ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ
ಶಾರುಖ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 12, 2023 | 7:40 AM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಸೋಮವಾರದ (ಸೆಪ್ಟೆಂಬರ್ 11) ಪರೀಕ್ಷೆಯಲ್ಲಿ ಪಾಸ್ ಆಗಿದೆ. ಈ ಚಿತ್ರ ವಾರದ ಮೊದಲ ದಿನ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಅಬ್ಬರ ಮುಂದುವರಿದಿದೆ. ಮುಂದಿನ ವಾರ ಗಣೇಶ ಚತುರ್ಥಿ ಪ್ರಯಕ್ತ ಸಾಲು ಸಾಲು ರಜೆಗಳು ಬರುತ್ತಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗಲಿದೆ. ಈ ಚಿತ್ರ ಅನಾಯಾಸವಾಗಿ 500 ಕೋಟಿ ಕ್ಲಬ್ ಸೇರಲಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ (Shah Rukh Khan) ಅವರು ಮತ್ತೊಂದು ಗೆಲುವು ಕಂಡಿದ್ದಾರೆ.

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ. ಈ ಸಿನಿಮಾ ಸೋಮವಾರ ಹಿಂದಿ, ತಮಿಳು ಹಾಗೂ ತೆಲುಗು ವರ್ಷನ್​ನಿಂದ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 316 ಕೋಟಿ ರೂಪಾಯಿ ಆಗಿದೆ.

‘ಜವಾನ್’ ಸಿನಿಮಾ ಕಲೆಕ್ಷನ್ ವಿವರ:

ಗುರುವಾರ (ಸೆಪ್ಟೆಂಬರ್ 7): 75 ಕೋಟಿ ರೂಪಾಯಿ. (ಹಿಂದಿ 65 ಕೋಟಿ ರೂಪಾಯಿ. ತಮಿಳು-ತೆಲುಗು 10 ಕೋಟಿ ರೂಪಾಯಿ)

ಶುಕ್ರವಾರ (ಸೆಪ್ಟೆಂಬರ್ 8): 53.23ಕೋಟಿ ರೂಪಾಯಿ. (ಹಿಂದಿ 46.23 ಕೋಟಿ ರೂಪಾಯಿ. ತಮಿಳು-ತೆಲುಗು 7 ಕೋಟಿ ರೂಪಾಯಿ)

ಶನಿವಾರ (ಸೆಪ್ಟೆಂಬರ್ 9): 77.83 ಕೋಟಿ ರೂಪಾಯಿ. (ಹಿಂದಿ 68.72 ಕೋಟಿ ರೂಪಾಯಿ. ತಮಿಳು-ತೆಲುಗು 9.11 ಕೋಟಿ ರೂಪಾಯಿ)

ಇದನ್ನೂ ಓದಿ: ಅಂಡರ್ವಲ್ಡ್ ಮುಂದೆ ಮಂಡಿಯೂರದ ಏಕೈಕ ಬಾಲಿವುಡ್ ಸ್ಟಾರ್ ಶಾರುಖ್ ಖಾನ್

ಭಾನುವಾರ (ಸೆಪ್ಟೆಂಬರ್ 10): 80.1 ಕೋಟಿ ರೂಪಾಯಿ. (ಹಿಂದಿ 71.63 ಕೋಟಿ ರೂಪಾಯಿ. ತಮಿಳು-ತೆಲುಗು 8.47 ಕೋಟಿ ರೂಪಾಯಿ)

ಸೋಮವಾರ (ಸೆಪ್ಟೆಂಬರ್ 11): 30 ಕೋಟಿ ರೂಪಾಯಿ. ಒಟ್ಟೂ ಕಲೆಕ್ಷನ್ 316 ಕೋಟಿ ರೂಪಾಯಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು