AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ
ಶಾರುಖ್
TV9 Web
| Edited By: |

Updated on: Sep 12, 2023 | 7:40 AM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಸೋಮವಾರದ (ಸೆಪ್ಟೆಂಬರ್ 11) ಪರೀಕ್ಷೆಯಲ್ಲಿ ಪಾಸ್ ಆಗಿದೆ. ಈ ಚಿತ್ರ ವಾರದ ಮೊದಲ ದಿನ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಅಬ್ಬರ ಮುಂದುವರಿದಿದೆ. ಮುಂದಿನ ವಾರ ಗಣೇಶ ಚತುರ್ಥಿ ಪ್ರಯಕ್ತ ಸಾಲು ಸಾಲು ರಜೆಗಳು ಬರುತ್ತಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗಲಿದೆ. ಈ ಚಿತ್ರ ಅನಾಯಾಸವಾಗಿ 500 ಕೋಟಿ ಕ್ಲಬ್ ಸೇರಲಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ (Shah Rukh Khan) ಅವರು ಮತ್ತೊಂದು ಗೆಲುವು ಕಂಡಿದ್ದಾರೆ.

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ. ಈ ಸಿನಿಮಾ ಸೋಮವಾರ ಹಿಂದಿ, ತಮಿಳು ಹಾಗೂ ತೆಲುಗು ವರ್ಷನ್​ನಿಂದ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 316 ಕೋಟಿ ರೂಪಾಯಿ ಆಗಿದೆ.

‘ಜವಾನ್’ ಸಿನಿಮಾ ಕಲೆಕ್ಷನ್ ವಿವರ:

ಗುರುವಾರ (ಸೆಪ್ಟೆಂಬರ್ 7): 75 ಕೋಟಿ ರೂಪಾಯಿ. (ಹಿಂದಿ 65 ಕೋಟಿ ರೂಪಾಯಿ. ತಮಿಳು-ತೆಲುಗು 10 ಕೋಟಿ ರೂಪಾಯಿ)

ಶುಕ್ರವಾರ (ಸೆಪ್ಟೆಂಬರ್ 8): 53.23ಕೋಟಿ ರೂಪಾಯಿ. (ಹಿಂದಿ 46.23 ಕೋಟಿ ರೂಪಾಯಿ. ತಮಿಳು-ತೆಲುಗು 7 ಕೋಟಿ ರೂಪಾಯಿ)

ಶನಿವಾರ (ಸೆಪ್ಟೆಂಬರ್ 9): 77.83 ಕೋಟಿ ರೂಪಾಯಿ. (ಹಿಂದಿ 68.72 ಕೋಟಿ ರೂಪಾಯಿ. ತಮಿಳು-ತೆಲುಗು 9.11 ಕೋಟಿ ರೂಪಾಯಿ)

ಇದನ್ನೂ ಓದಿ: ಅಂಡರ್ವಲ್ಡ್ ಮುಂದೆ ಮಂಡಿಯೂರದ ಏಕೈಕ ಬಾಲಿವುಡ್ ಸ್ಟಾರ್ ಶಾರುಖ್ ಖಾನ್

ಭಾನುವಾರ (ಸೆಪ್ಟೆಂಬರ್ 10): 80.1 ಕೋಟಿ ರೂಪಾಯಿ. (ಹಿಂದಿ 71.63 ಕೋಟಿ ರೂಪಾಯಿ. ತಮಿಳು-ತೆಲುಗು 8.47 ಕೋಟಿ ರೂಪಾಯಿ)

ಸೋಮವಾರ (ಸೆಪ್ಟೆಂಬರ್ 11): 30 ಕೋಟಿ ರೂಪಾಯಿ. ಒಟ್ಟೂ ಕಲೆಕ್ಷನ್ 316 ಕೋಟಿ ರೂಪಾಯಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ