ರಾಮ್ ಚರಣ್​ಗೆ ‘ಇಡ್ಲಿ ವಡಾ’ ಎಂದು ಸಂಬೋಧಿಸಿದ ಶಾರುಖ್; ಹೇಳಿಕೆಗೆ ಆಪ್ತ ವಲಯದಿಂದಲೇ ಟೀಕೆ

ರಾಧಿಕಾ ಮರ್ಚಂಟ್ ಹಾಗೂ ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಶಾರುಖ್ ಖಾನ್, ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಆಗಮಿಸಿದ್ದರು. ಇವರು ಒಟ್ಟಾಗಿ ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆದರೆ, ಅಂದುಕೊಂಡಂತೆ ಹೆಜ್ಜೆ ಹಾಕೋಕೆ ಸಾಧ್ಯವಾಗಿಲ್ಲ. ಆಗ ರಾಮ್​ ಚರಣ್​​ನ ಕರೆದಿದ್ದಾರೆ ಶಾರುಖ್.

ರಾಮ್ ಚರಣ್​ಗೆ ‘ಇಡ್ಲಿ ವಡಾ’ ಎಂದು ಸಂಬೋಧಿಸಿದ ಶಾರುಖ್; ಹೇಳಿಕೆಗೆ ಆಪ್ತ ವಲಯದಿಂದಲೇ ಟೀಕೆ
ಶಾರುಖ್​-ರಾಮ್ ಚರಣ್
Follow us
|

Updated on:Mar 06, 2024 | 1:46 PM

ಶಾರುಖ್ ಖಾನ್ (Shah Rukh Khan) ಅವರು ದೊಡ್ಡ ಸ್ಟಾರ್ ಪಟ್ಟ ಪಡೆದಿದ್ದಾರೆ. ಅವರಿಗೆ ಬಾಲಿವುಡ್ ಮಾತ್ರವಲ್ಲದೆ ವಿಶ್ವಾದ್ಯಂತ ಅಭಿಮಾನಿಗಳು ಸೃಷ್ಟಿ ಆಗಿದ್ದಾರೆ. ಶಾರುಖ್ ಖಾನ್ ಅವರು ಎಲ್ಲರ ಜೊತೆಗೂ ಉತ್ತಮ ರೀತಿಯಲ್ಲಿ ನಡೆದುಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ಅವರು ಮಾತನಾಡಿದ ರೀತಿ ಅನೇಕರಿಗೆ ಇಷ್ಟ ಆಗಿಲ್ಲ. ‘ಇಡ್ಲಿ ವಡಾ’ ರಾಮ್ ಚರಣ್ ಎಂದು ಕರೆಯುವ ಮೂಲಕ ಶಾರುಖ್ ಕೆಲವರಿಂದ ಟೀಕೆ ಅನುಭವಿಸಿದ್ದಾರೆ. ರಾಮ್ ಚರಣ್ ಆಪ್ತ ಬಳಗದವರೇ ಈ ಬಗ್ಗೆ ಅಪಸ್ವರ ಎತ್ತಿದ್ದಾರೆ.

ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಶಾರುಖ್ ಖಾನ್, ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಆಗಮಿಸಿದ್ದರು. ಇವರು ಒಟ್ಟಾಗಿ ‘ಆರ್​ಆರ್​ಆರ್’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆದರೆ, ಅಂದುಕೊಂಡಂತೆ ಹೆಜ್ಜೆ ಹಾಕೋಕೆ ಸಾಧ್ಯವಾಗಿಲ್ಲ. ಹೀಗಾಗಿ, ಇವರು ರಾಮ್​ ಚರಣ್ ಅವರನ್ನು ಕರೆಯಲು ಪ್ರಯತ್ನಿಸಿದರು. ಶಾರುಖ್ ಖಾನ್ ಅವರು ತಮಿಳಿನಲ್ಲಿ ಏನೇನೋ ಮಾತನಾಡಿದಂತೆ ಆ್ಯಕ್ಟ್ ಮಾಡಿ ‘ಇಡ್ಲಿ ವಡಾ ರಾಮ್​ ಚರಣ್​ ಎಲ್ಲಿದ್ದೀರಿ’ ಎಂದು ಕೂಗಿದರು. ಈ ಬಗ್ಗೆ ಟೀಕೆ ವ್ಯಕ್ತವಾಗಿದೆ.

ರಾಮ್ ಚರಣ್ ಪತ್ನಿ ಉಪಾಸನಾ ಅವರ ಮೇಕಪರ್ ಆರ್ಟಿಸ್ಟ್​ ಜೆಬಾ ಹಸನ್ ಅವರು ಈ ವಿಚಾರವನ್ನು ಖಂಡಿಸಿದ್ದಾರೆ. ‘ಇದರ ನಂತರ ನಾನು ಹೊರನಡೆದೆ. ರಾಮ್ ಚರಣ್‌ನಂಥ ಸ್ಟಾರ್‌ಗೆ ತುಂಬಾ ಅಗೌರವ’ ಎಂದು ಉಪಾಸನಾ ಮೇಕಪ್ ಆರ್ಟಿಸ್ಟ್ ಬರೆದುಕೊಂಡಿದ್ದಾರೆ. ಜೆಬಾ ಅವರ ಹೇಳಿಕೆಯನ್ನು ಅನೇಕರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ‘ಡಂಕಿ’ ಸಿನಿಮಾ ಹಾಡಿದ ಅಲ್ಲು ಅರ್ಜುನ್ ಮಗ; ಸ್ವೀಟ್ ಆಗಿ ಉತ್ತರಿಸಿದ ಶಾರುಖ್ ಖಾನ್ 

‘ದಕ್ಷಿಣದ ಸ್ಟಾರ್​ಗಳನ್ನು ಟೀಕಿಸುವ ಕೆಲಸ ಮೊದಲಿನಿಂದಲೂ ಆಗುತ್ತಲೇ ಇದೆ. ಆಸ್ಕರ್ ಗೆದ್ದ ಸಿನಿಮಾದ ನಟನಿಗೂ ಈ ರೀತಿ ಅಗೌರವ ಸೂಚಿಸೋದು ಎಷ್ಟು ಸರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಶಾರುಖ್ ಖಾನ್ ಅವರು ತಿಳಿದವರು. ಅವರಿಗೆ ಬಿರಿಯಾನಿ ಶಾರುಖ್ ಖಾನ್ ಎಂದರೆ ಬೇಸರ ಆಗುವುದಿಲ್ಲವೇ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಶಿವಣ್ಣ ಜೊತೆಯೂ ಅವರು ಒಂದು ಸಿನಿಮಾ ಮಾಡುವವರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Tue, 5 March 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ