AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್

ಶಾರುಖ್ ಮಗ ಆರ್ಯನ್ ಖಾನ್ ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದಿದ್ದರು. ಇದಾದ ಬಳಿಕ ಅವರ ಹೆಸರು ಸಾಕಷ್ಟು ಚರ್ಚೆ ಆಗಿತ್ತು. ಆ ಬಳಿಕ ಆರ್ಯನ್ ಖಾನ್ ಸ್ವಲ್ಪ ಡಲ್ ಆದರು. ಈಗ ಅವರು ಆ್ಯಕ್ಟೀವ್ ಆಗಿದ್ದಾರೆ. ತಮ್ಮದೇ ಬಟ್ಟೆ ಬ್ರ್ಯಾಂಡ್ ಆರಂಭಿಸಿದ್ದಾರೆ ಆರ್ಯನ್ ಖಾನ್. ಇದರ ಪ್ರಚಾರವನ್ನು ಶಾರುಖ್ ಮಾಡುತ್ತಿದ್ದಾರೆ.

ಮಗನ ಬಟ್ಟೆ ಬ್ರ್ಯಾಂಡ್ ಪ್ರಚಾರ ಮಾಡಲು ಶರ್ಟ್​ಲೆಸ್ ಆಗಿ ಬಂದ ಶಾರುಖ್ ಖಾನ್
ಆರ್ಯನ್-ಶಾರುಖ್
Follow us
ರಾಜೇಶ್ ದುಗ್ಗುಮನೆ
|

Updated on: Feb 26, 2024 | 7:04 AM

ನಟ ಶಾರುಖ್ ಖಾನ್ (Shah Rukh Khan) ಅವರಿಗೆ ಸಖತ್ ಬೇಡಿಕೆ ಇದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಳೆದ ವರ್ಷ ಅವರು ಬ್ಯಾಕ್ ಟು ಬ್ಯಾಕ್ ಮೂರು ಗೆಲುವು ಕಂಡಿದ್ದಾರೆ. ಇದರ ಜೊತೆಗೆ ಅವರು ಹಲವು ಬ್ರ್ಯಾಂಡ್​ಗಳ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆ. ಇದರ ಜೊತೆಗೆ ಮಗ ಆರ್ಯನ್​ ಖಾನ್ ಒಡೆತನದ ಬಟ್ಟೆ ಬ್ರ್ಯಾಂಡ್ ಕೂಡ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಅವರು ಯಾವುದೇ ಹಣ ಪಡೆಯುತ್ತಿಲ್ಲ. ಈಗ ಅವರು ಮಗನಿಗಾಗಿ ಶರ್ಟ್​ಲೆಸ್ ಅವತಾರ ತಾಳಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಶಾರುಖ್ ಖಾನ್ ಮಗ ಆರ್ಯನ್ ಖಾನ್ ಅವರು ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದರು. ಇದಾದ ಬಳಿಕ ಅವರ ಹೆಸರು ಸಾಕಷ್ಟು ಚರ್ಚೆ ಆಯಿತು. ಆ ಬಳಿಕ ಆರ್ಯನ್ ಖಾನ್ ಅವರು ಸ್ವಲ್ಪ ಡಲ್ ಆದರು. ಈಗ ಅವರು ಆ್ಯಕ್ಟೀವ್ ಆಗಿದ್ದಾರೆ. ತಮ್ಮದೇ ಬಟ್ಟೆ ಬ್ರ್ಯಾಂಡ್ ಆರಂಭಿಸಿರೋ ಆರ್ಯನ್ ಖಾನ್, ಇದರ ಪ್ರಚಾರಕ್ಕೆ ತಂದೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಶಾರುಖ್ ಖಾನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಶರ್ಟ್​ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅವರು ತಮ್ಮ ಮಗನ ಬಟ್ಟೆ ಬ್ರ್ಯಾಂಡ್​ನ ಟ್ಯಾಗ್ ಮಾಡಿದ್ದಾರೆ. ಈ ಫೋಟೋ 20 ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ತಂದೆಯ ಬೆಂಬಲ ನೋಡಿ ಆರ್ಯನ್ ಖುಷಿಪಟ್ಟಿದ್ದಾರೆ.

ಆರ್ಯನ್ ಖಾನ್ ಬಟ್ಟೆ ಬ್ರ್ಯಾಂಡ್ ಸಖತ್ ದುಬಾರಿ. ಈ ಬಗ್ಗೆ ಅನೇಕರು ತಕರಾರು ತೆಗೆದಿದ್ದಾರೆ. ‘Ask SRK’ ವೇಳೆ ಶಾರುಖ್ ಖಾನ್ ಅವರಿಗೂ ಈ ಬಗ್ಗೆ ದೂರು ನೀಡಲಾಗಿತ್ತು. ‘ಆರ್ಯನ್​ ನನಗೂ ಡಿಸ್ಕೌಂಟ್ ನೀಡುವುದಿಲ್ಲ’ ಎಂದು ಹೇಳುವ ಮೂಲಕ ಶಾರುಖ್ ಖಾನ್ ಎಲ್ಲರ ಬಾಯಿ ಮುಚ್ಚಿಸಿದ್ದರು. ಒಂದು ಜಾಕೆಟ್​ಗೆ ಲಕ್ಷಾಂತರ ರೂಪಾಯಿ ಪಾವತಿಸಬೇಕಿದೆ.

ಇದನ್ನೂ ಓದಿ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ; ಸಮೀರ್ ವಾಂಖೆಡೆ ವಿರುದ್ಧ ಮತ್ತೊಂದು ಕೇಸ್

ಆರ್ಯನ್ ಖಾನ್ ಹೀರೋ ಆಗದೇ ನಿರ್ದೇಶಕನಾಗುವ ಕನಸು ಕಂಡಿದ್ದಾರೆ. ಅವರು ಹೊಸ ವೆಬ್ ಸೀರಿಸ್ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ಶಾರುಖ್ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್​ಟೇನ್​ಮೆಂಟ್’ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್