AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ
ಶಾರುಖ್
TV9 Web
| Edited By: |

Updated on: Sep 12, 2023 | 7:40 AM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಸೋಮವಾರದ (ಸೆಪ್ಟೆಂಬರ್ 11) ಪರೀಕ್ಷೆಯಲ್ಲಿ ಪಾಸ್ ಆಗಿದೆ. ಈ ಚಿತ್ರ ವಾರದ ಮೊದಲ ದಿನ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಅಬ್ಬರ ಮುಂದುವರಿದಿದೆ. ಮುಂದಿನ ವಾರ ಗಣೇಶ ಚತುರ್ಥಿ ಪ್ರಯಕ್ತ ಸಾಲು ಸಾಲು ರಜೆಗಳು ಬರುತ್ತಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗಲಿದೆ. ಈ ಚಿತ್ರ ಅನಾಯಾಸವಾಗಿ 500 ಕೋಟಿ ಕ್ಲಬ್ ಸೇರಲಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ (Shah Rukh Khan) ಅವರು ಮತ್ತೊಂದು ಗೆಲುವು ಕಂಡಿದ್ದಾರೆ.

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ. ಈ ಸಿನಿಮಾ ಸೋಮವಾರ ಹಿಂದಿ, ತಮಿಳು ಹಾಗೂ ತೆಲುಗು ವರ್ಷನ್​ನಿಂದ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 316 ಕೋಟಿ ರೂಪಾಯಿ ಆಗಿದೆ.

‘ಜವಾನ್’ ಸಿನಿಮಾ ಕಲೆಕ್ಷನ್ ವಿವರ:

ಗುರುವಾರ (ಸೆಪ್ಟೆಂಬರ್ 7): 75 ಕೋಟಿ ರೂಪಾಯಿ. (ಹಿಂದಿ 65 ಕೋಟಿ ರೂಪಾಯಿ. ತಮಿಳು-ತೆಲುಗು 10 ಕೋಟಿ ರೂಪಾಯಿ)

ಶುಕ್ರವಾರ (ಸೆಪ್ಟೆಂಬರ್ 8): 53.23ಕೋಟಿ ರೂಪಾಯಿ. (ಹಿಂದಿ 46.23 ಕೋಟಿ ರೂಪಾಯಿ. ತಮಿಳು-ತೆಲುಗು 7 ಕೋಟಿ ರೂಪಾಯಿ)

ಶನಿವಾರ (ಸೆಪ್ಟೆಂಬರ್ 9): 77.83 ಕೋಟಿ ರೂಪಾಯಿ. (ಹಿಂದಿ 68.72 ಕೋಟಿ ರೂಪಾಯಿ. ತಮಿಳು-ತೆಲುಗು 9.11 ಕೋಟಿ ರೂಪಾಯಿ)

ಇದನ್ನೂ ಓದಿ: ಅಂಡರ್ವಲ್ಡ್ ಮುಂದೆ ಮಂಡಿಯೂರದ ಏಕೈಕ ಬಾಲಿವುಡ್ ಸ್ಟಾರ್ ಶಾರುಖ್ ಖಾನ್

ಭಾನುವಾರ (ಸೆಪ್ಟೆಂಬರ್ 10): 80.1 ಕೋಟಿ ರೂಪಾಯಿ. (ಹಿಂದಿ 71.63 ಕೋಟಿ ರೂಪಾಯಿ. ತಮಿಳು-ತೆಲುಗು 8.47 ಕೋಟಿ ರೂಪಾಯಿ)

ಸೋಮವಾರ (ಸೆಪ್ಟೆಂಬರ್ 11): 30 ಕೋಟಿ ರೂಪಾಯಿ. ಒಟ್ಟೂ ಕಲೆಕ್ಷನ್ 316 ಕೋಟಿ ರೂಪಾಯಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು