AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ‘ಮಲ್ಲಿಕಾ ಶೆರಾವತ್​ ಜತೆ ನಾನು ಆಟ ಆಡಬಹುದಾ?’: ಶಾರುಖ್​ ಖಾನ್​ ಹಳೇ ವಿಡಿಯೋ ವೈರಲ್​

Koffee With Karan: ‘ಮಲ್ಲಿಕಾ ಶೆರಾವತ್​ ಮೇಲೆ ಆರ್ಯನ್​ ಖಾನ್​ಗೆ ಕ್ರಶ್​ ಆದರೆ ಆತನಿಗೆ ನಿಮ್ಮ ಸಲಹೆ ಏನು?’ ಎಂದು ಶಾರುಖ್​ ಖಾನ್​ಗೆ ಕರಣ್​ ಜೋಹರ್​ ಪ್ರಶ್ನೆ ಮಾಡುತ್ತಾರೆ. ಈ ವಿಡಿಯೋ ಈ ವೈರಲ್​ ಆಗಿದೆ.

Shah Rukh Khan: ‘ಮಲ್ಲಿಕಾ ಶೆರಾವತ್​ ಜತೆ ನಾನು ಆಟ ಆಡಬಹುದಾ?’: ಶಾರುಖ್​ ಖಾನ್​ ಹಳೇ ವಿಡಿಯೋ ವೈರಲ್​
ಮಲ್ಲಿಕಾ ಶೆರಾವತ್, ಶಾರುಖ್ ಖಾನ್
ಮದನ್​ ಕುಮಾರ್​
|

Updated on: May 18, 2023 | 11:54 AM

Share

ಕರಣ್​ ಜೋಹರ್​ ನಡೆಸಿಕೊಡುವ ‘ಕಾಫಿ ವಿತ್​ ಕರಣ್​’ (Koffee With Karan) ಶೋನಲ್ಲಿ ತುಂಬ ಬೋಲ್ಡ್​ ಆದಂತಹ ಪ್ರಶ್ನೆಗಳನ್ನು ಕೇಳಲಾಗುತ್ತದೆ. ವಿವಾದಗಳಿಂದಲೂ ಈ ಕಾರ್ಯಕ್ರಮ ಸುದ್ದಿ ಆಗಿದ್ದುಂಟು. ಇದರ ಹಳೇ ಎಪಿಸೋಡ್​ಗಳನ್ನು ಇಟ್ಟುಕೊಂಡು ಕೂಡ ಜನರು ಟ್ರೋಲ್​ ಮಾಡುತ್ತಾರೆ. ಈಗ ಶಾರುಖ್​ ಖಾನ್​ (Shah Rukh Khan) ಅವರ ಒಂದು ವಿಡಿಯೋ ವೈರಲ್​ ಆಗಿದೆ. ಈ ಹಿಂದೆ ಶಾರುಖ್​ ಖಾನ್​, ರಾಣಿ ಮುಖರ್ಜಿ ಮತ್ತು ಕಾಜೋಲ್​ ಅವರು ಜೊತೆಯಾಗಿ ‘ಕಾಫಿ ವಿತ್​ ಕರಣ್​’ ಶೋನಲ್ಲಿ ಭಾಗಿ ಆಗಿದ್ದರು. ಆಗ ಅವರಿಗೆ ಮಲ್ಲಿಕಾ ಶೆರಾವತ್ (Mallika Sherawat)​ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಶಾರುಖ್​ ಖಾನ್​ ನೀಡಿದ್ದ ಉತ್ತರ ಅಸಭ್ಯವಾಗಿದೆ ಎಂದು ಕೆಲವರು ಈಗ ತಕರಾರು ತೆಗೆದಿದ್ದಾರೆ. ಕೆಲವರು ಶಾರುಖ್​ ಪರವಾಗಿ ಕಮೆಂಟ್​ ಮಾಡುತ್ತಿದ್ದಾರೆ. ಇನ್ನೂ ಕೆಲವರು ನೇರವಾಗಿ ಕರಣ್​ ಜೋಹರ್​ ಅವರನ್ನು ದೂಷಿಸುತ್ತಿದ್ದಾರೆ.

ಏನಿದೆ ವೈರಲ್​ ವಿಡಿಯೋದಲ್ಲಿ?

‘ಒಂದು ವೇಳೆ ಮಲ್ಲಿಕಾ ಶೆರಾವತ್​ ಮೇಲೆ ಆರ್ಯನ್​ ಖಾನ್​ಗೆ ಕ್ರಶ್​ ಆದರೆ ಆತನಿಗೆ ನಿಮ್ಮ ಸಲಹೆ ಏನು?’ ಎಂದು ಶಾರುಖ್​ ಖಾನ್​ಗೆ ಕರಣ್​ ಜೋಹರ್​ ಪ್ರಶ್ನೆ ಮಾಡುತ್ತಾರೆ. ‘ಆಕೆ ಇನ್ನೂ ತುಂಬ ಚಿಕ್ಕವಳು. ಅವಳ ಜೊತೆ ಆರ್ಯನ್​ ಖಾನ್​ಗೆ ಕ್ರಶ್​ ಆದರೆ ಆಟ ಆಡುತ್ತಾನೆ. ನಾನೂ ಕೂಡ ಅವಳ ಜೊತೆ ಸ್ವಲ್ಪ ಹೊತ್ತು ಆಟ ಆಡಬಹುದಾ ಅಂತ ಕೇಳುತ್ತೇನೆ’ ಎಂದು ಶಾರುಖ್​ ಖಾನ್​ ಉತ್ತರಿಸಿದ್ದರು.

ಇದನ್ನೂ ಓದಿ
Image
Shah Rukh Khan Birthday: ಶಾರುಖ್​​ ಜನ್ಮದಿನ; 2023ರ ವರ್ಷ ಪೂರ್ತಿ ಆಗಲಿದೆ ಕಿಂಗ್​ ಖಾನ್ ಸಿನಿಮಾ ಉತ್ಸವ​​
Image
Shah Rukh Khan: ವಿರಾಟ್​ ಕೊಹ್ಲಿ ಪರಾಕ್ರಮದಿಂದ ಪಾಕ್​ಗೆ ಸೋಲು; ಶಾರುಖ್​ ಖಾನ್​ ಹೇಳಿದ್ದೇನು?
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
View this post on Instagram

A post shared by SRK ARMY (@srk__army_)

ಶಾರುಖ್​ ಖಾನ್​ ನೀಡಿದ ಈ ಉತ್ತರ ಕೇಳಿ ಕಾಜೋಲ್​ ಮತ್ತು ರಾಣಿ ಮುಖರ್ಜಿ ಅವರು ಬಿದ್ದಿ ಬಿದ್ದು ನಗುತ್ತಾರೆ. ‘ಇವರು ಕೆಟ್ಟ ಮನಸ್ಥಿತಿಯವರು’ ಎಂದು ಶಾರುಖ್​ ಖಾನ್​ ಹೇಳುತ್ತಾರೆ. ಈ ವಿಡಿಯೋ ಈಗ ವೈರಲ್​ ಆಗಿದೆ. ‘ಇದರಲ್ಲಿ ನಿಜಕ್ಕೂ ಕೆಟ್ಟ ಮನಸ್ಥಿತಿ ಇರುವುದು ಕರಣ್​ ಜೋಹರ್​ಗೆ. ಅವರು ಕೆಟ್ಟ ಪ್ರಶ್ನೆ ಕೇಳಿದ್ದಾರೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಡಾನ್ 3’ ಚಿತ್ರದಿಂದ ಹೊರನಡೆದ ಶಾರುಖ್ ಖಾನ್; ಸಂಭಾವನೆ ವಿಚಾರದಲ್ಲಿ ಕಿರಿಕ್?

ಪ್ರಸ್ತುತ ‘ಡಂಕಿ’ ಮತ್ತು ‘ಜವಾನ್​’ ಚಿತ್ರದ ಕೆಲಸಗಳಲ್ಲಿ ಶಾರುಖ್ ಖಾನ್​ ಬ್ಯುಸಿ ಆಗಿದ್ದಾರೆ. ‘ಜವಾನ್’​ ಸಿನಿಮಾ ಸೆಪ್ಟೆಂಬರ್​ 7ರಂದು ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ಕಾಲಿವುಡ್​ನ ಖ್ಯಾತ ನಿರ್ದೇಶಕ ಅಟ್ಲಿ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರ ನಿರ್ದೇಶನದಲ್ಲಿ ‘ಡಂಕಿ’ ಸಿನಿಮಾ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ