AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಶಾರುಖ್ ಮಗ ಆರ್ಯನ್ ಖಾನ್ ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದರು. ಇದಾದ ಬಳಿಕ ಅವರ ಹೆಸರು ಸಾಕಷ್ಟು ಚರ್ಚೆ ಆಗಿತ್ತು. ಆ ಬಳಿಕ ಆರ್ಯನ್ ಖಾನ್ ಸ್ವಲ್ಪ ಡಲ್ ಆದರು. ಈಗ ಅವರು ಆ್ಯಕ್ಟೀವ್ ಆಗಿದ್ದಾರೆ. ತಮ್ಮದೇ ಬಟ್ಟೆ ಬ್ರ್ಯಾಂಡ್ ಆರಂಭಿಸಿದ್ದಾರೆ ಆರ್ಯನ್ ಖಾನ್. ಇದರ ಪ್ರಚಾರವನ್ನು ಶಾರುಖ್ ಮಾಡುತ್ತಿದ್ದಾರೆ.

ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್
ಆರ್ಯನ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Feb 26, 2024 | 7:04 AM

Share

ನಟ ಶಾರುಖ್ ಖಾನ್ (Shah Rukh Khan) ಅವರಿಗೆ ಸಖತ್ ಬೇಡಿಕೆ ಇದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಳೆದ ವರ್ಷ ಅವರು ಬ್ಯಾಕ್ ಟು ಬ್ಯಾಕ್ ಮೂರು ಗೆಲುವು ಕಂಡಿದ್ದಾರೆ. ಇದರ ಜೊತೆಗೆ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಇದರ ಜೊತೆಗೆ ಮಗ ಆರ್ಯನ್​ ಖಾನ್ ಒಡೆತನದ ಬಟ್ಟೆ ಬ್ರ್ಯಾಂಡ್ ಕೂಡ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಅವರು ಯಾವುದೇ ಹಣ ಪಡೆಯುತ್ತಿಲ್ಲ. ಈಗ ಅವರು ಮಗನಿಗಾಗಿ ಶರ್ಟ್​ಲೆಸ್ ಅವತಾರ ತಾಳಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಶಾರುಖ್ ಖಾನ್ ಮಗ ಆರ್ಯನ್ ಖಾನ್ ಅವರು ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಇದಾದ ಬಳಿಕ ಅವರ ಹೆಸರು ಸಾಕಷ್ಟು ಚರ್ಚೆ ಆಯಿತು. ಆ ಬಳಿಕ ಆರ್ಯನ್ ಖಾನ್ ಅವರು ಸ್ವಲ್ಪ ಡಲ್ ಆದರು. ಈಗ ಅವರು ಆ್ಯಕ್ಟೀವ್ ಆಗಿದ್ದಾರೆ. ತಮ್ಮದೇ ಬಟ್ಟೆ ಬ್ರ್ಯಾಂಡ್ ಆರಂಭಿಸಿರೋ ಆರ್ಯನ್ ಖಾನ್, ಇದರ ಪ್ರಚಾರಕ್ಕೆ ತಂದೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಶಾರುಖ್ ಖಾನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಶರ್ಟ್​ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅವರು ತಮ್ಮ ಮಗನ ಬಟ್ಟೆ ಬ್ರ್ಯಾಂಡ್​ನ ಟ್ಯಾಗ್ ಮಾಡಿದ್ದಾರೆ. ಈ ಫೋಟೋ 20 ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ತಂದೆಯ ಬೆಂಬಲ ನೋಡಿ ಆರ್ಯನ್ ಖುಷಿಪಟ್ಟಿದ್ದಾರೆ.

ಆರ್ಯನ್ ಖಾನ್ ಬಟ್ಟೆ ಬ್ರ್ಯಾಂಡ್ ಸಖತ್ ದುಬಾರಿ. ಈ ಬಗ್ಗೆ ಅನೇಕರು ತಕರಾರು ತೆಗೆದಿದ್ದಾರೆ. ‘Ask SRK’ ವೇಳೆ ಶಾರುಖ್ ಖಾನ್ ಅವರಿಗೂ ಈ ಬಗ್ಗೆ ದೂರು ನೀಡಲಾಗಿತ್ತು. ‘ಆರ್ಯನ್​ ನನಗೂ ಡಿಸ್ಕೌಂಟ್ ನೀಡುವುದಿಲ್ಲ’ ಎಂದು ಹೇಳುವ ಮೂಲಕ ಶಾರುಖ್ ಖಾನ್ ಎಲ್ಲರ ಬಾಯಿ ಮುಚ್ಚಿಸಿದ್ದರು. ಒಂದು ಜಾಕೆಟ್​ಗೆ ಲಕ್ಷಾಂತರ ರೂಪಾಯಿ ಪಾವತಿಸಬೇಕಿದೆ.

ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ; ಸಮೀರ್ ವಾಂಖೆಡೆ ವಿರುದ್ಧ ಮತ್ತೊಂದು ಕೇಸ್

ಆರ್ಯನ್ ಖಾನ್ ಹೀರೋ ಆಗದೇ ನಿರ್ದೇಶಕನಾಗುವ ಕನಸು ಕಂಡಿದ್ದಾರೆ. ಅವರು ಹೊಸ ವೆಬ್ ಸೀರಿಸ್ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ಶಾರುಖ್ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?