AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಮನೆ ಎದುರು ನಿಂತ ಅಭಿಮಾನಿಗಳು; ಬಾಲ್ಕನಿಯಿಂದ ಮೊಬೈಲ್​ ಎಸೆದ ಕಿಂಗ್​ ಖಾನ್​

ಈವರೆಗೂ ಶಾರುಖ್​ ಖಾನ್​ ಓಟಿಟಿ ಪ್ರವೇಶಿಸಿಲ್ಲ. ಇತ್ತ ಅವರ ಸಿನಿಮಾಗಳು ಕೂಡ ಬಾಕ್ಸ್​ಆಫೀಸ್​ನಲ್ಲಿ ಗೆಲ್ಲುತ್ತಿಲ್ಲ. ಹಾಗಾಗಿ ಅವರನ್ನು ಓಟಿಟಿಗೆ ಕರೆದುಕೊಂಡು ಬರಲು ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಸಂಸ್ಥೆ ಪ್ಲ್ಯಾನ್​ ಮಾಡಿದೆ.

ಶಾರುಖ್​ ಮನೆ ಎದುರು ನಿಂತ ಅಭಿಮಾನಿಗಳು; ಬಾಲ್ಕನಿಯಿಂದ ಮೊಬೈಲ್​ ಎಸೆದ ಕಿಂಗ್​ ಖಾನ್​
ಶಾರುಖ್​ ಮನೆ ಎದುರು ನಿಂತ ಅಭಿಮಾನಿಗಳು; ಬಾಲ್ಕನಿಯಿಂದ ಮೊಬೈಲ್​ ಎಸೆದ ಕಿಂಗ್​ ಖಾನ್​
TV9 Web
| Edited By: |

Updated on: Sep 22, 2021 | 5:25 PM

Share

ಶಾರುಖ್​ ಖಾನ್​ ಇತ್ತೀಚೆಗೆ ನಟಿಸಿದ ಸಾಕಷ್ಟು ಸಿನಿಮಾಗಳು ಪ್ಲಾಪ್​ ಆಗಿವೆ. ಹೀಗಾಗಿ, ನಟನೆಯಿಂದ ಅವರು ಬ್ರೇಕ್​ ತೆಗೆದುಕೊಂಡಿದ್ದರು. 2018ರ ಈಚೆಗೆ ಅವರ ಯಾವುದೇ ಸಿನಿಮಾ ತೆರೆಕಂಡಿಲ್ಲ. ಆದರೆ, ಶಾರುಖ್​ ಖಾನ್​ ಬೇಡಿಕೆ ಮಾತ್ರ ಕೊಂಚವೂ ಕುಗ್ಗಿಲ್ಲ. ಅವರು ನಟಿಸುತ್ತಾರೆ ಎಂದರೆ 100 ಕೋಟಿ ಕೊಟ್ಟು ಕಿಂಗ್​ ಖಾನ್​ ಕಾಲ್​ಶೀಟ್​ ಪಡೆಯೋಕೆ ನಿರ್ಮಾಪಕರು ಈಗಲೂ ರೆಡಿ ಇದ್ದಾರೆ. ಈ ಮಧ್ಯೆ ಶಾರುಖ್​ ಮನೆ ಎದುರು ಅಭಿಮಾನಿಗಳು ನೆರೆದಿದ್ದಾರೆ. ಆಗ ಶಾರುಖ್​ ಬಾಲ್ಕನಿಯಿಂದ ಮೊಬೈಲ್​ ಎಸೆದಿದ್ದಾರೆ. ಈ ವಿಡಿಯೋ ಈಗ ಸಾಕಷ್ಟು ವೈರಲ್​ ಆಗಿದೆ.

ಹಾಗಾದರೆ, ಶಾರುಖ್​ ಮೊಬೈಲ್​ ಎಸೆದಿದ್ದೇಕೆ? ಇದಕ್ಕೆ ಉತ್ತರ ಡಿಸ್ನಿ + ಹಾಟ್​ಸ್ಟಾರ್​ ಜಾಹೀರಾತು. ಶಾರುಖ್ ಖಾನ್​ ಬಾಲ್ಕನಿಯಲ್ಲಿ ನಿಂತು ಅವರ ಪಿಎ (ಜಾಹೀರಾತಿನಲ್ಲಿ ರಾಜೇಶ್​ ಜೈಸ್ ಪಿಎ ಪಾತ್ರ ಮಾಡಿದ್ದಾರೆ​) ಜತೆ ಮಾತನಾಡುತ್ತಿರುವುದು ವಿಡಿಯೋದಲ್ಲಿದೆ. ಈ ವೇಳೆ ಡಿಸ್ನಿಯಿಂದ ಕರೆ ಬಂತೇ ಎಂದು ಶಾರುಖ್​ ಪಿಎಯನ್ನು ಪ್ರಶ್ನೆ ಮಾಡುತ್ತಾರೆ. ಇದಕ್ಕೆ ಇಲ್ಲ ಎನ್ನುವ ಉತ್ತರ ಬರುತ್ತದೆ. ಸಿಟ್ಟಾಗುವ ಶಾರುಖ್​ ಮೊಬೈಲ್​ ಎಸೆಯುತ್ತಾರೆ. ಮತ್ತೊಂದು ಜಾಹೀರಾತಿನಲ್ಲಿ ‘ನಿಮ್ಮೊಬ್ಬರನ್ನು ಬಿಟ್ಟು ಉಳಿದೆಲ್ಲ ಸ್ಟಾರ್​ಗಳ ಸಿನಿಮಾ ಹಾಟ್​ಸ್ಟಾರ್​ನಲ್ಲಿದೆ’ ಎನ್ನುತ್ತಾರೆ ಶಾರುಖ್​ ಪಿಎ. ಈ ವಿಡಿಯೋ ಸಾಕಷ್ಟು ಕುತೂಹಲ ಮೂಡಿಸಿದೆ.

ಈವರೆಗೂ ಶಾರುಖ್​ ಖಾನ್​ ಓಟಿಟಿ ಪ್ರವೇಶಿಸಿಲ್ಲ. ಇತ್ತ ಅವರ ಸಿನಿಮಾಗಳು ಕೂಡ ಬಾಕ್ಸ್​ಆಫೀಸ್​ನಲ್ಲಿ ಗೆಲ್ಲುತ್ತಿಲ್ಲ. ಹಾಗಾಗಿ ಅವರನ್ನು ಓಟಿಟಿಗೆ ಕರೆದುಕೊಂಡು ಬರಲು ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಸಂಸ್ಥೆ ಪ್ಲ್ಯಾನ್​ ಮಾಡಿದೆ. ಅದಕ್ಕೆ ಶಾರುಖ್​ ಕೂಡ ಒಪ್ಪಿದ್ದು, ಜಾಹೀರಾತುಗಳ ಮೂಲಕ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. ಅದಕ್ಕೆ ಇತ್ತೀಚೆಗೆ ಸಲ್ಮಾನ್​ ಖಾನ್​ ಕೂಡ ಕೈ ಜೋಡಿಸಿದ್ದರು. ಜಾಹೀರಾತನ್ನು ಶೇರ್​ ಮಾಡಿಕೊಂಡಿರುವ ಅವರು, ‘ಶಾರುಖ್​ ಖಾನ್​ಗೆ ಸ್ವಾಗತ ಮಾಡುವುದಿಲ್ಲವೇ?’ ಎಂದು ಒಂದೇ ಒಂದು ವಾಕ್ಯ ಕ್ಯಾಪ್ಷನ್​ ನೀಡಿದ್ದರು.

ಈ ಜಾಹೀರಾತುಗಳನ್ನು ನೋಡಿದ ಅಭಿಮಾನಿಗಳಿಗೂ ಸಾಕಾಗಿದೆ. ದಯವಿಟ್ಟು ಸಿನಿಮಾ ಘೋಷಣೆ ಮಾಡಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ. ಶಾರುಖ್​ ಸದ್ಯ ‘ಪಠಾಣ್​’ ಹಾಗೂ ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗಳ ಶೂಟಿಂಗ್​ ಆರಂಭಗೊಂಡಿದೆ. ಆದರೆ, ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮಾಡಿದ 30 ಸೆಕೆಂಡ್​ ಕೆಲಸಕ್ಕೆ 50 ಲಕ್ಷ ರೂ. ಸಂಬಳ; ಸಲ್ಲು ಬರೆದಿದ್ದು ಒಂದೇ ವಾಕ್ಯ 

ಶಾರುಖ್ ಖಾನ್ ಹಂಚಿಕೊಂಡ ಗಣೇಶ ಚತುರ್ಥಿಯ ಕುರಿತ ಪೋಸ್ಟ್​ಗೆ ಕಿಡಿ ಕಾರಿದ ಕೆಲ ನೆಟ್ಟಿಗರು; ಕಾರಣವೇನು?

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!