AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದ ಮಗ ಆರ್ಯನ್​​ಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡ ಶಾರುಖ್​ ಖಾನ್​

ಕಾರ್ಡಿಲಿಯಾ ಕ್ರೂಸ್ ಶಿಪ್​ನಲ್ಲಿ ಈ ಪಾರ್ಟಿ ನಡೆಯುತ್ತಿತ್ತು. ಆರ್ಯನ್​ ಖಾನ್​ ಸೇರಿ ಸಾಕಷ್ಟು ಪ್ರತಿಷ್ಠಿತ ಕುಟುಂಬದ ಮಕ್ಕಳು ಈ ಪಾರ್ಟಿಗೆ ಹಾಜರಿ ಹಾಕಿದ್ದರು. ಈ ಪಾರ್ಟಿಗೆ ಎಂಟ್ರಿ ಫೀ 80 ಸಾವಿರ ರೂಪಾಯಿ ಇದೆ ಎನ್ನುವ ಬಗ್ಗೆ ವರದಿಯಾಗಿದೆ.

ಡ್ರಗ್​ ಕೇಸ್​ನಲ್ಲಿ ಸಿಕ್ಕಿ ಬಿದ್ದ ಮಗ ಆರ್ಯನ್​​ಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡ ಶಾರುಖ್​ ಖಾನ್​
ಶಾರುಖ್​ ಖಾನ್​ ಕುಟುಂಬ
TV9 Web
| Edited By: |

Updated on: Oct 03, 2021 | 3:42 PM

Share

ಬಾಲಿವುಡ್​ ಖ್ಯಾತ ನಟ ಶಾರುಖ್​ ಖಾನ್​ ನಟನೆಯಿಂದ ಅಂತರ ಕಾಯ್ದುಕೊಂಡು ಕೆಲ ವರ್ಷಗಳು ಕಳೆದಿದ್ದವು. ಈಗ ಅವರು ಖ್ಯಾತ ನಿರ್ದೇಶಕರ ಜತೆ ಸಿನಿಮಾ ಮಾಡೋಕೆ ರೆಡಿ ಆಗಿದ್ದಾರೆ. ಅವರು ಚಿತ್ರೀಕರಣದಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಅವರ ಮಗ ಆರ್ಯನ್​ ಖಾನ್​ ಕುಟುಂಬದ ಘನತೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದಿದೆ. ಇದರಿಂದ ಶಾರುಖ್ ವಿಚಲಿತರಾಗಿದ್ದಾರೆ. ಅಲ್ಲದೆ, ಅವರು ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕಾರ್ಡಿಲಿಯಾ ಕ್ರೂಸ್ ಶಿಪ್​ನಲ್ಲಿ ಈ ಪಾರ್ಟಿ ನಡೆಯುತ್ತಿತ್ತು. ಆರ್ಯನ್​ ಖಾನ್​ ಸೇರಿ ಸಾಕಷ್ಟು ಪ್ರತಿಷ್ಠಿತ ಕುಟುಂಬದ ಮಕ್ಕಳು ಈ ಪಾರ್ಟಿಗೆ ಹಾಜರಿ ಹಾಕಿದ್ದರು. ಈ ಪಾರ್ಟಿಗೆ ಎಂಟ್ರಿ ಫೀ 80 ಸಾವಿರ ರೂಪಾಯಿ ಇದೆ ಎನ್ನುವ ಬಗ್ಗೆ ವರದಿಯಾಗಿದೆ. ರೇವ್​ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಡಿಲಿಯಾ ಕ್ರೂಸ್ ಶಿಪ್​ಮೇಲೆ ದಾಳಿ ನಡೆದಿದೆ. ಈ ವೇಳೆ ಆರ್ಯನ್​ ಅವರನ್ನು ವಶಕ್ಕೆ ಪಡೆಯಲಾಗಿದೆ. ಇಲ್ಲಿಯವರೆಗೆ ಅವರ ಬಂಧನ ಆಗಿಲ್ಲ.

ಮಗನನ್ನು ಎನ್​ಸಿಬಿ ಅವರು ವಶಕ್ಕೆ ಪಡೆಯುತ್ತಿದ್ದಂತೆ ಶಾರುಖ್​ ಖಾನ್​ಗೆ ಟೆನ್ಷನ್​ ಶುರುವಾಗಿದೆ. ಶಾರುಖ್​ ‘ಪಠಾಣ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಹಾಡಿನ ಶೂಟಿಂಗ್​ಗೆ ಅವರು ಸ್ಪೇನ್​ಗೆ ತೆರಳಬೇಕಿತ್ತು. ಆದರೆ, ಮಗನ ಭವಿಷ್ಯದ ದೃಷ್ಟಿಯಿಂದ ಸ್ಪೇನ್​ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಶಾರುಖ್​ ಮುಂಬೈನಲ್ಲಿ ಇದ್ದರೆ ಅವರೇ ಮುಂದೆನಿಂತು ಎಲ್ಲವನ್ನೂ ನೋಡಿಕೊಳ್ಳಬಹುದು. ಒಂದೊಮ್ಮೆ ಸ್ಪೇನ್​ಗೆ ತೆರಳಿದರೆ ಅಲ್ಲಿಂದ ಎಲ್ಲವನ್ನೂ ನಿಭಾಯಿಸುವುದು ಕಷ್ಟ. ಇನ್ನು, ಆರ್ಯನ್​ ವಿರುದ್ಧ ಡ್ರಗ್​ ಕೇಸ್​ ಬೀಳದಂತೆ ನೋಡಿಕೊಳ್ಳುವುದು ಶಾರುಖ್​ಗೆ ತುಂಬಾನೇ ಮುಖ್ಯ. ಒಂದೊಮ್ಮೆ ಆರ್ಯನ್​ ಪ್ರಕರಣ ದಾಖಲಾದರೆ, ಅವರ ವೃತ್ತಿ ಜೀವನಕ್ಕೆ ಹೊಡೆತ ಬೀಳುವ ಸಾಧ್ಯತೆ ಇದೆ. ಈ ಎಲ್ಲಾ ಕಾರಣದಿಂದ ಶಾರುಖ್​ ಮುಂಬೈನಲ್ಲೇ ಇದ್ದು, ಮಗನನ್ನು ಈ ಪ್ರಕರಣದಿಂದ ಹೊರ ತರಲು ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:  ಡ್ರಗ್ಸ್​ ಪಾರ್ಟಿ: ಎನ್​ಸಿಬಿ ಬಲೆಗೆ ಬಿದ್ದ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ