AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್-ಹಿರಾನಿ ಸಿನಿಮಾದಲ್ಲಿ ಹಲವು ಸ್ಟಾರ್​ಗಳು; ‘ಓಂ ಶಾಂತಿ ಓಂ’ ನೆನಪಿಸಿದ ಹೊಸ ಚಿತ್ರ

ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದರಿಂದ ಶಾರುಖ್​ ಸುಮಾರು ಎರಡು ತಿಂಗಳಕಾಲ ಸಿನಿಮಾ ಕೆಲಸದಿಂದ ದೂರ ಉಳಿದುಕೊಂಡಿದ್ದರು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ.

ಶಾರುಖ್-ಹಿರಾನಿ ಸಿನಿಮಾದಲ್ಲಿ ಹಲವು ಸ್ಟಾರ್​ಗಳು; ‘ಓಂ ಶಾಂತಿ ಓಂ’ ನೆನಪಿಸಿದ ಹೊಸ ಚಿತ್ರ
TV9 Web
| Edited By: |

Updated on: Feb 22, 2022 | 3:00 PM

Share

ಶಾರುಖ್​ ಖಾನ್​ (Shah Rukh Khan) ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಓಂ ಶಾಂತಿ ಓಂ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದಿಂದ ಶಾರುಖ್​ ಖಾನ್​ ಅವರ ಬೇಡಿಕೆ ಮತ್ತಷ್ಟು ಹೆಚ್ಚಿತ್ತು. ಈ ಸಿನಿಮಾದ ವಿಶೇಷ ಹಾಡಿನಲ್ಲಿ ಬಾಲಿವುಡ್​ನ ಸಾಕಷ್ಟು ಸೆಲೆಬ್ರಿಟಿಗಳು ಹೆಜ್ಜೆ ಹಾಕಿದ್ದರು. ಈ ಹಾಡಿಗಾಗಿ ದೊಡ್ಡ ಮೊತ್ತವನ್ನೇ ಖರ್ಚು ಮಾಡಲಾಗಿತ್ತು. ಈಗ ಶಾರುಖ್​ ಮುಂದಿನ ಸಿನಿಮಾದಲ್ಲೂ ಹಲವು ಸ್ಟಾರ್​ಗಳು ಇರಲಿದ್ದಾರೆ. ಅವರೆಲ್ಲರದ್ದೂ ಅತಿಥಿ ಪಾತ್ರ ಅನ್ನೋದು ವಿಶೇಷ. ‘ಪಿಕೆ’, ‘3 ಈಡಿಯಟ್ಸ್​’, ‘ಸಂಜು’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ರಾಜ್​ಕುಮಾರ್ ಹಿರಾನಿ (Rajkumar Hirani) ತುಂಬಾನೇ ಕಾಳಜಿವಹಿಸಿ ಸಿನಿಮಾ ಮಾಡುತ್ತಾರೆ. ನಿರ್ದೇಶನಕ್ಕೆ ಇಳಿದು 20 ವರ್ಷವಾಗಿದೆ. ಈವರೆಗೆ ಅವರು ನಿರ್ದೇಶನ ಮಾಡಿದ್ದು 5 ಸಿನಿಮಾ ಮಾತ್ರ. ಇದರಲ್ಲಿ ಯಾವುದೂ ಸೋಲು ಕಂಡಿಲ್ಲ. ಈಗ ಶಾರುಖ್​ ಖಾನ್​ಗೆ ಆ್ಯಕ್ಷನ್​ ಹೇಳೋಕೆ ಅವರು ರೆಡಿ ಆಗಿದ್ದಾರೆ. ಏಪ್ರಿಲ್​ 15ರಂದು ಸಿನಿಮಾ ಸೆಟ್ಟೇರಲಿದೆ.

ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದರಿಂದ ಶಾರುಖ್​ ಸುಮಾರು ಎರಡು ತಿಂಗಳಕಾಲ ಸಿನಿಮಾ ಕೆಲಸದಿಂದ ದೂರ ಉಳಿದುಕೊಂಡಿದ್ದರು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಸಿದ್ದಾರ್ಥ್​ ಆನಂದ್​ ನಿರ್ದೇಶನದ ‘ಪಠಾಣ್​’ ಹಾಗೂ ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಆ್ಯಕ್ಷನ್​ ಕಟ್​ ಹೇಳುತ್ತಿರುವ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಎರಡೂ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಹೀಗಿರುವಾಗಲೇ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಮುಂಬೈನ ಸ್ಟುಡಿಯೋ ಒಂದರಲ್ಲಿ ಪಂಜಾಬ್​ ಗ್ರಾಮದ ಸೆಟ್​ ಹಾಕಲಾಗುತ್ತಿದೆ. ಮಾರ್ಚ್​​ 31ಕ್ಕೆ ಸೆಟ್​ ಸಂಪೂರ್ಣ ಸಿದ್ಧಗೊಳ್ಳಲಿದೆ. ಏಪ್ರಿಲ್​ 15ರ ನಂತರ ಈ ಸೆಟ್​ನಲ್ಲಿ ಶೂಟಿಂಗ್​ ಆರಂಭಗೊಳ್ಳಲಿದೆ. ಮುಂಬೈ ಹಾಗೂ ಇಂಗ್ಲೆಂಡ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯಲಿದೆ.

ತಾಪ್ಸೀ ಪನ್ನು ಚಿತ್ರದ ನಾಯಕಿ. ಬೋಮನ್​ ಇರಾನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬೇರೆಬೇರೆ ಪ್ರದೇಶದಲ್ಲಿ ಕಥೆ ಸಾಗಲಿದ್ದು, ಪ್ರತಿ ಕಡೆಯಲ್ಲಿ ದೊಡ್ಡದೊಡ್ಡ ಸ್ಟಾರ್​ ನಟರ ಆಗಮನ ಆಗಲಿದೆ. ಹಲವು ಸ್ಟಾರ್​ ನಟರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದು ನಿಜವಾದಲ್ಲಿ ಬಾಲಿವುಡ್​ನ ಅನೇಕ ಸ್ಟಾರ್​ಗಳು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.

ಉತ್ತಮ ಜೀವನ ಹುಡುಕಿಕೊಂಡು ಹೀರೋ ಕೆನಡಾಗೆ ತೆರಳುತ್ತಾನೆ. ಅದೂ ಅಕ್ರಮವಾಗಿ. ಅಲ್ಲೇನಾಗುತ್ತದೆ ಎಂಬುದು ಚಿತ್ರದ ಕಥೆ. ರಾಜ್​ಕುಮಾರ್ ಹಿರಾನಿ ಕೆಲಸದ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಅವರು ಈ ಚಿತ್ರವನ್ನು ಹೇಗೆ ಕಟ್ಟಿಕೊಡಲಿದ್ದಾರೆ ಎನ್ನುವ ಕುತೂಹಲ ಸದ್ಯದ್ದು.

ಇದನ್ನೂ ಓದಿ:ಶಾರುಖ್​ ಖಾನ್​ ಹೊಸ ಲುಕ್​ ವೈರಲ್​; ಇದು ಯಾವ ಸಿನಿಮಾ ಪೋಸ್ಟರ್​? 

ತಾವೇ ನಟಿಸಿದ ಹಲವು ಹಿಟ್​ ಚಿತ್ರಗಳನ್ನು ನೋಡಿಯೇ ಇಲ್ಲ ಶಾರುಖ್​ ಖಾನ್​

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ