AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ.

ಸೋಮವಾರವೂ ತಗ್ಗಲಿಲ್ಲ ‘ಜವಾನ್’ ಕಲೆಕ್ಷನ್; 300 ಕೋಟಿ ಕ್ಲಬ್ ಸೇರಿದ ಶಾರುಖ್ ಸಿನಿಮಾ
ಶಾರುಖ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 12, 2023 | 7:40 AM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ಸೋಮವಾರದ (ಸೆಪ್ಟೆಂಬರ್ 11) ಪರೀಕ್ಷೆಯಲ್ಲಿ ಪಾಸ್ ಆಗಿದೆ. ಈ ಚಿತ್ರ ವಾರದ ಮೊದಲ ದಿನ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಅಬ್ಬರ ಮುಂದುವರಿದಿದೆ. ಮುಂದಿನ ವಾರ ಗಣೇಶ ಚತುರ್ಥಿ ಪ್ರಯಕ್ತ ಸಾಲು ಸಾಲು ರಜೆಗಳು ಬರುತ್ತಿವೆ. ಇದು ಚಿತ್ರತಂಡಕ್ಕೆ ಸಹಕಾರಿ ಆಗಲಿದೆ. ಈ ಚಿತ್ರ ಅನಾಯಾಸವಾಗಿ 500 ಕೋಟಿ ಕ್ಲಬ್ ಸೇರಲಿದೆ. ಈ ಚಿತ್ರದ ಮೂಲಕ ಶಾರುಖ್ ಖಾನ್ (Shah Rukh Khan) ಅವರು ಮತ್ತೊಂದು ಗೆಲುವು ಕಂಡಿದ್ದಾರೆ.

ಹೈ ಬಜೆಟ್ ಸಿನಿಮಾಗಳು ಬಿಡುಗಡೆ ಆದ ದಿನ, ವಾರಾಂತ್ಯದಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತವೆ. ಆದರೆ, ಸೋಮವಾರ ಚಿತ್ರ ಎಷ್ಟು ಗಳಿಕೆ ಮಾಡಿತು ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ‘ಜವಾನ್’ ಸಿನಿಮಾ ವಾರದ ಮೊದಲ ದಿನವಾದ ಸೋಮವಾರ 30 ಕೋಟಿ ರೂಪಾಯಿ ಬಾಚಿಕೊಂಡು ನಿರ್ಮಾಪಕರ ಮೊಗದಲ್ಲಿ ನಗು ಮೂಡಿಸಿದೆ. ಈ ಸಿನಿಮಾ ಸೋಮವಾರ ಹಿಂದಿ, ತಮಿಳು ಹಾಗೂ ತೆಲುಗು ವರ್ಷನ್​ನಿಂದ 30 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಕಲೆಕ್ಷನ್ 316 ಕೋಟಿ ರೂಪಾಯಿ ಆಗಿದೆ.

‘ಜವಾನ್’ ಸಿನಿಮಾ ಕಲೆಕ್ಷನ್ ವಿವರ:

ಗುರುವಾರ (ಸೆಪ್ಟೆಂಬರ್ 7): 75 ಕೋಟಿ ರೂಪಾಯಿ. (ಹಿಂದಿ 65 ಕೋಟಿ ರೂಪಾಯಿ. ತಮಿಳು-ತೆಲುಗು 10 ಕೋಟಿ ರೂಪಾಯಿ)

ಶುಕ್ರವಾರ (ಸೆಪ್ಟೆಂಬರ್ 8): 53.23ಕೋಟಿ ರೂಪಾಯಿ. (ಹಿಂದಿ 46.23 ಕೋಟಿ ರೂಪಾಯಿ. ತಮಿಳು-ತೆಲುಗು 7 ಕೋಟಿ ರೂಪಾಯಿ)

ಶನಿವಾರ (ಸೆಪ್ಟೆಂಬರ್ 9): 77.83 ಕೋಟಿ ರೂಪಾಯಿ. (ಹಿಂದಿ 68.72 ಕೋಟಿ ರೂಪಾಯಿ. ತಮಿಳು-ತೆಲುಗು 9.11 ಕೋಟಿ ರೂಪಾಯಿ)

ಇದನ್ನೂ ಓದಿ: ಅಂಡರ್ವಲ್ಡ್ ಮುಂದೆ ಮಂಡಿಯೂರದ ಏಕೈಕ ಬಾಲಿವುಡ್ ಸ್ಟಾರ್ ಶಾರುಖ್ ಖಾನ್

ಭಾನುವಾರ (ಸೆಪ್ಟೆಂಬರ್ 10): 80.1 ಕೋಟಿ ರೂಪಾಯಿ. (ಹಿಂದಿ 71.63 ಕೋಟಿ ರೂಪಾಯಿ. ತಮಿಳು-ತೆಲುಗು 8.47 ಕೋಟಿ ರೂಪಾಯಿ)

ಸೋಮವಾರ (ಸೆಪ್ಟೆಂಬರ್ 11): 30 ಕೋಟಿ ರೂಪಾಯಿ. ಒಟ್ಟೂ ಕಲೆಕ್ಷನ್ 316 ಕೋಟಿ ರೂಪಾಯಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ