನ್ನು ಬಿಡುಗಡೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರ ಅನ್ವಯ ‘ಪಠಾಣ್​’ ಸಿನಿಮಾ ಅಲ್ಲಿ ರಿಲೀಸ್​ ಆಗಲಿದೆ.

Pathaan: ಬಾಂಗ್ಲಾದೇಶದಲ್ಲಿ ರಿಲೀಸ್​ ಆಗಲಿದೆ ‘ಪಠಾಣ್​’; 8 ವರ್ಷಗಳ ಬಳಿಕ ಭಾರತದ ಸಿನಿಮಾ ಪ್ರದರ್ಶನಕ್ಕೆ ಅವಕಾಶ
ಶಾರುಖ್ ಖಾನ್
Follow us
|

Updated on:Feb 21, 2023 | 1:27 PM

ನಟ ಶಾರುಖ್​ ಖಾನ್​ (Shah Rukh Khan) ಅವರಿಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ಸಿನಿಮಾಗಳು ಹಲವು ದೇಶಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತವೆ. ಬಾಂಗ್ಲಾದೇಶದಲ್ಲೂ ಅವರನ್ನು ಇಷ್ಟಪಡುವ ಜನರು ಇದ್ದಾರೆ. ಆದರೆ ಅಲ್ಲಿ ‘ಪಠಾಣ್​’ ಚಿತ್ರ (Pathaan Movie) ಬಿಡುಗಡೆ ಆಗಿರಲಿಲ್ಲ. ಅದಕ್ಕಾಗಿ ಕೆಲವರು ಭಾರತಕ್ಕೆ ಬಂದು ಈ ಸಿನಿಮಾ ನೋಡಿಕೊಂಡು ಹೋಗಿದ್ದರು. ವಿಶೇಷ ಏನೆಂದರೆ, ಈಗ ಬಾಂಗ್ಲಾದೇಶದಲ್ಲಿ ‘ಪಠಾಣ್​’ ರಿಲೀಸ್​ ಮಾಡಲು ಅವಕಾಶ ಸಿಕ್ಕಿದೆ. ಫೆಬ್ರವರಿ 24ರಂದು ಈ ಚಿತ್ರ ಅಲ್ಲಿ ತೆರೆ ಕಾಣಲಿದೆ. ಸುಮಾರು 8 ವರ್ಷಗಳ ಬಳಿಕ ಬಾಂಗ್ಲಾದೇಶದಲ್ಲಿ (Bangladesh) ರಿಲೀಸ್​ ಆಗುತ್ತಿರುವ ಭಾರತದ ಮೊದಲ ಸಿನಿಮಾ ‘ಪಠಾಣ್​’. ಇದರಿಂದ ಚಿತ್ರದ ಟೋಟಲ್​ ಕಲೆಕ್ಷನ್​ ಹೆಚ್ಚಲಿದೆ.

ಹಲವು ದಶಕಗಳಿಂದಲೂ ಭಾರತದ ಸಿನಿಮಾಗಳನ್ನು ಬಾಂಗ್ಲಾದೇಶದಲ್ಲಿ ಬ್ಯಾನ್​ ಮಾಡಲಾಗಿತ್ತು. ಆದರೆ 2015ರಲ್ಲಿ ಸಲ್ಮಾನ್​ ಖಾನ್​ ಅವರು ‘ವಾಂಟೆಡ್​’ ಚಿತ್ರವನ್ನು ಅಲ್ಲಿ ಬಿಡುಗಡೆ ಮಾಡಲಾಗಿತ್ತು. ಆದರೆ ಅಲ್ಲಿನ ಸಿನಿಮಾ ಹೀರೋಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಬಾಲಿವುಡ್​ ಚಿತ್ರಗಳು ರಿಲೀಸ್​ ಆದರೆ ಸ್ಥಳೀಯ ಬಾಂಗ್ಲಾದೇಶಿ ಸಿನಿಮಾಗಳ ವ್ಯವಹಾರಕ್ಕೆ ಪೆಟ್ಟು ಬೀಳಲಿದೆ ಎಂದು ಪ್ರತಿಭಟನೆಗಳು ಕೂಡ ನಡೆದಿದ್ದವು. ಹಾಗಾಗಿ ಭಾರತದ ಸಿನಿಮಾಗಳನ್ನು ಮತ್ತೆ ಬ್ಯಾನ್​ ಮಾಡಲಾಗಿತ್ತು.

ಇದನ್ನೂ ಓದಿ: Pathaan Collection: 1000 ಕೋಟಿ ಕ್ಲಬ್​ ಸನಿಹದಲ್ಲಿ ‘ಪಠಾಣ್​’ ಚಿತ್ರ; ಈಗ ಟಿಕೆಟ್​​ ಬೆಲೆ ಕೇವಲ 110 ರೂಪಾಯಿ

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಆದರೆ ಈಗ ಕಾಲ ಬದಲಾಗಿದೆ. ಬಾಂಗ್ಲಾದೇಶದಲ್ಲಿ ಸಿನಿಮಾ ವ್ಯವಹಾರಕ್ಕೆ ಸಂಬಂಧಿಸಿದ ಸುಮಾರು 19 ಸಂಘಟನೆಗಳು ಈ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದಿವೆ ಎಂದು ವರದಿ ಆಗಿದೆ. ಬಾಲಿವುಡ್​ ಸಿನಿಮಾಗಳನ್ನು ಬಿಡುಗಡೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಿಂದ ಬಾಂಗ್ಲಾದೇಶದಲ್ಲಿ ಹೊಸ ಚರ್ಚೆ ಹುಟ್ಟಿಕೊಂಡಿದೆ. ಈ ನಿರ್ಧಾರದಿಂದ ಚಿತ್ರಮಂದಿರಗಳ ವ್ಯವಹಾರ ಸುಧಾರಿಸಲಿದೆ. ಕೊವಿಡ್​ ನಂತರ ಕಂಗೆಟ್ಟಿದ್ದ ಪ್ರದರ್ಶಕರ ವಲಯಕ್ಕೆ ಅನುಕೂಲ ಆಗಲಿದೆ.

ಇದನ್ನೂ ಓದಿ: Karan Johar: ‘ಪಠಾಣ್​’ ಗೆದ್ದಿದ್ದಕ್ಕೆ ಬಾಲಿವುಡ್​ ಮಂದಿಗೆ ಬಂತು ಧೈರ್ಯ; ದೊಡ್ಡ ಓಪನಿಂಗ್​ಗಾಗಿ​ ನಡೆದಿದೆ ಪ್ಲ್ಯಾನ್​

ಹಾಲಿವುಡ್​ ಸಿನಿಮಾಗಳು ಮೊದಲಿನಿಂದಲೂ ಬಾಂಗ್ಲಾದೇಶದಲ್ಲಿ ತೆರೆಕಾಣುತ್ತಲೇ ಬಂದಿವೆ. ಹಾಗಿರುವಾಗ ಬಾಲಿವುಡ್​ ಚಿತ್ರಗಳನ್ನು ಬ್ಯಾನ್​ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಅಲ್ಲಿನ ಕೆಲವರು ವಾದ ಮಂಡಿಸಿದ್ದಾರೆ. ಭಾರತದ ಸಿನಿಮಾಗಳನ್ನು ತೆರೆಕಾಣಿಸುವ ಬಗ್ಗೆ ಒಂದಷ್ಟು ನಿಯಮಗಳನ್ನು ಹಾಕಿಕೊಳ್ಳಲಾಗಿದೆ. ವರ್ಷಕ್ಕೆ ಕೇವಲ 10 ಸಿನಿಮಾಗಳಿಗೆ ಮಾತ್ರ ಬಿಡುಗಡೆಗೆ ಅವಕಾಶ ನೀಡಬೇಕು ಎಂಬ ನಿಯಮ ಹೇರಲಾಗಿದೆ.

ಇದನ್ನೂ ಓದಿ: Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ

ಹಿಂದಿ ಚಿತ್ರಗಳಿಗೆ ಬಾಂಗ್ಲಾದೇಶದಲ್ಲಿ ಸಖತ್​ ಬೇಡಿಕೆ ಇದೆ. ಈ ಮೊದಲು ‘3 ಈಡಿಯಟ್ಸ್​’, ‘ಮೈ ನೇಮ್​ ಈಸ್​ ಖಾನ್​’ ಮುಂತಾದ ಸಿನಿಮಾಗಳ ಪೈರಸಿ ವರ್ಷನ್​ಗಳನ್ನು ಅಲ್ಲಿನ ಜನರು ನೋಡಿದ್ದರು. ಈಗ ಅಧಿಕೃತವಾಗಿ ಹಿಂದಿ ಚಿತ್ರಗಳು ರಿಲೀಸ್​ ಆಗುತ್ತಿರುವುದು ಬಾಂಗ್ಲಾದೇಶದಲ್ಲಿನ ಬಾಲಿವುಡ್​ ಸಿನಿಪ್ರಿಯರಿಗೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:27 pm, Tue, 21 February 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ