AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್-ಹಿರಾನಿ ಸಿನಿಮಾದಲ್ಲಿ ಹಲವು ಸ್ಟಾರ್​ಗಳು; ‘ಓಂ ಶಾಂತಿ ಓಂ’ ನೆನಪಿಸಿದ ಹೊಸ ಚಿತ್ರ

ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದರಿಂದ ಶಾರುಖ್​ ಸುಮಾರು ಎರಡು ತಿಂಗಳಕಾಲ ಸಿನಿಮಾ ಕೆಲಸದಿಂದ ದೂರ ಉಳಿದುಕೊಂಡಿದ್ದರು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ.

ಶಾರುಖ್-ಹಿರಾನಿ ಸಿನಿಮಾದಲ್ಲಿ ಹಲವು ಸ್ಟಾರ್​ಗಳು; ‘ಓಂ ಶಾಂತಿ ಓಂ’ ನೆನಪಿಸಿದ ಹೊಸ ಚಿತ್ರ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 22, 2022 | 3:00 PM

Share

ಶಾರುಖ್​ ಖಾನ್​ (Shah Rukh Khan) ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಓಂ ಶಾಂತಿ ಓಂ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದಿಂದ ಶಾರುಖ್​ ಖಾನ್​ ಅವರ ಬೇಡಿಕೆ ಮತ್ತಷ್ಟು ಹೆಚ್ಚಿತ್ತು. ಈ ಸಿನಿಮಾದ ವಿಶೇಷ ಹಾಡಿನಲ್ಲಿ ಬಾಲಿವುಡ್​ನ ಸಾಕಷ್ಟು ಸೆಲೆಬ್ರಿಟಿಗಳು ಹೆಜ್ಜೆ ಹಾಕಿದ್ದರು. ಈ ಹಾಡಿಗಾಗಿ ದೊಡ್ಡ ಮೊತ್ತವನ್ನೇ ಖರ್ಚು ಮಾಡಲಾಗಿತ್ತು. ಈಗ ಶಾರುಖ್​ ಮುಂದಿನ ಸಿನಿಮಾದಲ್ಲೂ ಹಲವು ಸ್ಟಾರ್​ಗಳು ಇರಲಿದ್ದಾರೆ. ಅವರೆಲ್ಲರದ್ದೂ ಅತಿಥಿ ಪಾತ್ರ ಅನ್ನೋದು ವಿಶೇಷ. ‘ಪಿಕೆ’, ‘3 ಈಡಿಯಟ್ಸ್​’, ‘ಸಂಜು’ ಅಂತಹ ಹಿಟ್​ ಚಿತ್ರಗಳನ್ನು ನೀಡಿದ ರಾಜ್​ಕುಮಾರ್ ಹಿರಾನಿ (Rajkumar Hirani) ತುಂಬಾನೇ ಕಾಳಜಿವಹಿಸಿ ಸಿನಿಮಾ ಮಾಡುತ್ತಾರೆ. ನಿರ್ದೇಶನಕ್ಕೆ ಇಳಿದು 20 ವರ್ಷವಾಗಿದೆ. ಈವರೆಗೆ ಅವರು ನಿರ್ದೇಶನ ಮಾಡಿದ್ದು 5 ಸಿನಿಮಾ ಮಾತ್ರ. ಇದರಲ್ಲಿ ಯಾವುದೂ ಸೋಲು ಕಂಡಿಲ್ಲ. ಈಗ ಶಾರುಖ್​ ಖಾನ್​ಗೆ ಆ್ಯಕ್ಷನ್​ ಹೇಳೋಕೆ ಅವರು ರೆಡಿ ಆಗಿದ್ದಾರೆ. ಏಪ್ರಿಲ್​ 15ರಂದು ಸಿನಿಮಾ ಸೆಟ್ಟೇರಲಿದೆ.

ಆರ್ಯನ್​ ಖಾನ್​ ಡ್ರಗ್​ ಕೇಸ್​ನಲ್ಲಿ ಜೈಲು ಸೇರಿದ್ದರಿಂದ ಶಾರುಖ್​ ಸುಮಾರು ಎರಡು ತಿಂಗಳಕಾಲ ಸಿನಿಮಾ ಕೆಲಸದಿಂದ ದೂರ ಉಳಿದುಕೊಂಡಿದ್ದರು. ಆ ಬಳಿಕ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ಸಿದ್ದಾರ್ಥ್​ ಆನಂದ್​ ನಿರ್ದೇಶನದ ‘ಪಠಾಣ್​’ ಹಾಗೂ ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ಆ್ಯಕ್ಷನ್​ ಕಟ್​ ಹೇಳುತ್ತಿರುವ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಎರಡೂ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಹೀಗಿರುವಾಗಲೇ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಮುಂಬೈನ ಸ್ಟುಡಿಯೋ ಒಂದರಲ್ಲಿ ಪಂಜಾಬ್​ ಗ್ರಾಮದ ಸೆಟ್​ ಹಾಕಲಾಗುತ್ತಿದೆ. ಮಾರ್ಚ್​​ 31ಕ್ಕೆ ಸೆಟ್​ ಸಂಪೂರ್ಣ ಸಿದ್ಧಗೊಳ್ಳಲಿದೆ. ಏಪ್ರಿಲ್​ 15ರ ನಂತರ ಈ ಸೆಟ್​ನಲ್ಲಿ ಶೂಟಿಂಗ್​ ಆರಂಭಗೊಳ್ಳಲಿದೆ. ಮುಂಬೈ ಹಾಗೂ ಇಂಗ್ಲೆಂಡ್​ನಲ್ಲಿ ಈ ಸಿನಿಮಾದ ಶೂಟಿಂಗ್​ ನಡೆಯಲಿದೆ.

ತಾಪ್ಸೀ ಪನ್ನು ಚಿತ್ರದ ನಾಯಕಿ. ಬೋಮನ್​ ಇರಾನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬೇರೆಬೇರೆ ಪ್ರದೇಶದಲ್ಲಿ ಕಥೆ ಸಾಗಲಿದ್ದು, ಪ್ರತಿ ಕಡೆಯಲ್ಲಿ ದೊಡ್ಡದೊಡ್ಡ ಸ್ಟಾರ್​ ನಟರ ಆಗಮನ ಆಗಲಿದೆ. ಹಲವು ಸ್ಟಾರ್​ ನಟರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇದು ನಿಜವಾದಲ್ಲಿ ಬಾಲಿವುಡ್​ನ ಅನೇಕ ಸ್ಟಾರ್​ಗಳು ಈ ಸಿನಿಮಾದಲ್ಲಿ ನಟಿಸಲಿದ್ದಾರೆ.

ಉತ್ತಮ ಜೀವನ ಹುಡುಕಿಕೊಂಡು ಹೀರೋ ಕೆನಡಾಗೆ ತೆರಳುತ್ತಾನೆ. ಅದೂ ಅಕ್ರಮವಾಗಿ. ಅಲ್ಲೇನಾಗುತ್ತದೆ ಎಂಬುದು ಚಿತ್ರದ ಕಥೆ. ರಾಜ್​ಕುಮಾರ್ ಹಿರಾನಿ ಕೆಲಸದ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಅವರು ಈ ಚಿತ್ರವನ್ನು ಹೇಗೆ ಕಟ್ಟಿಕೊಡಲಿದ್ದಾರೆ ಎನ್ನುವ ಕುತೂಹಲ ಸದ್ಯದ್ದು.

ಇದನ್ನೂ ಓದಿ:ಶಾರುಖ್​ ಖಾನ್​ ಹೊಸ ಲುಕ್​ ವೈರಲ್​; ಇದು ಯಾವ ಸಿನಿಮಾ ಪೋಸ್ಟರ್​? 

ತಾವೇ ನಟಿಸಿದ ಹಲವು ಹಿಟ್​ ಚಿತ್ರಗಳನ್ನು ನೋಡಿಯೇ ಇಲ್ಲ ಶಾರುಖ್​ ಖಾನ್​

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು