AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್​ಗೆ ‘ಇಡ್ಲಿ ವಡಾ’ ಎಂದು ಸಂಬೋಧಿಸಿದ ಶಾರುಖ್; ಹೇಳಿಕೆಗೆ ಆಪ್ತ ವಲಯದಿಂದಲೇ ಟೀಕೆ

ರಾಧಿಕಾ ಮರ್ಚಂಟ್ ಹಾಗೂ ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಶಾರುಖ್ ಖಾನ್, ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಆಗಮಿಸಿದ್ದರು. ಇವರು ಒಟ್ಟಾಗಿ ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆದರೆ, ಅಂದುಕೊಂಡಂತೆ ಹೆಜ್ಜೆ ಹಾಕೋಕೆ ಸಾಧ್ಯವಾಗಿಲ್ಲ. ಆಗ ರಾಮ್​ ಚರಣ್​​ನ ಕರೆದಿದ್ದಾರೆ ಶಾರುಖ್.

ರಾಮ್ ಚರಣ್​ಗೆ ‘ಇಡ್ಲಿ ವಡಾ’ ಎಂದು ಸಂಬೋಧಿಸಿದ ಶಾರುಖ್; ಹೇಳಿಕೆಗೆ ಆಪ್ತ ವಲಯದಿಂದಲೇ ಟೀಕೆ
ಶಾರುಖ್​-ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on:Mar 06, 2024 | 1:46 PM

Share

ಶಾರುಖ್ ಖಾನ್ (Shah Rukh Khan) ಅವರು ದೊಡ್ಡ ಸ್ಟಾರ್ ಪಟ್ಟ ಪಡೆದಿದ್ದಾರೆ. ಅವರಿಗೆ ಬಾಲಿವುಡ್ ಮಾತ್ರವಲ್ಲದೆ ವಿಶ್ವಾದ್ಯಂತ ಅಭಿಮಾನಿಗಳು ಸೃಷ್ಟಿ ಆಗಿದ್ದಾರೆ. ಶಾರುಖ್ ಖಾನ್ ಅವರು ಎಲ್ಲರ ಜೊತೆಗೂ ಉತ್ತಮ ರೀತಿಯಲ್ಲಿ ನಡೆದುಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಮಾತನಾಡಿದ ರೀತಿ ಅನೇಕರಿಗೆ ಇಷ್ಟ ಆಗಿಲ್ಲ. ‘ಇಡ್ಲಿ ವಡಾ’ ರಾಮ್ ಚರಣ್ ಎಂದು ಕರೆಯುವ ಮೂಲಕ ಶಾರುಖ್ ಕೆಲವರಿಂದ ಟೀಕೆ ಅನುಭವಿಸಿದ್ದಾರೆ. ರಾಮ್ ಚರಣ್ ಆಪ್ತ ಬಳಗದವರೇ ಈ ಬಗ್ಗೆ ಅಪಸ್ವರ ಎತ್ತಿದ್ದಾರೆ.

ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಶಾರುಖ್ ಖಾನ್, ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಆಗಮಿಸಿದ್ದರು. ಇವರು ಒಟ್ಟಾಗಿ ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆದರೆ, ಅಂದುಕೊಂಡಂತೆ ಹೆಜ್ಜೆ ಹಾಕೋಕೆ ಸಾಧ್ಯವಾಗಿಲ್ಲ. ಹೀಗಾಗಿ, ಇವರು ರಾಮ್​ ಚರಣ್ ಅವರನ್ನು ಕರೆಯಲು ಪ್ರಯತ್ನಿಸಿದರು. ಶಾರುಖ್ ಖಾನ್ ಅವರು ತಮಿಳಿನಲ್ಲಿ ಏನೇನೋ ಮಾತನಾಡಿದಂತೆ ಆ್ಯಕ್ಟ್ ಮಾಡಿ ‘ಇಡ್ಲಿ ವಡಾ ರಾಮ್​ ಚರಣ್​ ಎಲ್ಲಿದ್ದೀರಿ’ ಎಂದು ಕೂಗಿದರು. ಈ ಬಗ್ಗೆ ಟೀಕೆ ವ್ಯಕ್ತವಾಗಿದೆ.

ರಾಮ್ ಚರಣ್ ಪತ್ನಿ ಉಪಾಸನಾ ಅವರ ಮೇಕಪರ್ ಆರ್ಟಿಸ್ಟ್​ ಜೆಬಾ ಹಸನ್ ಅವರು ಈ ವಿಚಾರವನ್ನು ಖಂಡಿಸಿದ್ದಾರೆ. ‘ಇದರ ನಂತರ ನಾನು ಹೊರನಡೆದೆ. ರಾಮ್ ಚರಣ್‌ನಂಥ ಸ್ಟಾರ್‌ಗೆ ತುಂಬಾ ಅಗೌರವ’ ಎಂದು ಉಪಾಸನಾ ಮೇಕಪ್ ಆರ್ಟಿಸ್ಟ್ ಬರೆದುಕೊಂಡಿದ್ದಾರೆ. ಜೆಬಾ ಅವರ ಹೇಳಿಕೆಯನ್ನು ಅನೇಕರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್ 

‘ದಕ್ಷಿಣದ ಸ್ಟಾರ್​ಗಳನ್ನು ಟೀಕಿಸುವ ಕೆಲಸ ಮೊದಲಿನಿಂದಲೂ ಆಗುತ್ತಲೇ ಇದೆ. ಆಸ್ಕರ್ ಗೆದ್ದ ಸಿನಿಮಾದ ನಟನಿಗೂ ಈ ರೀತಿ ಅಗೌರವ ಸೂಚಿಸೋದು ಎಷ್ಟು ಸರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಶಾರುಖ್ ಖಾನ್ ಅವರು ತಿಳಿದವರು. ಅವರಿಗೆ ಬಿರಿಯಾನಿ ಶಾರುಖ್ ಖಾನ್ ಎಂದರೆ ಬೇಸರ ಆಗುವುದಿಲ್ಲವೇ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಶಿವಣ್ಣ ಜೊತೆಯೂ ಅವರು ಒಂದು ಸಿನಿಮಾ ಮಾಡುವವರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Tue, 5 March 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ